AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಹೆಲ್ಮೆಟ್​ ಎಲ್ಲಿ? ಪೊಲೀಸರನ್ನೇ ಹಿಂಬಾಲಿಸಿ ಪ್ರಶ್ನೆ ಮಾಡಿದ ಮಹಿಳೆಯರು

ಕಾನೂನನ್ನು ಬೋಧಿಸುವವರೇ ಕಾನೂನು ಪಾಲನೆ ಮಾಡದಿದ್ದರೆ ಹೇಗೆ?, ಪೊಲೀಸ್ ಅಧಿಕಾರಿಯೊಬ್ಬರು ಹೆಲ್ಮೆಟ್​ ಇಲ್ಲದೆ ಬೈಕ್​ ಓಡಿಸುತ್ತಿದ್ದುದನ್ನು ಕಂಡು ಇಬ್ಬರು ಮಹಿಳೆಯರು ಅವರನ್ನೇ ಹಿಂಬಾಲಿಸಿ ಹೋಗಿ ಪ್ರಶ್ನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸಾಮಾನ್ಯವಾಗಿ ಪೊಲೀಸರು ಜನರನ್ನು ಬೆನ್ನಟ್ಟುವುದನ್ನು ನೋಡಿರುತ್ತೀರಿ ಆದರೆ ಈ ಮಹಿಳೆಯರು ಪೊಲೀಸರನ್ನೇ ಬೆನ್ನಟ್ಟಿದ್ದಾರೆ.

ನಿಮ್ಮ ಹೆಲ್ಮೆಟ್​ ಎಲ್ಲಿ? ಪೊಲೀಸರನ್ನೇ ಹಿಂಬಾಲಿಸಿ ಪ್ರಶ್ನೆ ಮಾಡಿದ ಮಹಿಳೆಯರು
ಪೊಲೀಸ್​
ನಯನಾ ರಾಜೀವ್
|

Updated on: Nov 10, 2023 | 10:51 AM

Share

ಕಾನೂನನ್ನು ಬೋಧಿಸುವವರೇ ಕಾನೂನು ಪಾಲನೆ ಮಾಡದಿದ್ದರೆ ಹೇಗೆ?, ಪೊಲೀಸ್ ಅಧಿಕಾರಿಯೊಬ್ಬರು ಹೆಲ್ಮೆಟ್​ ಇಲ್ಲದೆ ಬೈಕ್​ ಓಡಿಸುತ್ತಿದ್ದುದನ್ನು ಕಂಡು ಇಬ್ಬರು ಮಹಿಳೆಯರು ಅವರನ್ನೇ ಹಿಂಬಾಲಿಸಿ ಹೋಗಿ ಪ್ರಶ್ನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸಾಮಾನ್ಯವಾಗಿ ಪೊಲೀಸರು ಜನರನ್ನು ಬೆನ್ನಟ್ಟುವುದನ್ನು ನೋಡಿರುತ್ತೀರಿ ಆದರೆ ಈ ಮಹಿಳೆಯರು ಪೊಲೀಸರನ್ನೇ ಬೆನ್ನಟ್ಟಿದ್ದಾರೆ.

ಇಬ್ಬರು ಮಹಿಳೆಯರು ಕಾರಿನಲ್ಲಿ ಹೋಗುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ಹೆಲ್ಮೆಟ್​ ಇಲ್ಲದೇ ಹೋಗುತ್ತಿರುವುದನ್ನು ಕಂಡು ಅವರನ್ನು ಹಿಂಬಾಲಿಸಿದ್ದಾರೆ, ಅಷ್ಟೇ ಅಲ್ಲದೆ ನಿಮ್ಮ ಹೆಲ್ಮೆಟ್​ ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಬಳಿಕ ಪೊಲೀಸ್​ಗೆ ಸರಿಯಾಗಿ ಇವರು ಏನು ಹೇಳುತ್ತಿದ್ದಾರೆ ಎಂಬುದು ಕೇಳಿಸಿಲ್ಲ, ಯಾವುದಾದರೂ ವಿಳಾಸ ಕೇಳುತ್ತಿರಬಹುದು ಎಂದು ಬೈಕ್​ ಅನ್ನು ನಿಧಾನ ಮಾಡಿದ್ದಾರೆ, ಆಗ ಇವರು ಮತ್ತೆ ನಿಮ್ಮ ಹೆಲ್ಮೆಟ್​ ಎಲ್ಲಿ ಎಂದು ಜೋರಾಗಿ ಕೇಳಿದ್ದಾರೆ ಆಗ ಪೊಲೀಸ್​ ಯಾವ ಉತ್ತರವನ್ನೂ ಕೊಡದೆ ಗಾಡಿ ಚಲಾಯಿಸಿಕೊಂಡು ಮುಂದೆ ಹೋಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಟ್ವಿಟ್ಟರ್​ನಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಆದರೆ ಮಹಿಳೆ ಸ್ವತಃ ಸೀಟ್​ಬೆಲ್ಟ್​ ಧರಿಸಿದಂತೆ ಕಾಣುತ್ತಿಲ್ಲ ಎಂದು ಬಳಕೆದಾರರು ಟ್ವೀಟ್​ ಮಾಡಿದ್ದಾರೆ.

ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ, ಇದಕ್ಕೂ ಮುನ್ನ ಹೆಲ್ಮೆಟ್​ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಪೊಲೀಸರನ್ನು ಇಬ್ಬರು ಮಹಿಳೆಯರು ಹಿಂಬಾಲಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದ ಘಟನೆ ವೈರಲ್ ಆಗಿದೆ. ಬಳಿಕ ಗಾಜಿಯಾಬಾದ್​ ಟ್ರಾಫಿಕ್ ಪೊಲೀಸರು ಸಾವಿರ ರೂ. ದಂಡವನ್ನು ವಿಧಿಸಿ ಚಲನ್ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ