AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ಆಗಸ್ಟ್​ 16ರಿಂದ ಸಾರ್ವಜನಿಕರಿಗೆ ಮುಕ್ತ ಪ್ರವೇಶ

ಇತ್ತೀಚೆಗಷ್ಟೇ ಮೊಘಲ್​ ಗಾರ್ಡನ್​ನಿಂದ ಅಮೃತ ಉದ್ಯಾನವೆಂದು ಮರುನಾಮಕರಣಗೊಂಡಿರುವ ಉದ್ಯಾನವು ಆಗಸ್ಟ್​ 16ರಿಂದ ಒಂದು ತಿಂಗಳ ಕಾಲ ಸಾರ್ವಜನಿಕರರು ಮುಕ್ತವಾಗಿರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ದೆಹಲಿಯ ರಾಷ್ಟ್ರಪತಿ ಭವನದೊಳಗಿದೆ.

ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ಆಗಸ್ಟ್​ 16ರಿಂದ ಸಾರ್ವಜನಿಕರಿಗೆ ಮುಕ್ತ ಪ್ರವೇಶ
ಅಮೃತ ಉದ್ಯಾನ
ನಯನಾ ರಾಜೀವ್
|

Updated on: Aug 08, 2024 | 10:35 AM

Share

ರಾಷ್ಟ್ರಪತಿ ಭವನದಲ್ಲಿರುವ ಅಮೃತ ಉದ್ಯಾನವು ಆಗಸ್ಟ್ 16ರಿಂದ ಸೆಪ್ಟೆಂಬರ್ 15ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ವಾರ್ಷಿಕ ಉದ್ಯಾನೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಸ್ಟ್​ 14ರಂದು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲು ಆಗಸ್ಟ್ 29 ಅನ್ನು ಕ್ರೀಡಾಪಟುಗಳಿಗೆ ಪ್ರತ್ಯೇಕವಾಗಿ ಮೀಸಲಿಡಲಾಗಿದೆ. ಹಿಂದಿನ ವರ್ಷದಂತೆ ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಶಿಕ್ಷಕರಿಗೆ ಮೀಸಲಿಡಲಾಗಿದೆ.

ನಿರ್ವಹಣೆಗಾಗಿ ಅಮೃತ್ ಉದ್ಯಾನವನ್ನು ಎಲ್ಲಾ ಸೋಮವಾರಗಳಂದು ಮುಚ್ಚಲಾಗುತ್ತದೆ. ಸಾರ್ವಜನಿಕರಿಗೆ ಪ್ರವೇಶವು ರಾಷ್ಟ್ರಪತಿ ಭವನದ ಗೇಟ್ ನಂ. 35 ರಿಂದ ಉತ್ತರ ಅವೆನ್ಯೂ ರಸ್ತೆಯ ಬಳಿ ಇರುತ್ತದೆ. ಅಷ್ಟೇ ಅಲ್ಲದೆ ಸ್ಪಿರಿಚುವಲ್ ಗಾರ್ಡನ್‌, ಹರ್ಬಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್, ಮ್ಯೂಸಿಕಲ್ ಗಾರ್ಡನ್ ಗಳನ್ನು ಕೂಡ ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಪ್ರವೇಶ ಮಾಡಬಹುದು. ಹಾಗೆಯೇ ಅದೇ ಗೇಟ್ ಮೂಲಕವೇ ಹೊರಗೆ ಹೋಗಲು ಅವಕಾಶ ಮಾಡಿಕೊಡಲಾಗಿದೆ.

ಉದ್ಯಾನದಲ್ಲಿ ಸುಂದರವಾದ ಹುಲ್ಲು, ಆಧ್ಯಾತ್ಮಿಕ ಉದ್ಯಾನ, ಗಿಡಮೂಲಿಕೆಯ ಗಾರ್ಡನ್ ಹಾಗೂ ಸಂಗೀತ ಉದ್ಯಾನವಿದೆ. ನೀರಿನ ಬಾಟಲಿ, ಕ್ಯಾಮರಾ, ರೇಡಿಯೋ, ಬ್ಯಾಗ್, ತಿಂಡಿ ಸೇರಿದಂತೆ ಯಾವುದೇ ವಸ್ತುಗಳನ್ನು ಉದ್ಯಾನಕ್ಕೆ ತರುವಂತಿಲ್ಲ. ಶೌಚಾಲಯ, ಪ್ರಥಮ ಚಿಕಿತ್ಸೆ , ವೈದ್ಯಕೀಯ ಸೌಲಭ್ಯವನ್ನು ಅಲ್ಲಿಯೇ ಒದಗಿಸಲಾಗುತ್ತದೆ.

ಇತ್ತೀಚೆಗಷ್ಟೇ ರಾಷ್ಟ್ರಪತಿ ಭವನದ ಆವರಣದಲ್ಲಿರುವ ಮೊಘಲ್ ಉದ್ಯಾನಕ್ಕೆ ಅಮೃತ ಉದ್ಯಾನ ಎಂದು ರಾಷ್ಟ್ರಪತಿಯವರು ಮರುನಾಮಕರಣ ಮಾಡಿದ್ದಾರೆ. ಮೂಲತಃ ಇದು ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಅನ್ನು ಒಳಗೊಂಡಿತ್ತು. ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಮತ್ತು ರಾಮ್ ನಾಥ್ ಕೋವಿಂದ್ ಅವರ ಅವಧಿಯಲ್ಲಿ ಹರ್ಬಲ್-I, ಹರ್ಬಲ್-II, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಂಗಳಂತಹ ಹೆಚ್ಚಿನ ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಯಿತು.

ಮತ್ತಷ್ಟು ಓದಿ: Mughal Garden: ದೆಹಲಿಯ ಮೊಘಲ್ ಗಾರ್ಡನ್‌ ಇನ್ನು ಅಮೃತ ಉದ್ಯಾನ; ಹೆಸರು ಬದಲಾಯಿಸಿದ ಕೇಂದ್ರ

ರಾಷ್ಟ್ರಪತಿ ಭವನದ ವೆಬ್‌ಸೈಟ್‌ನಲ್ಲಿ (https://visit.rashtrapatibhavan.gov.in/) ಆನ್‌ಲೈನ್‌ನಲ್ಲಿ ಬುಕಿಂಗ್ ಮಾಡಬಹುದು ಮತ್ತು ಗೇಟ್ ನಂ. ಹೊರಗೆ ಇರುವ ಸ್ವಯಂ ಸೇವಾ ಕಿಯೋಸ್ಕ್‌ಗಳ ಮೂಲಕ ಬುಕ್ಕಿಂಗ್ ಮಾಡಬಹುದು.

ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ. ಅಮೃತ ಉದ್ಯಾನ ಬೇಸಿಗೆ ಕಾಯಕ್ರಮದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಾಷ್ಟ್ರಪತಿ ಭವನದ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಆಟಗಾರರು ಹಾಗೂ ಶಿಕ್ಷಕರು ವಿಶೇಷ ದಿನಗಳಲ್ಲಿ ಅಂದರೆ ಆಗಸ್ಟ್​ 29 ಹಾಗೂ ಸೆಪ್ಟೆಂಬರ್ 5ರಂದು ಯಾವುದೇ ಶುಲ್ಕವಿಲ್ಲದೆ ಮ್ಯೂಸಿಯಂಗೆ ಭೇಟಿ ನೀಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ