AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಡ್ರೋಜನ್​ ತುಂಬಿದ ಬಲೂನುಗಳಿಗೆ ಸಾಕಿದ ನಾಯಿಮರಿ ಕಟ್ಟಿ ಗಾಳಿಯಲ್ಲಿ ಹಾರಿಸಿಬಿಟ್ಟ ಯೂಟ್ಯೂಬರ್​ನ ಬಂಧನ

ಯೂಟ್ಯೂಬರ್ ಗೌರವ್​, ಹೈಡ್ರೋಜನ್​ ತುಂಬಿದ ಬಲೂನುಗಳನ್ನು ಸಾಕಿದ ನಾಯಿಮರಿಗಳ ಹಿಂಭಾಗಗಕ್ಕೆ ಕಟ್ಟಿ ಗಾಳಿಯಲ್ಲಿ ತೇಲಿ ಬಿಡುವ ದೃಶ್ಯವನ್ನು ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದ. ಈ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಇದೀಗ ವಿಡಿಯೋವನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕಲಾಗಿದೆ.

ಹೈಡ್ರೋಜನ್​ ತುಂಬಿದ ಬಲೂನುಗಳಿಗೆ ಸಾಕಿದ ನಾಯಿಮರಿ ಕಟ್ಟಿ ಗಾಳಿಯಲ್ಲಿ ಹಾರಿಸಿಬಿಟ್ಟ ಯೂಟ್ಯೂಬರ್​ನ ಬಂಧನ
ಹೈಡ್ರೋಜನ್​ ತುಂಬಿದ ಬಲೂನುಗಳಿಗೆ ಸಾಕಿದ ನಾಯಿಮರಿ ಕಟ್ಟಿ ಗಾಳಿಯಲ್ಲಿ ಹಾರಿಸಿಬಿಟ್ಟ ಯೂಟ್ಯೂಬರ್
shruti hegde
|

Updated on: May 27, 2021 | 11:32 AM

Share

ದೆಹಲಿ: ದೆಹಲಿ ಮೂಲದ ಗೌರವ್​ ಜಾನ್​ ಎಂಬ ಹೆಸರಿನ ಯುಟ್ಯೂಬರ್,​ ಸಾಕಿದ ನಾಯಿ ಮರಿಗಳ ಹಿಂಭಾಗಕ್ಕೆ ಹೈಡ್ರೋಜನ್​ ತುಂಬಿದ ಬಲೂನುಗಳನ್ನು ಕಟ್ಟಿ ಗಾಳಿಯಲ್ಲಿ ತೇಲುವಂತೆ ಮಾಡಿದ್ದಾನೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ‘ಫ್ಲಾಯಿಂಗ್ ಡಾಗ್​’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್​ ಮಾಡಲಾಗಿತ್ತು. ಆನ್​ಲೈನಲ್ಲಿ ಬಾರೀ ಆಕ್ರೋಶಕ್ಕೆ ಒಳಗಾಗುತ್ತಿದ್ದಂತೆಯೇ ಯುಟ್ಯೂಬರ್​ ಗೌರವ್​ ಜಾನ್​ನ್ನು ಬಂಧಿಸಲಾಗಿದೆ.

ಯೂಟ್ಯೂಬರ್ ಗೌರವ್​, ಹೈಡ್ರೋಜನ್​ ತುಂಬಿದ ಬಲೂನುಗಳನ್ನು ಸಾಕಿದ ನಾಯಿಮರಿಗಳ ಹಿಂಭಾಗಗಕ್ಕೆ ಕಟ್ಟಿ ಗಾಳಿಯಲ್ಲಿ ತೇಲಿ ಬಿಡುವ ದೃಶ್ಯವನ್ನು ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದ. ಈ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಇದೀಗ ವಿಡಿಯೋವನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕಲಾಗಿದೆ.

ವಿಡಿಯೋದಲ್ಲಿ ಗಮನಿಸಿದಂತೆ, ಯೂಟ್ಯೂಬರ್​ ರಸ್ತೆಯಲ್ಲಿ ನಿಲ್ಲಿಸಲಾದ ವಾಹನದ ಮೇಲೆ ಕುಳಿತು ಆಕಾಶಬುಟ್ಟಿಗೆ ಕಟ್ಟಿದ ನಾಯಿ ಮರಿಯನ್ನು ಗಾಳಿಯಲ್ಲಿ ತೇಲಿಸಿ ಬಿಡುತ್ತಾನೆ. ನಾಯಿಯು ಕಟ್ಟಡ ಎರಡನೇ ಮಹಡಿಯ ಮೇಲೆ ಹಾರುತ್ತಿದ್ದಂತೆ ದೃಶ್ಯದಲ್ಲಿ ನೋಡಬಹುದು.

ಯೂಟ್ಯೂಬ್​ನಲ್ಲಿ 4 ಮಿಲಿಯನ್​ಗೂ ಹೆಚ್ಚು ಚಂದಾದಾರರನ್ನು ಹೊಂದಿರುವ ಗೌರವ್​ ಮತ್ತು ಅವರ ತಾಯಿಯ ವಿರುದ್ಧ ಕಾನೂನಿನ ವಿವಿಧ ವಿಭಾಗಗಳ ಅಡಿಯಲ್ಲಿ ದಕ್ಷಿಣ ದೆಹಲಿಯ ಮಾಲ್ವಿಯಾ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದೆ ಗೌರವ್​, ‘ಫ್ಲಾಯಿಂಗ್ ಡಾಗ್​’ ಎಂದು ಶೀರ್ಷಿಕೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಏಕೆ ಡಿಲಿಟ್​ ಮಾಡಿದ್ದಾರೆ ಎಂಬುದನ್ನು ವಿವರಿಸುವ ಮೂಲಕ ಎಲ್ಲರಲ್ಲಿ ಕ್ಷಮೆಯಾಚಿಸಿದ್ದರು. ಆಕಾಶಬುಟ್ಟಿಯನ್ನು ಹಾರಿಸುವ ಮೊದಲು ಎಲ್ಲಾ ಸುರಕ್ಷತಾ ಕ್ರಮವನ್ನು ಕೈಗೊಂಡಿದ್ದೆ. ವಿಡಿಯೋ ಮಾಡುವಾಗಲೂ ಈ ಕುರಿತಂತೆ ಹೇಳಿದ್ದೆ. ಆದರೆ ವಿಡಿಯೋ ಅತ್ಯಂತ ಉದ್ದವಾಗಿದ್ದರಿಂದ ಅಪ್​ಲೋಡ್​ ಮಾಡಲು ಸಾಧ್ಯವಾಗಲಿಲ್ಲಎಂದು ಹೆಳಿದ್ದರು.

ತನ್ನ ಚಂದಾದಾರರಿಗೆ ಮತ್ತು ಪ್ರಾಣಿ ಪ್ರಿಯರಿಗೆ ಕ್ಷಮೆಯಾಚಿಸಿದ ಅವರು, ನಾನು ಸಾಕಿದ ಪ್ರಾಣಿಗಳನ್ನು ನಾನು ಮಗುವಂತೆ ನೋಡಿಕೊಳ್ಳುತ್ತೇನೆ. ವಿಡಿಯೋ ನೋಡಿದ ನಿಮಗೆ ಇದು ತಪ್ಪಾಗಿ ಅನಿಸಿದರೆ ನಿಮ್ಮಲ್ಲಿ ನಾನು ಕ್ಷಮೆಯಾಚಿಸುತ್ತಿದ್ದೇನೆ. ಈ ಘಟನೆಯು ಮತ್ತೆ ನಡೆಯದಂತೆ ಎಚ್ಚರವಹಿಸುತ್ತೇನೆ. ವಿಡಿಯೋ ನೋಡಿ ಪ್ರಭಾವಕ್ಕೊಳಗಾಗಬೇಡಿ. ನಿಮ್ಮ ಭಾವನೆಗೆ ಧಕ್ಕೆ ಉಂಟಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ: 

WhatsApp: ದೆಹಲಿ ಕೋರ್ಟ್​ನಲ್ಲಿ ಸರ್ಕಾರದ ಕಾನೂನಿನ ವಿರುದ್ಧ ವಾಟ್ಸಾಪ್ ದಾವೆ ಹೂಡಿತೆ?

ಟೂಲ್​ಕಿಟ್ ತನಿಖೆ: ಕಾಂಗ್ರೆಸ್​ನ ಇಬ್ಬರು ನಾಯಕರಿಗೆ ನೋಟೀಸನ್ನು ಜಾರಿಮಾಡಿದ ದೆಹಲಿ ಪೊಲೀಸ್

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!