AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!

ದೆಹಲಿಯ ಮಹಿಳೆಯೊಬ್ಬಳು ತನ್ನ ಗಂಡ ಆಕೆಯನ್ನು ಲೈಂಗಿಕವಾಗಿ ತೃಪ್ತಿಪಡಿಸಲಿಲ್ಲ ಎಂಬ ಕಾರಣಕ್ಕೆ ಆತನನ್ನು ಕೊಂದು ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ. ಆಕೆಯ ಪತಿ ಆಕೆಗೆ ದೈಹಿಕ ಸುಖವನ್ನು ನೀಡಲು ಸಾಧ್ಯವಾಗಲಿಲ್ಲ ಎಂಬ ಕಾರಣದಿಂದ ಆಕೆ ತನ್ನ ಕಸಿನ್ ಜೊತೆ ಸ್ನೇಹ ಬೆಳೆಸಿದಳು. ಪೊಲೀಸರು ಈ ಕೊಲೆಯಲ್ಲಿ ಆತನ ಪಾತ್ರದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ. ಮಹಿಳೆ ತನ್ನ ಗಂಡನ ಎದೆಗೆ ಮೂರು ಬಾರಿ ಇರಿದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಅಳುತ್ತಾ ಆಸ್ಪತ್ರೆಗೆ ಕರೆದೊಯ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Shocking News: ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!
Stab
ಸುಷ್ಮಾ ಚಕ್ರೆ
|

Updated on: Jul 24, 2025 | 9:16 PM

Share

ನವದೆಹಲಿ, ಜುಲೈ 24: ಇಡೀ ದೇಶದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಮತ್ತೊಂದು ಸೇರ್ಪಡೆಯಾಗಿದೆ. ದೆಹಲಿಯಲ್ಲಿ 32 ವರ್ಷದ ತನ್ನ ಪತಿಯನ್ನು ಕೊಂದು ಅದನ್ನು ಆತ್ಮಹತ್ಯೆ (Crime News) ಎಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ 29 ವರ್ಷದ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ. ಈ ಘಟನೆ ಭಾನುವಾರ ಸಂಜೆ ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಆಕೆಯ ಗಂಡ ಆಕೆಗೆ ಲೈಂಗಿಕ ಸುಖ ನೀಡುತ್ತಿರಲಿಲ್ಲ ಎಂಬ ಕಾರಣದಿಂದ ಅವರಿಬ್ಬರ ನಡುವೆ ಜಗಳವಾಗುತ್ತಿತ್ತು. ಗಂಡನ ನಿರ್ಲಕ್ಷ್ಯ, ಲೈಂಗಿಕ ಕ್ರಿಯೆಯಲ್ಲಿನ ನಿರಾಸಕ್ತಿಯಿಂದ ಬೇಸತ್ತ ಆ ಮಹಿಳೆ ತನ್ನ ಕಸಿನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಕೊನೆಗೆ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾನೆಂದು ಆಕೆ ಗಂಡನನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ.

ಪೊಲೀಸರ ಪ್ರಕಾರ, ಜುಲೈ 20ರ ಸಂಜೆ 4.15ರ ಸುಮಾರಿಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಗೆ ಸ್ಥಳೀಯ ಆಸ್ಪತ್ರೆಯಿಂದ ಕರೆ ಬಂದಿದ್ದು, ಮಹಿಳೆಯೊಬ್ಬರು ಮೊಹಮ್ಮದ್ ಶಾಹಿದ್ ಎಂಬ ಗುರುತಿಸಲಾದ ತನ್ನ ಪತಿಯನ್ನು ಹಲವಾರು ಇರಿತದ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ. ಆ ವ್ಯಕ್ತಿ ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್​ನಲ್ಲಿ ಲುಡೋ ಆಡಿ 5 ಲಕ್ಷ ಕಳೆದುಕೊಂಡು ಯುವಕ ಆತ್ಮಹತ್ಯೆ; ಹೈದರಾಬಾದ್​​​ನಲ್ಲಿ ಶಾಕಿಂಗ್ ಘಟನೆ

ಪೊಲೀಸರು ಆಸ್ಪತ್ರೆಗೆ ತಲುಪಿದಾಗ, ಆ ಮಹಿಳೆ ತನ್ನ ಪತಿ ತನ್ನನ್ನು ತಾನೇ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ ಎಂದು ಹೇಳಿದ್ದಾಳೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿಯು ಗಾಯಗಳು ಮುಂಭಾಗದಿಂದ ದಾಳಿ ನಡೆದಿದೆ ಎಂದು ಇದ್ದುದರಿಂದ ಆತ ತನಗೆ ತಾನೇ ಇರಿದುಕೊಂಡಿದ್ದು ಸುಳ್ಳು ಎಂಬುದು ಗೊತ್ತಾಯಿತು. ಇದರ ನಂತರ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಿದರು.

ವಿಚಾರಣೆ ಮತ್ತು ಆಕೆಯ ಮೊಬೈಲ್ ಫೋನ್‌ನ ವಿಧಿವಿಜ್ಞಾನ ಪರಿಶೀಲನೆಯ ಸಮಯದಲ್ಲಿ ತನಿಖಾಧಿಕಾರಿಗಳು ಆ ಮಹಿಳೆಯ ಇಂಟರ್ನೆಟ್ ಸರ್ಚ್ ಹಿಸ್ಟರಿ ಗಮನಿಸಿದಾಗ ಅದರಲ್ಲಿ “ಚಾಟ್ ಹಿಸ್ಟರಿ ಡಿಲೀಟ್ ಮಾಡುವುದು, ಅಲ್ಯೂಮಿನಿಯಂ ಫಾಸ್ಫೈಡ್‌ನಂತಹ ವಿಷಕಾರಿ ವಸ್ತುಗಳನ್ನು ಬಳಸುವುದು ಹೇಗೆ” ಎಂಬಿತ್ಯಾದಿ ಸರ್ಚ್​ಗಳಿದ್ದವು. ಇದರಿಂದ ಅನುಮಾನಗೊಂಡ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದರು.

ಇದನ್ನೂ ಓದಿ: ಆಫೀಸಿನ ಭ್ರಷ್ಟಾಚಾರಕ್ಕೆ ಸಹಕರಿಸಲಾಗದೆ ಇಂಜಿನಿಯರ್ ಆತ್ಮಹತ್ಯೆ; ಸೂಸೈಡ್ ನೋಟ್​​ನಲ್ಲಿತ್ತು ಇಬ್ಬರ ಹೆಸರು

ಆಗ ಆ ಮಹಿಳೆ ತನ್ನ ಅಪರಾಧವನ್ನು ಒಪ್ಪಿಕೊಂಡಳು. ತನ್ನ ಪತಿಯ ದೈಹಿಕ ಸಂಬಂಧದಿಂದ ಅತೃಪ್ತಳಾಗಿ ಆತನನ್ನು ಕೊಲ್ಲಲು ನಿರ್ಧರಿಸಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ. ಶಾಹಿದ್ ಎದೆಗೆ ಮೂರು ಬಾರಿ ಇರಿದ ನಂತರ ತಾನೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಪೊಲೀಸರ ದಾರಿ ತಪ್ಪಿಸಲು ಆತ್ಮಹತ್ಯೆಯ ಕಥೆಯನ್ನು ಹೆಣೆದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್