AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ, ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್​ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ

Bomb Threat: ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ
ಇಂಡಿಗೋ ವಿಮಾನImage Credit source: India TV
ನಯನಾ ರಾಜೀವ್
|

Updated on: May 28, 2024 | 7:27 AM

Share

ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ(Bomb Threat) ಬಂದಿರುವುದಾಗಿ ವರದಿಯಾಗಿದೆ. ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ಪರಿಶೀಲಿಸಲಾಗುತ್ತಿದೆ.

ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ ವಿಮಾನ(Flight) ಹತ್ತುವ ಮುಂಚೆ ಭಾಂಗ್ ಕುಡಿದಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿ ವಿಮಾನದ ಬಾಗಿಲು ತೆಗೆಯಲು ಯತ್ನಿಸಿರುವ ಘಟನೆ ನಡೆದಿದೆ. ಇಂದೋರ್​ನಿಂದ ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ವಿಮಾನವು ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. 29 ವರ್ಷದ ವ್ಯಕ್ತಿ ವಿಮಾನ ಹತ್ತುವ ಮೊದಲು ‘ಭಾಂಗ್’ ಸೇವಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವ ಮುನ್ನ ಏರ್‌ಲೈನ್ಸ್ ಉದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದ್ದರು ಎಂದು ಅವರು ಹೇಳಿದರು. ಘಟನೆ ಮೇ 21ರಂದು ನಡೆದಿದೆ ಎಂದು ಹೇಳಲಾಗಿದೆ, ಈ ವ್ಯಕ್ತಿಯ ವಿರುದ್ಧ ಏರ್‌ಲೈನ್ಸ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ವ್ಯಕ್ತಿ ಇಂದೋರ್‌ನಲ್ಲಿ ವಿಮಾನವನ್ನು ಹತ್ತಿದ ಕೂಡಲೇ, ಸಿಬ್ಬಂದಿ ಅವನ ನಡವಳಿಕೆಯಲ್ಲಿ ಅಸಹಜತೆಯನ್ನು ಗಮನಿಸಿದರು, ನಂತರ ಅವರು ವ್ಯಕ್ತಿಯನ್ನು ಬೇರೆ ಸೀಟಿಗೆ ಸ್ಥಳಾಂತರಿಸಿದರು. ಪ್ರಯಾಣಿಕ ತನ್ನ ಸ್ನೇಹಿತನೊಂದಿಗೆ ಕುಳಿತುಕೊಳ್ಳುವುದಾಗಿ ಹಠ ಹಿಡಿದಿದ್ದರು, ಸಿಬ್ಬಂದಿ ಕೊನೆಗೆ ಒಪ್ಪಿಗೆ ನೀಡಿದ್ದರು.

ವ್ಯಕ್ತಿ ಸ್ವಲ್ಪ ಸಮಯದವರೆಗೆ ಶಾಂತವಾಗಿ ಕುಳಿತಿದ್ದರು ಬಳಿಕ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ