AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಹೆಲ್ಮೆಟ್​ ಎಲ್ಲಿ? ಪೊಲೀಸರನ್ನೇ ಹಿಂಬಾಲಿಸಿ ಪ್ರಶ್ನೆ ಮಾಡಿದ ಮಹಿಳೆಯರು

ಕಾನೂನನ್ನು ಬೋಧಿಸುವವರೇ ಕಾನೂನು ಪಾಲನೆ ಮಾಡದಿದ್ದರೆ ಹೇಗೆ?, ಪೊಲೀಸ್ ಅಧಿಕಾರಿಯೊಬ್ಬರು ಹೆಲ್ಮೆಟ್​ ಇಲ್ಲದೆ ಬೈಕ್​ ಓಡಿಸುತ್ತಿದ್ದುದನ್ನು ಕಂಡು ಇಬ್ಬರು ಮಹಿಳೆಯರು ಅವರನ್ನೇ ಹಿಂಬಾಲಿಸಿ ಹೋಗಿ ಪ್ರಶ್ನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸಾಮಾನ್ಯವಾಗಿ ಪೊಲೀಸರು ಜನರನ್ನು ಬೆನ್ನಟ್ಟುವುದನ್ನು ನೋಡಿರುತ್ತೀರಿ ಆದರೆ ಈ ಮಹಿಳೆಯರು ಪೊಲೀಸರನ್ನೇ ಬೆನ್ನಟ್ಟಿದ್ದಾರೆ.

ನಿಮ್ಮ ಹೆಲ್ಮೆಟ್​ ಎಲ್ಲಿ? ಪೊಲೀಸರನ್ನೇ ಹಿಂಬಾಲಿಸಿ ಪ್ರಶ್ನೆ ಮಾಡಿದ ಮಹಿಳೆಯರು
ಪೊಲೀಸ್​
ನಯನಾ ರಾಜೀವ್
|

Updated on: Nov 10, 2023 | 10:51 AM

Share

ಕಾನೂನನ್ನು ಬೋಧಿಸುವವರೇ ಕಾನೂನು ಪಾಲನೆ ಮಾಡದಿದ್ದರೆ ಹೇಗೆ?, ಪೊಲೀಸ್ ಅಧಿಕಾರಿಯೊಬ್ಬರು ಹೆಲ್ಮೆಟ್​ ಇಲ್ಲದೆ ಬೈಕ್​ ಓಡಿಸುತ್ತಿದ್ದುದನ್ನು ಕಂಡು ಇಬ್ಬರು ಮಹಿಳೆಯರು ಅವರನ್ನೇ ಹಿಂಬಾಲಿಸಿ ಹೋಗಿ ಪ್ರಶ್ನೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸಾಮಾನ್ಯವಾಗಿ ಪೊಲೀಸರು ಜನರನ್ನು ಬೆನ್ನಟ್ಟುವುದನ್ನು ನೋಡಿರುತ್ತೀರಿ ಆದರೆ ಈ ಮಹಿಳೆಯರು ಪೊಲೀಸರನ್ನೇ ಬೆನ್ನಟ್ಟಿದ್ದಾರೆ.

ಇಬ್ಬರು ಮಹಿಳೆಯರು ಕಾರಿನಲ್ಲಿ ಹೋಗುತ್ತಿರುವಾಗ ಪೊಲೀಸ್ ಅಧಿಕಾರಿಯೊಬ್ಬರು ಹೆಲ್ಮೆಟ್​ ಇಲ್ಲದೇ ಹೋಗುತ್ತಿರುವುದನ್ನು ಕಂಡು ಅವರನ್ನು ಹಿಂಬಾಲಿಸಿದ್ದಾರೆ, ಅಷ್ಟೇ ಅಲ್ಲದೆ ನಿಮ್ಮ ಹೆಲ್ಮೆಟ್​ ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಬಳಿಕ ಪೊಲೀಸ್​ಗೆ ಸರಿಯಾಗಿ ಇವರು ಏನು ಹೇಳುತ್ತಿದ್ದಾರೆ ಎಂಬುದು ಕೇಳಿಸಿಲ್ಲ, ಯಾವುದಾದರೂ ವಿಳಾಸ ಕೇಳುತ್ತಿರಬಹುದು ಎಂದು ಬೈಕ್​ ಅನ್ನು ನಿಧಾನ ಮಾಡಿದ್ದಾರೆ, ಆಗ ಇವರು ಮತ್ತೆ ನಿಮ್ಮ ಹೆಲ್ಮೆಟ್​ ಎಲ್ಲಿ ಎಂದು ಜೋರಾಗಿ ಕೇಳಿದ್ದಾರೆ ಆಗ ಪೊಲೀಸ್​ ಯಾವ ಉತ್ತರವನ್ನೂ ಕೊಡದೆ ಗಾಡಿ ಚಲಾಯಿಸಿಕೊಂಡು ಮುಂದೆ ಹೋಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಹೆಲ್ಮೆಟ್ ಕಳ್ಳತನ, ಹುಡುಕಿಕೊಡಿ ಎಂದು ಪೊಲೀಸ್ ಠಾಣೆಗೆ ದೂರು

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಟ್ವಿಟ್ಟರ್​ನಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಈ ವಿಡಿಯೋವನ್ನು ವೀಕ್ಷಿಸಿದ್ದಾರೆ. ಆದರೆ ಮಹಿಳೆ ಸ್ವತಃ ಸೀಟ್​ಬೆಲ್ಟ್​ ಧರಿಸಿದಂತೆ ಕಾಣುತ್ತಿಲ್ಲ ಎಂದು ಬಳಕೆದಾರರು ಟ್ವೀಟ್​ ಮಾಡಿದ್ದಾರೆ.

ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ, ಇದಕ್ಕೂ ಮುನ್ನ ಹೆಲ್ಮೆಟ್​ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ಇಬ್ಬರು ಪೊಲೀಸರನ್ನು ಇಬ್ಬರು ಮಹಿಳೆಯರು ಹಿಂಬಾಲಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದ ಘಟನೆ ವೈರಲ್ ಆಗಿದೆ. ಬಳಿಕ ಗಾಜಿಯಾಬಾದ್​ ಟ್ರಾಫಿಕ್ ಪೊಲೀಸರು ಸಾವಿರ ರೂ. ದಂಡವನ್ನು ವಿಧಿಸಿ ಚಲನ್ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ