AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ.

ಆಟೋದಿಂದ ಶಿಕ್ಷಕಿಯನ್ನು ಹೊರದಬ್ಬಿ ಐಫೋನ್ ಕದ್ದು ಪರಾರಿಯಾದ ದುಷ್ಕರ್ಮಿಗಳು
ದೆಹಲಿ ಟೀಚರ್
ನಯನಾ ರಾಜೀವ್
|

Updated on: Aug 14, 2023 | 11:40 AM

Share

ಶಿಕ್ಷಕಿಯೊಬ್ಬರು ಆಟೋದಲ್ಲಿ ತೆರಳುತ್ತಿದ್ದಾಗ ಮುಸುಕುಧಾರಿಗಳು ಅವರಿಂದ ಐಫೋನ್ ಕಸಿದುಕೊಳ್ಳಲು ಪ್ರಯತ್ನಿಸಿ ಆಟೋದಿಂದ ಹೊರದಬ್ಬಿರುವ ಘಟನೆ ದೆಹಲಿಯಲ್ಲಿ ನಡೆದಿದೆ, ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ. ಮುಸುಕುಧಾರಿಗಳು ಶಿಕ್ಷಕಿಯ ಮೊಬೈಲ್ ಕಸಿಯಲು ಪ್ರಯತ್ನಿಸಿದರು ಅದು ಸಾಧ್ಯವಾಗದಿದ್ದಾಗ ಆಟೋದಿಂದ ಅವರನ್ನು ಎಳೆದು ರಸ್ತೆಗೆ ಹಾಕಿದ್ದಾರೆ. ಶಿಕ್ಷಕಿ ಪ್ರಜ್ಞೆ ತಪ್ಪಿ ಬಿದ್ದಾಗ ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದ್ದು, ಹಲವೆಡೆ ಗಂಭೀರ ಗಾಯಗಳಾಗಿವೆ.

ಶಿಕ್ಷಕಿ ಯೋವಿಕಾ ಡಿಯೋಲಿ ರಸ್ತೆಯಲ್ಲಿ ಕುಟುಂಬದವರೊಂದಿಗೆ ವಾಸವಿದ್ದಾರೆ. ಶುಕ್ರವಾರ ಶಾಲೆ ಮುಗಿದು ಮಧ್ಯಾಹ್ನ 2.10ಕ್ಕೆ ಆಟೋದಲ್ಲಿ ಮನೆಗೆ ಮರಳುತ್ತಿದ್ದರು, ಮಂದಿರ ಮಾರ್ಗದ ಖೋಖಾ ಮಾರುಕಟ್ಟೆ ತಲುಪಿದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.

ಮತ್ತಷ್ಟು ಓದಿ: ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ

ದುಷ್ಕರ್ಮಿಗಳು ಅವರನ್ನು ಸ್ವಲ್ಪ ದೂರ ಎಳೆದೊಯ್ದು ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಕಿಯ ಮೂಗು ಮುರಿದಿದೆ. ಜೊತೆಗೆ, ಹಣೆಯ ತಲೆ, ಭುಜ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಸಾಕೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ದುಷ್ಕರ್ಮಿಗಳು ಮುಖ ಮುಚ್ಚಿಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ