AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಮನೆ ಕೆಲಸದವನಿಂದಲೇ ಮಹಿಳೆ, ಮಗನ ಗಂಟಲು ಸೀಳಿ ಬರ್ಬರ ಹತ್ಯೆ

ಮನೆ ಕೆಲಸದವನೇ ಮಹಿಳೆ ಹಾಗೂ ಆಕೆಯ ಮಗನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ. ಕೆಲಸದವನಿಗೆ ರುಚಿಕಾ ಸೇವಾನಿ ಗದರಿಸಿದ್ದರಿಂದ ಕೋಪಗೊಂಡು ಇಬ್ಬರ ಕತ್ತು ಸೀಳಿ ಪರಾರಿಯಾಗಿದ್ದಾನೆ. ಬುಧವಾರ ರಾತ್ರಿ 9.30ರ ಸುಮಾರಿಗೆ ರುಚಿಕಾ ಅವರ ಪತಿ ಕುಲದೀಪ್ ಕೆಲಸದಿಂದ ಹಿಂದಿರುಗಿದಾಗ ಬಾಗಿಲು ಲಾಕ್ ಆಗಿತ್ತು. ಪತ್ನಿ ಹಾಗೂ ಮಗನಿಗೆ ಕರೆ ಮಾಡಿದ್ದಾರೆ. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆಯೂ ಬರಲಿಲ್ಲ. ಕುಲದೀಪ್ ಸೇವಾನಿ ಗೇಟ್ ಬಳಿ ಮತ್ತು ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳನ್ನು ಸಹ ನೋಡಿ ಗಾಬರಿಗೊಂಡು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ದೆಹಲಿ: ಮನೆ ಕೆಲಸದವನಿಂದಲೇ ಮಹಿಳೆ, ಮಗನ ಗಂಟಲು ಸೀಳಿ ಬರ್ಬರ ಹತ್ಯೆ
ಕೊಲೆ Image Credit source: NDTV
ನಯನಾ ರಾಜೀವ್
|

Updated on: Jul 03, 2025 | 2:53 PM

Share

ನವದೆಹಲಿ, ಜುಲೈ 03: ಮನೆ ಕೆಲಸದವನೇ ಮಹಿಳೆ ಹಾಗೂ ಆಕೆಯ ಮಗನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ. ಕೆಲಸದವನಿಗೆ ರುಚಿಕಾ ಸೇವಾನಿ ಗದರಿಸಿದ್ದರಿಂದ ಕೋಪಗೊಂಡು ಇಬ್ಬರ ಕತ್ತು ಸೀಳಿ ಪರಾರಿಯಾಗಿದ್ದಾನೆ. ಬುಧವಾರ ರಾತ್ರಿ 9.30ರ ಸುಮಾರಿಗೆ ರುಚಿಕಾ ಅವರ ಪತಿ ಕುಲದೀಪ್ ಕೆಲಸದಿಂದ ಹಿಂದಿರುಗಿದಾಗ ಬಾಗಿಲು ಲಾಕ್ ಆಗಿತ್ತು. ಪತ್ನಿ ಹಾಗೂ ಮಗನಿಗೆ ಕರೆ ಮಾಡಿದ್ದಾರೆ. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆಯೂ ಬರಲಿಲ್ಲ. ಕುಲದೀಪ್ ಸೇವಾನಿ ಗೇಟ್ ಬಳಿ ಮತ್ತು ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳನ್ನು ಸಹ ನೋಡಿ ಗಾಬರಿಗೊಂಡು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ ಆಘಾತಕಾರಿ ದೃಶ್ಯ ಕಂಡುಬಂದಿತು. 42 ವರ್ಷದ ರುಚಿಕಾ ಹಾಸಿಗೆಯ ಪಕ್ಕದಲ್ಲಿ ನೆಲದ ಮೇಲೆ ಮಲಗಿದ್ದರು. ಆಕೆಯ ಶರ್ಟ್ ರಕ್ತದಿಂದ ತೊಯ್ದು ಹೋಗಿತ್ತು ಮತ್ತು ಆಕೆಯ ತಲೆಯ ಸುತ್ತಲೂ ರಕ್ತ ಮಡುಗಟ್ಟಿತ್ತು. ಮಗ ಕ್ರಿಶ್, ಬಾತ್​​ರೂಮನ್​ನ ನೆಲದ ಮೇಲೆ ನಿರ್ಜೀವವಾಗಿ ಬಿದ್ದಿದ್ದ, ಸುತ್ತಲೂ ರಕ್ತ ಹೆಪ್ಪುಗಟ್ಟಿತ್ತು. ರುಚಿಕಾ ಸೇವಾನಿ ತಮ್ಮ ಪತಿಯೊಂದಿಗೆ ಲಜಪತ್ ನಗರ ಮಾರುಕಟ್ಟೆಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.

ಈ ಜೋಡಿ ಕೊಲೆಗೆ ಸಂಬಂಧಿಸಿದಂತೆ ಅಂಗಡಿಯಲ್ಲಿ ಸೇವಾನಿ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದ ಮತ್ತು ಚಾಲಕನಾಗಿ ಕೆಲಸ ಮಾಡುತ್ತಿದ್ದ ಮುಖೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಮುಖೇಶ್, ರುಚಿಕಾ ಸೇವಾನಿ ಮತ್ತು ಆಕೆಯ ಮಗ ತನ್ನನ್ನು ಗದರಿಸಿದ್ದರಿಂದ ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರು ಪ್ರಕರಣ ಮತ್ತು ಕೊಲೆಗೆ ನಿಖರವಾದ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಮೃತ ಪತಿಯ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧ, ಜಮೀನಿಗಾಗಿ ಅತ್ತೆಯನ್ನೇ ಕೊಂದ ಮಹಿಳೆ

24 ವರ್ಷದ ಮುಖೇಶ್ ಬಿಹಾರದವರಾಗಿದ್ದು, ದೆಹಲಿಯ ಅಮರ್ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿಧಿವಿಜ್ಞಾನ ತಂಡಗಳು ಸಾಕ್ಷ್ಯ ಸಂಗ್ರಹದಲ್ಲಿ ಸಹಾಯ ಮಾಡುತ್ತಿವೆ. ಘಟನೆ ಬಗ್ಗೆ ಮತ್ತಷ್ಟು ಾಹತಿ ಪಡೆಯಲು ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ