AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಹೋಟೆಲ್​ನಲ್ಲಿ 6 ಲಕ್ಷ ರೂ. ಬಿಲ್​ ಮಾಡಿ ಓಡಿ ಹೋಗಿದ್ದ ಮಹಿಳೆಯ ಖಾತೆಯಲ್ಲಿದ್ದ ಹಣ ತಿಳಿದು ಅಚ್ಚರಿಗೊಂಡ ಪೊಲೀಸರು

ದೆಹಲಿಯ ಐಷಾರಾಮಿ ಹೋಟೆಲ್​ನಲ್ಲಿ 15 ದಿನಗಳ ಕಾಲ ತಂಗಿದ್ದು ಬರೋಬ್ಬರಿ 6 ಲಕ್ಷ ರೂ. ಬಿಲ್​ ಮಾಡಿ ಓಡಿ ಹೋಗಿದ್ದ ಆಂಧ್ರ ಮಹಿಳೆಯ ಬ್ಯಾಂಕ್​ ಖಾತೆಯಲ್ಲಿದ್ದ ಹಣ ನೋಡಿ ಪೊಲೀಸರು ಅಚ್ಚರಿಗೊಂಡಿದ್ದಾರೆ. ಆಂಧ್ರ ಮೂಲದ ಮಹಿಳೆ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ದೆಹಲಿಯ ಏರೋಸಿಟಿಯಲ್ಲಿರುವ ಪುಲ್‌ಮನ್ ಹೋಟೆಲ್​ನಲ್ಲಿ 15ದಿನಗಳ ಕಾಲ ಉಳಿದು, ಐಷಾರಾಮಿ ಜೀವನ ನಡೆಸಿ ಓಡಿಹೋಗಿದ್ದಳು.

ಐಷಾರಾಮಿ ಹೋಟೆಲ್​ನಲ್ಲಿ 6 ಲಕ್ಷ ರೂ. ಬಿಲ್​ ಮಾಡಿ ಓಡಿ ಹೋಗಿದ್ದ ಮಹಿಳೆಯ ಖಾತೆಯಲ್ಲಿದ್ದ ಹಣ ತಿಳಿದು ಅಚ್ಚರಿಗೊಂಡ ಪೊಲೀಸರು
ಹೋಟೆಲ್
ನಯನಾ ರಾಜೀವ್
|

Updated on: Jan 31, 2024 | 12:25 PM

Share

ದೆಹಲಿಯ ಐಷಾರಾಮಿ ಹೋಟೆಲ್​ನಲ್ಲಿ 15 ದಿನಗಳ ಕಾಲ ತಂಗಿದ್ದು ಬರೋಬ್ಬರಿ 6 ಲಕ್ಷ ರೂ. ಬಿಲ್​ ಮಾಡಿ ಓಡಿ ಹೋಗಿದ್ದ ಆಂಧ್ರ ಮಹಿಳೆಯ ಬ್ಯಾಂಕ್​ ಖಾತೆಯಲ್ಲಿದ್ದ ಹಣ ನೋಡಿ ಪೊಲೀಸರು ಅಚ್ಚರಿಗೊಂಡಿದ್ದಾರೆ. ಆಂಧ್ರ ಮೂಲದ ಮಹಿಳೆ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ದೆಹಲಿಯ ಏರೋಸಿಟಿಯಲ್ಲಿರುವ ಪುಲ್‌ಮನ್ ಹೋಟೆಲ್​ನಲ್ಲಿ 15ದಿನಗಳ ಕಾಲ ಉಳಿದು, ಐಷಾರಾಮಿ ಜೀವನ ನಡೆಸಿ ಓಡಿಹೋಗಿದ್ದಳು.

ಕೊನೆಗೆ ಆಕೆಯನ್ನು ಪೊಲೀಸರು ಬಂಧಿಸಿದ್ದರು, ಆಕೆಗೆ ಬ್ಯಾಂಕ್​ ಖಾತೆಯ ವಿವರ ನೀಡಲು ಹೇಳಿದಾಗ ನಿರಾಕರಿಸಿದ್ದಳು, ಬಳಿಕ ಪೊಲೀಸರು ವಿವಿರ ಪರಿಶೀಲಿಸಿದಾಗ ಆಕೆಯ ಖಾತೆಯಲ್ಲಿ ಕೇವಲ 41 ರೂ. ಇರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಶಾ ದವೆ ಹೆಸರಿನಲ್ಲಿ ನಕಲಿ ಗುರುತಿನ ಚೀಟಿಯನ್ನು ಸೃಷ್ಟಿಸಿ ಹೋಟೆಲ್‌ನ ಸ್ಪಾ ಸೌಲಭ್ಯದಲ್ಲಿ 2,11,708 ರೂಪಾಯಿ ಮೌಲ್ಯದ ಸೇವೆಗಳನ್ನು ಪಡೆದಿದ್ದಾಳೆ ಎಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ.

ಐಸಿಐಸಿಐ ಬ್ಯಾಂಕ್ ಯುಪಿಐ ಆ್ಯಪ್ ಮೂಲಕ ಹಣ ಕಳುಹಿಸುತ್ತಿರುವುದಾಗಿ ಹೋಟೆಲ್ ಸಿಬ್ಬಂದಿಗೆ ಸ್ಯಾಮ್ಯುಯೆಲ್ ತೋರಿಸಿದ್ದು, ಖಾತೆ ನೋಡಿದಾಗ ಬ್ಯಾಂಕ್‌ಗೆ ಯಾವುದೇ ಹಣ ಪಾವತಿಯಾಗಿಲ್ಲ ಎಂದು ತಿಳಿದು ಬಂದಿದೆ. ಆಕೆ ಬಳಸಿರುವ ಆ್ಯಪ್ ಬಗ್ಗೆ ಸಂಶಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಹಿಳೆ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯ ಐಷಾರಾಮಿ ಹೋಟೆಲ್​ನಲ್ಲಿ ಹಣ ನೀಡದೆ 15 ದಿನಗಳ ಕಾಲ ಉಳಿದಿದ್ದ ಆಂಧ್ರ ಮಹಿಳೆಯ ಬಂಧನ

ತಾನು ವೈದ್ಯೆ ಮತ್ತು ತನ್ನ ಪತಿಯೂ ವೈದ್ಯನಾಗಿದ್ದು ನ್ಯೂಯಾರ್ಕ್‌ನಲ್ಲಿ ವಾಸವಾಗಿರುವುದಾಗಿ ಪೊಲೀಸರಿಗೆ ಆರಂಭದಲ್ಲಿ ತಿಳಿಸಿದ್ದಾಳೆ. ಆದರೆ ಆ ಮಾಹಿತಿ ಸತ್ಯವೋ, ಸುಳ್ಳೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೋಟೆಲ್ ಸಿಬ್ಬಂದಿ ಪಿಸಿಆರ್ ಕರೆ ಮಾಡಿದ ನಂತರ ಜನವರಿ 13 ರಂದು ದೆಹಲಿ ಪೊಲೀಸರು ಸ್ಯಾಮ್ಯುಯೆಲ್ ಅವರನ್ನು ಬಂಧಿಸಿದ್ದರು. ಐಪಿಸಿ ಸೆಕ್ಷನ್ 419, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?