AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಿ ಮಲಿವಾಲ್ ದುಃಖದಿಂದಲೇ ನನಗೆ ಕರೆ ಮಾಡಿದ್ದರು: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ

ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರು ಮುಖ್ಯಮಂತ್ರಿಗಳ ನಿವಾಸದಲ್ಲಿ ಅವರನ್ನು ಏಕಾಂಗಿಯಾಗಿ ಭೇಟಿಯಾಗಲು ಹೋದಾಗ ಅವರ ಮೇಲೆ ನಡೆದ ಹಲ್ಲೆಯ ವಿಷಯದ ಕುರಿತು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳ ನಿರೂಪಣೆಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಿನ್ನೆ, ಆಕೆ ಭಾರೀ ದುಃಖದಿಂದಲೇ ನನಗೆ ಕರೆ ಮಾಡಿದ್ದರು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ.

ಸ್ವಾತಿ ಮಲಿವಾಲ್ ದುಃಖದಿಂದಲೇ ನನಗೆ ಕರೆ ಮಾಡಿದ್ದರು: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ
ವಿಕೆ ಸಕ್ಸೇನಾ
ರಶ್ಮಿ ಕಲ್ಲಕಟ್ಟ
|

Updated on: May 21, 2024 | 5:11 PM

Share

ದೆಹಲಿ ಮೇ 21: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಯಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ (Swati Maliwal) ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ಹೇಳಿಕೆಯೊಂದು ನೀಡಿದ್ದಾರೆ. ಈ ವಿಷಯದ ಕುರಿತು ಮಾಧ್ಯಮ ನಿರೂಪಣೆಯಿಂದ ತನಗೆ ತುಂಬಾ ನೋವಾಗಿದೆ ಎಂದು ಎಲ್ ಜಿ ಹೇಳಿದ್ದಾರೆ. ದೆಹಲಿಯ ರಾಜ್ ನಿವಾಸ್ ನಲ್ಲಿ ಹೇಳಿಕೆ ನೀಡಿರುವ ಸಕ್ಸೇನಾ, ಮಲಿವಾಲ್ ನನಗೆ ಕರೆ ಮಾಡಿ ಭಾರೀ ದುಃಖದಿಂದ ತನಗಾದ ಆಘಾತಕಾರಿ ಅನುಭವವನ್ನು ಸುದೀರ್ಘವಾಗಿ ವಿವರಿಸಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಿ ಮಲಿವಾಲ್ ನನಗೆ ಕರೆ ಮಾಡಿ ತನ್ನ ಸ್ವಂತ ಸಹೋದ್ಯೋಗಿಗಳಿಂದ ತನಗೆ ಬೆದರಿಕೆ ಮತ್ತು ಅವಮಾನವಾಗಿರುವ ಬಗ್ಗೆ ವಿವರಿಸಿದ್ದಾರೆ ಎಂದು ಸಕ್ಸೇನಾ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರು ಮುಖ್ಯಮಂತ್ರಿಗಳ ನಿವಾಸದಲ್ಲಿ ಅವರನ್ನು ಏಕಾಂಗಿಯಾಗಿ ಭೇಟಿಯಾಗಲು ಹೋದಾಗ ಅವರ ಮೇಲೆ ನಡೆದ ಹಲ್ಲೆಯ ವಿಷಯದ ಕುರಿತು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳ ನಿರೂಪಣೆಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಿನ್ನೆ, ಆಕೆ ಭಾರೀ ದುಃಖದಿಂದಲೇ ನನಗೆ ಕರೆ ಮಾಡಿದ್ದರು. ಅಲ್ಲಿ ಆಕೆಗಾದ ಆಘಾತಕಾರಿ ಅನುಭವವನ್ನು ಮತ್ತು ನಂತರದ ಬೆದರಿಕೆ ಮತ್ತು ಅವಮಾನದ ಬಗ್ಗೆ ಆಕೆ ವಿವರಿಸಿದ್ದಾರೆ. ಆಕೆಯ ವಿರುದ್ಧ ಸಾಕ್ಷ್ಯಾಧಾರಗಳನ್ನು ತಿದ್ದುವಿಕೆ ಮತ್ತು ಬಲವಂತದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಸಕ್ಸೇನಾ ಹೇಳಿಕೆ ನೀಡಿದ್ದಾರೆ.

ಮೇ 8 ರಂದು ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಡ್ರಾಯಿಂಗ್ ರೂಮಿನಲ್ಲಿ ಬಿಭವ್ ಕುಮಾರ್ ಪದೇ ಪದೇ ಕಪಾಳಮೋಕ್ಷ ಮಾಡಿ ನನಗೆ ಒದೆದಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಆಪಾದಿತ ಹಲ್ಲೆ ನಡೆದಾಗ ಕೇಜ್ರಿವಾಲ್ ತನ್ನ ಮನೆಯೊಳಗೆ ಇದ್ದರು ಎಂದಿದ್ದರು ಮಲಿವಾಲ್.

ಏತನ್ಮಧ್ಯೆ, ಆಮ್ ಆದ್ಮಿ ಪಕ್ಷವು ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿಯನ್ನು ಬೆಂಬಲಿಸಿದ್ದು, ಸ್ವಾತಿ ಮಲಿವಾಲ್ ಅವರು ಪೂರ್ವಭಾವಿ ಅಪಾಯಿಂಟ್ಮೆಂಟ್ ಇಲ್ಲದೆ ಮುಖ್ಯಮಂತ್ರಿ ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆ ಬಿಜೆಪಿ ಇಚ್ಛೆಯ ಮೇರೆಗೆ ಕೇಜ್ರಿವಾಲ್‌ಗೆ ಹಾನಿ ಮಾಡಲು ಅವಳು ಬಯಸಿದ್ದಳು ಎಂದು ಪಕ್ಷವು ಹೇಳಿಕೊಂಡಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಬಿಜೆಪಿ ಅಭ್ಯರ್ಥಿಗೆ ನಿಷೇಧ ಹೇರಿದ ಚುನಾವಣಾ ಆಯೋಗ

ಹಳೆಯ ಎಸಿಬಿ ಪ್ರಕರಣವನ್ನು ಬಲವಾಗಿ ಬಳಸಿಕೊಂಡು ಮಲಿವಾಲ್ ಬಿಭವ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಮಾಡಿದೆ ಎಂದು ಅತಿಶಿ ಸೋಮವಾರ ಹೇಳಿದ್ದಾರೆ. ಆಪಾದಿತ ಘಟನೆಯ ಸಮಯದಲ್ಲಿ ಕೇಜ್ರಿವಾಲ್ ಅವರ ನಿವಾಸದ ಹಲವಾರು ಸಿಸಿಟಿವಿ ಕ್ಲಿಪ್‌ಗಳನ್ನು ಎಎಪಿ ಬಿಡುಗಡೆ ಮಾಡಿದೆ, ಆಪಾದಿತ ಹಲ್ಲೆಯ ನಂತರ ಸ್ವಾತಿ ಮಲಿವಾಲ್ ಸಾಮಾನ್ಯವಾಗಿ ನಡೆದುಕೊಳ್ಳುತ್ತಿರುವುದನ್ನು ವಿಡಿಯೊಗಳು ತೋರಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ