AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇನ್ನು ಮೂರೇ ದಿನ ಲಾಕ್​ಡೌನ್ , ಅಲ್ಲೀಗ ಕೊರೊನಾ ಪರಿಸ್ಥಿತಿ ಹೇಗಿದೆ? ಸಿಎಂ ಅರವಿಂದ ಕೇಜ್ರಿವಾಲ್ ಹೇಳೋದೇನು?

Arvind Kejriwal: ದೆಹಲಿಯಲ್ಲಿ 1,100 ಕೊರೊನಾ ಕೇಸ್ ಮಾತ್ರ ಪತ್ತೆಯಲ್ಲಿದೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ. 1.5 ರಷ್ಟು ಮಾತ್ರ ಇದೆ. ಹಾಗಾಗಿ ಇದು ಆನ್ ಲಾಕ್ ಮಾಡುವ ಸಮಯ- ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ದೆಹಲಿಯಲ್ಲಿ ಇನ್ನು ಮೂರೇ ದಿನ ಲಾಕ್​ಡೌನ್ , ಅಲ್ಲೀಗ ಕೊರೊನಾ ಪರಿಸ್ಥಿತಿ ಹೇಗಿದೆ? ಸಿಎಂ ಅರವಿಂದ ಕೇಜ್ರಿವಾಲ್ ಹೇಳೋದೇನು?
ದೆಹಲಿಯಲ್ಲಿ ಇನ್ನು ಮೂರೇ ದಿನ ಲಾಕ್​ಡೌನ್ , ಅಲ್ಲೀಗ ಕೊರೊನಾ ಪರಿಸ್ಥಿತಿ ಹೇಗಿದೆ? ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳೋದೇನು?
ಸಾಧು ಶ್ರೀನಾಥ್​
|

Updated on:May 28, 2021 | 1:56 PM

Share

ದೆಹಲಿ: ಕೊರೊನಾ ಎರಡನೆಯ ಅಲೆ ದೇಶದಲ್ಲಿ ಜೋರಾಗಿಯೇ ಬೀಸಿತ್ತು. ಆದರೆ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ರಾಷ್ಟ್ರ ರಾಜಧಾನಿ ದೆಹಲಿಗಳಲ್ಲಿ ಈಗ ಪರಿಸ್ಥಿತಿ ಸುಧಾರಿಸುತ್ತಿದೆ. ಅಲ್ಲೀಗ ಕೊರೊನಾ ಮಾರಿ ಈಗ ನಿಯಂತ್ರಣಕ್ಕೆ ಬರುತ್ತಿದೆ. ಇದಕ್ಕೆ ಮುಖ್ಯವಾಗಿ ಕಾರಣವಾಗಿದ್ದು ಲಾಕ್​ಡೌನ್ ಎಂಬ ಮಹಾದಂಡದ ಪ್ರಯೋಗ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವುದರಿಂದ ಅಲ್ಲಿನ್ನು ಮೂರೇ ಮೂರು ದಿನದಲ್ಲಿ ಲಾಕ್​ಡೌನ್ ನಿಯಂತ್ರಣವನ್ನು ತೆಗೆದುಹಾಕಲಾಗುವುದು.

ಮೇ 31ರ ಬಳಿಕ ದೆಹಲಿಯಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡುವುದಾಗಿ ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ 1,100 ಕೊರೊನಾ ಕೇಸ್ ಮಾತ್ರ ಪತ್ತೆಯಲ್ಲಿದೆ. ಕೊರೊನಾ ಟೆಸ್ಟಿಂಗ್ ಪಾಸಿಟಿವಿಟಿ ದರ ಶೇ. 1.5 ರಷ್ಟು ಮಾತ್ರ ಇದೆ. ಹಾಗಾಗಿ ಇದು ಆನ್ ಲಾಕ್ ಮಾಡುವ ಸಮಯ. ಅದಕ್ಕೆ ಜೂನ್​ 1ರಿಂದ ಹಂತಹಂತವಾಗಿ ಲಾಕ್​ಡೌನ್ ಸಡಿಲಿಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶದ ಇತರೆ ಭಾಗಗಳಲ್ಲಿ ಅನ್​ಲಾಕ್​ ಯಾವಾಗ?:

ಈ ಹಿಂದೆ, ದೆಹಲಿಯಲ್ಲಿ ಲಾಕ್​ಡೌನ್ ಇನ್ನೊಂದು ವಾರ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದರಾದರೂ ಇಂದು ಲೆಫ್ಟಿನೆಟ್​ ಗವರ್ನರ್​ ಜೊತೆ ನಡೆದ ಸಭೆಯ ಬಳಿಕ ಲಾಕ್​ಡೌನ್​ ಅನ್ನು ಹಂತಹಂತವಾಗಿ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿದ್ದಾರೆ. ದೆಹಲಿಯಲ್ಲಿ ಇಂತಹ ಬದಲಾವಣೆ ಚೇತೋಹಾರಿಯಾಗಿದ್ದು, ದೇಶದ ಇತರೆ ಭಾಗಗಳಲ್ಲಿಯೂ ಕೊರೊನಾ ನಿಯಂತ್ರಣಕ್ಕೆ ಬಂದರೆ ಲಾಕ್​ಡೌ್​ನ್ ಎಂಬ ಅಸ್ತ್ರ ಶೀಘ್ರವೇ ಸಡಿಲಿಕೆಯಾಗುವ ನಿರೀಕ್ಷೆಯಿದೆ.

ತಾತ್ಕಾಲಿಕವಾಗಿ ದೆಹಲಿಯಲ್ಲಿ ಕೆಲ ಚಟುವಟಿಕೆ ಪುನರ್ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ದೆಹಲಿಯಲ್ಲಿ ಮೇ 31 ರ ಬಳಿಕ ಕಾರ್ಖಾನೆಗಳು ಪುನರ್ ಆರಂಭವಾಗಲಿವೆ. ನಿರ್ಮಾಣ ಚಟುವಟಿಕೆ ಕೂಡ ಪುನರ್ ಆರಂಭಕ್ಕೆ ಸರ್ಕಾರದ ಸೂಚನೆ ‌ನೀಡಲಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

(Delhi to be Unlocked from june 1st says delhi chief minister arvind Kejriwal)

Delhi Extends Lockdown ದೆಹಲಿಯಲ್ಲಿ ಮತ್ತೆ ಲಾಕ್‌ಡೌನ್ ವಿಸ್ತರಣೆ, ಕೊವಿಡ್ ಪ್ರಕರಣ ಕಡಿಮೆ ಆದರೆ ಮಾತ್ರ ಮೇ 31ಕ್ಕೆ ಅನ್​ಲಾಕ್: ಅರವಿಂದ ಕೇಜ್ರಿವಾಲ್

Published On - 1:42 pm, Fri, 28 May 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?