AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ರೂಪಾಂತರ ವೈರಸ್​ಗಳಲ್ಲೆಲ್ಲ ಡೆಲ್ಟಾ ವೈರಾಣು ತುಂಬ ವೇಗವಾಗಿ ಹರಡಬಲ್ಲದು, ಅಪಾಯಕಾರಿಯೂ ಹೌದು: ವಿಶ್ವ ಆರೋಗ್ಯ ಸಂಸ್ಥೆ

ಸದ್ಯ ಕೊರೊನಾದ ನಾಲ್ಕು ರೂಪಾಂತರಗಳಾದ ಅಲ್ಪಾ, ಬೀಟಾ, ಗಾಮಾ ಮತ್ತು ಡೆಲ್ಟಾ ವೈರಾಣುಗಳು ಜಗತ್ತಿನಾದ್ಯಂತ ಪ್ರಸರಣಗೊಳುತ್ತಿವೆ. ಆದರೆ ಇವೆಲ್ಲವುಗಳಲ್ಲಿ ಡೆಲ್ಟಾ ಅತ್ಯಂತ ಅಪಾಯಕಾರಿ ಎಂದು ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.

ಕೊರೊನಾ ರೂಪಾಂತರ ವೈರಸ್​ಗಳಲ್ಲೆಲ್ಲ ಡೆಲ್ಟಾ ವೈರಾಣು ತುಂಬ ವೇಗವಾಗಿ ಹರಡಬಲ್ಲದು, ಅಪಾಯಕಾರಿಯೂ ಹೌದು: ವಿಶ್ವ ಆರೋಗ್ಯ ಸಂಸ್ಥೆ
ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್
TV9 Web
| Updated By: Lakshmi Hegde|

Updated on: Jun 26, 2021 | 12:49 PM

Share

ವಿಶ್ವಸಂಸ್ಥೆ: ಇದುವರೆಗೆ ಪತ್ತೆಯಾದ ಕೊರೊನಾ ರೂಪಾಂತರಿ ತಳಿಗಳಲ್ಲಿ ಡೆಲ್ಟಾ ಅತ್ಯಂತ ವೇಗವಾಗಿ ಹರಡಬಲ್ಲ ವೈರಾಣು ಆಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)ಯ ಜನರಲ್​ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ. ಈಗಿರುವ ರೂಪಾಂತರಿ ತಳಿಗಳ ಪೈಕಿ ಡೆಲ್ಟಾ ಅತ್ಯಂತ ಅಪಾಯಕಾರಿಯಾಗಿದೆ. ಇನ್ನೂ ಲಸಿಕೆ ಪಡೆಯದವರಿಗೆ ಅತ್ಯಂತ ವೇಗವಾಗಿ ಹರಡುತ್ತಿದೆ ಎಂದು ಅವರು ತಿಳಿಸಿದ್ದಾರೆ. ಡೆಲ್ಟಾ ರೂಪಾಂತರಿ ಬಗ್ಗೆ ಈಗ ಸಹಜವಾಗಿಯೇ ಆತಂಕ ಶುರುವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ವೈರಾಣು ಆತಂಕ ತಂದಿದೆ ಎಂದು ಶುಕ್ರವಾರ ಜಿನಿವಾದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ. ಡೆಲ್ಟಾ ರೂಪಾಂತರಿ ವೈರಾಣು ಮೊದಲು ಭಾರತದಲ್ಲಿ ಕಾಣಿಸಿಕೊಂಡಿದ್ದು, ಇದೀಗ 85 ದೇಶಗಳಲ್ಲಿ ಪತ್ತೆಯಾಗಿದೆ.

ಸದ್ಯ ಕೊರೊನಾದ ನಾಲ್ಕು ರೂಪಾಂತರಗಳಾದ ಅಲ್ಪಾ, ಬೀಟಾ, ಗಾಮಾ ಮತ್ತು ಡೆಲ್ಟಾ ವೈರಾಣುಗಳು ಜಗತ್ತಿನಾದ್ಯಂತ ಪ್ರಸರಣಗೊಳುತ್ತಿವೆ. ಆದರೆ ಇವೆಲ್ಲವುಗಳಲ್ಲಿ ಡೆಲ್ಟಾ ಅತ್ಯಂತ ಅಪಾಯಕಾರಿ. ಅಲ್ಪಾ ವೈರಾಣುವಿಗಿಂತಲೂ ವೇಗವಾಗಿ ಹರಡುತ್ತಿದೆ ಎಂದು ಘೆಬ್ರೆಯೆಸಸ್ ಹೇಳಿದ್ದಾರೆ. ಸದ್ಯ ಅಲ್ಪಾ ಯುರೋಪ್​ ದೇಶಗಳಲ್ಲಿ ದೊಡ್ಡ ತಲೆನೋವಾಗಿದ್ದು, ತುಂಬ ವೇಗವಾಗಿ ಪ್ರಸರಣ ಆಗುತ್ತಿದೆ ಎನ್ನಲಾಗಿದ್ದು, ಡೆಲ್ಟಾ ಅದಕ್ಕಿಂತಲೂ ಡೇಂಜರ್​ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಅಭಿಪ್ರಾಯಪಟ್ಟಿದೆ.

ಇರುವುದರಲ್ಲಿ ಕೊವಿಡ್​ 19 ಲಸಿಕೆ ಹಾಕಿಸಿಕೊಂಡರವಿಗೆ ಡೆಲ್ಟಾ ಅಷ್ಟೊಂದು ಬಾಧಿಸುತ್ತಿಲ್ಲ. ಡೆಲ್ಟಾದಿಂದ ಬಾಧಿಸಬಹುದಾದ ತೀವ್ರ ಮಟ್ಟದ ಕಾಯಿಲೆಗಳು, ಸಾವನ್ನು ನಿಯಂತ್ರಿಸಲು ಕೊವಿಡ್​ 19 ಲಸಿಕೆಗಳು ಅತ್ಯಂತ ಪರಿಣಾಮಕಾರಿಯಾಗಿದೆ. ವೈರಾಣು ವಿಕಾಸ ನಡೆಯುತ್ತಲೇ ಇರುತ್ತದೆ. ಆದರೆ ನಾವೀಗ ಬೇಕಾದಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ನಮ್ಮ ಸಾರ್ವಜನಿಕ ಆರೋಗ್ಯ, ಸಾಮಾಜಿಕ ನಿಯಂತ್ರಣ ಕ್ರಮಗಳು, ನಮ್ಮ ಲಸಿಕೆ ಅಭಿಯಾನಗಳು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!