AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿಯ ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್​ಗೆ ಇ-ಮೇಲ್ ಮೂಲಕ ಇಂದು ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ದೆಹಲಿ ಅಗ್ನಿಶಾಮಕ ಇಲಾಖೆಗೆ ಈ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಲಾಯಿತು.

Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ
ಶಾಲೆ
ನಯನಾ ರಾಜೀವ್
|

Updated on: Dec 09, 2024 | 7:58 AM

Share

ದೆಹಲಿಯ ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್​ಗೆ ಇ-ಮೇಲ್ ಮೂಲಕ ಇಂದು ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ದೆಹಲಿ ಅಗ್ನಿಶಾಮಕ ಇಲಾಖೆಗೆ ಈ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಲಾಯಿತು.

ಬೆದರಿಕೆ ಮೇಲ್ ಬಂದ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಮನೆಗೆ ವಾಪಸ್ ಕಳುಹಿಸಿದ್ದು, ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಎರಡೂ ಶಾಲೆಗಳಲ್ಲಿ ತಪಾಸಣೆ ನಡೆಯುತ್ತಿದೆ ಮತ್ತು ಇದುವರೆಗೆ ಅನುಮಾನಾಸ್ಪದವಾದದ್ದೇನೂ ಕಂಡುಬಂದಿಲ್ಲ.

ದೆಹಲಿಯ ಎರಡು ಮತ್ತು ಹೈದರಾಬಾದ್‌ನ ಒಂದು ಸೇರಿದಂತೆ ರಾಷ್ಟ್ರದಾದ್ಯಂತ ಹಲವಾರು ಸಿಆರ್‌ಪಿಎಫ್ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಒಂದು ತಿಂಗಳ ನಂತರ ಈ ಇತ್ತೀಚಿನ ಘಟನೆ ನಡೆದಿದೆ. ಅಕ್ಟೋಬರ್ 21 ರ ರಾತ್ರಿ ತಮಿಳುನಾಡಿನ ಸಿಆರ್‌ಪಿಎಫ್ ಶಾಲೆಗೆ ಮೊದಲ ಬಾರಿಗೆ ಬೆದರಿಕೆ ಬಂದಿದ್ದು, ಅದರ ನಂತರ ದೇಶದ ಎಲ್ಲಾ ಅಂಗಸಂಸ್ಥೆ ಶಾಲೆಗಳಿಗೆ ಎಚ್ಚರಿಕೆಯನ್ನು ಕಳುಹಿಸಲಾಗಿದೆ ಎಂದು ದೆಹಲಿ ಪೊಲೀಸರು ಆ ಸಮಯದಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯ ಪ್ರಶಾಂತ್​ ವಿಹಾರ್​ ಪ್ರದೇಶದಲ್ಲಿ ಮತ್ತೆ ಸ್ಫೋಟ

ಅಕ್ಟೋಬರ್ 20 ರಂದು, ದೆಹಲಿಯ ರೋಹಿಣಿ ಪ್ರದೇಶದಲ್ಲಿ CRPF ಶಾಲೆಯಲ್ಲಿ ಪ್ರಬಲವಾದ ಸ್ಫೋಟ ಕೇಳಿಬಂದಿತ್ತು, ಗೋಡೆಯಲ್ಲಿ ರಂಧ್ರವಾಗಿತ್ತು. ಅದು ಹತ್ತಿರದ ಅಂಗಡಿಗಳು ಮತ್ತು ವಾಹನಗಳನ್ನು ಹಾನಿಗೊಳಿಸಿತ್ತು.

ಖಲಿಸ್ತಾನಿ ಪರ ಗುಂಪು ಟೆಲಿಗ್ರಾಮ್‌ನಲ್ಲಿ ಸ್ಫೋಟದ ಹೊಣೆಗಾರಿಕೆಯನ್ನು ಹೊತ್ತುಕೊಂಡಿತ್ತು. ಇತ್ತೀಚಿನ ತಿಂಗಳುಗಳಲ್ಲಿ, ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು, ಹೋಟೆಲ್‌ಗಳು, ರೈಲು ನಿಲ್ದಾಣಗಳಿಗೆ ಬಾಂಬ್ ಬೆದರಿಕೆಗಳು ಬರುವುದು ಹೆಚ್ಚಾಗುತ್ತಿದೆ.

ಅಕ್ಟೋಬರ್ ತಿಂಗಳೊಂದರಲ್ಲೇ ವಿಮಾನಯಾನ ಸಂಸ್ಥೆಗಳಿಗೆ 666 ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಈ ವರ್ಷ ಅತಿ ಹೆಚ್ಚು, ಜೂನ್ ನಲ್ಲಿ 122 ಬೆದರಿಕೆ ಕರೆಗಳು ಬಂದಿವೆ. ಇದಕ್ಕೆ ವ್ಯತಿರಿಕ್ತವಾಗಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ 2023 ರಲ್ಲಿ ಕೇವಲ 15 ಬೆದರಿಕೆ ಕರೆಗಳನ್ನು ದಾಖಲಿಸಲಾಗಿದೆ, ಇದು ಕಳೆದ ವರ್ಷ ಅತಿ ಹೆಚ್ಚು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ