AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೀಗ ಡೆಲ್ಟಾ ಪ್ಲಸ್ ರೂಪಾಂತರಿಯ ಅಪಾಯ: ಇದು ಅಪಾಯಕಾರಿ ಎಂದು ಘೋಷಿಸಿದ ಕೇಂದ್ರ

ಈವರೆಗೆ ಈ ಪ್ರಭೇದವನ್ನು ಆಸಕ್ತಿಕರ ಎಂದು ಘೋಷಿಸಿದ್ದ ಕೇಂದ್ರ ಸರ್ಕಾರ, ಇದೀಗ ಈ ರೂಪಾಂತರಿ ಕಳವಳಕಾರಿ ಎಂದು ಘೋಷಿಸಿದೆ. ಮಹಾರಾಷ್ಟ್ರದ 22 ಸೋಂಕಿತರಲ್ಲಿ ಈ ವೈರಾಣು ಕಾಣಿಸಿದೆ.

ಭಾರತಕ್ಕೀಗ ಡೆಲ್ಟಾ ಪ್ಲಸ್ ರೂಪಾಂತರಿಯ ಅಪಾಯ: ಇದು ಅಪಾಯಕಾರಿ ಎಂದು ಘೋಷಿಸಿದ ಕೇಂದ್ರ
ಡೆಲ್ಟಾ ಪ್ಲಸ್ ರೂಪಾಂತರಿ
TV9 Web
| Edited By: |

Updated on: Jun 22, 2021 | 10:51 PM

Share

ಕೊರೊನಾ ವೈರಾಣುಗಳ ಮತ್ತೊಂದು ರೂಪವಾದ ಡೆಲ್ಟಾದ ಹೊಸ ರೂಪ ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣುಗಳು ಇದೀಗ ಭಾರತದಲ್ಲಿ ದೊಡ್ಡ ತಲೆನೋವಾಗಿ ಪರಿಗಣಮಿಸಿವೆ. ಈವರೆಗೆ ಈ ಪ್ರಭೇದವನ್ನು ಆಸಕ್ತಿಕರ ಎಂದು ಘೋಷಿಸಿದ್ದ ಕೇಂದ್ರ ಸರ್ಕಾರ, ಇದೀಗ ಈ ರೂಪಾಂತರಿ ಕಳವಳಕಾರಿ ಎಂದು ಘೋಷಿಸಿದೆ. ಮಹಾರಾಷ್ಟ್ರದ 22 ಸೋಂಕಿತರಲ್ಲಿ ಈ ವೈರಾಣು ಕಾಣಿಸಿದೆ. ಕೇರಳ ಮತ್ತು ಮಧ್ಯಪ್ರದೇಶದಲ್ಲಿ ಪತ್ತೆಯಾದ ಕೆಲ ಸೋಂಕಿತರಲ್ಲಿಯೂ ಈ ಪ್ರಭೇದದ ವೈರಾಣು ಇಂದು ಸಂಜೆ ಪತ್ತೆಯಾಗಿದೆ.

ಭಾರತವು ಇದೀಗ ತಾನೆ ಕೊರೊನಾ 2ನೇ ಅಲೆಯ ಪ್ರಭಾವದಿಂದ ಬಿಡಿಸಿಕೊಳ್ಳುತ್ತಿದೆ. ಆದರೆ ಈ ಹಂತದಲ್ಲಿ ಕಾಣಿಸಿಕೊಳ್ಳುತ್ತಿರುವ ಡೆಲ್ಟಾ ಪ್ಲಸ್​ ರೂಪಾಂತರಿಯು ಹೊಸ ತಲೆಬಿಸಿ ತಂದೊಡ್ಡಿದೆ. ಮಹಾರಾಷ್ಟ್ರದ ರತ್ನಗಿರಿ ಮತ್ತು ಜಲಗಾವ್​, ಕೇರಳದ ಪಾಲಕ್ಕಾಡ್ ಮತ್ತು ಪತ್ತನಂತಿಟ್ಟ, ಮಧ್ಯ ಪ್ರದೇಶದ ಭೋಪಾಲ್ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್​ ವೈರಾಣು ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಜಿಲ್ಲೆಗಳಲ್ಲಿ ಕಂಟೇನ್​ಮೆಂಟ್ ವಲಯಗಳನ್ನು ರೂಪಿಸಲು ಮುಖ್ಯ ಕಾರ್ಯದರ್ಶಿಗಳು ತಕ್ಷಣ ಕ್ರಮಕೈಗೊಳ್ಳಬೇಕು. ಜನರು ಗುಂಪು ಸೇರದಂತೆ ಗಮನ ಕೊಡಬೇಕು. ಟೆಸ್ಟಿಂಗ್​ ಪ್ರಮಾಣ ಹೆಚ್ಚಿಸಬೇಕು. ಸೋಂಕಿತರ ಸಂಪರ್ಕಿರನ್ನು ಪತ್ತೆಹಚ್ಚಲು ಗಮನ ಕೊಡಬೇಕು. ಈ ಪ್ರದೇಶದಲ್ಲಿ ಲಸಿಕಾಕರಣಕ್ಕೆ ಆದ್ಯತೆ ಸಿಗಬೇಕು ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸಜ್ಜುಗೊಳಿಸುವ ಕುರಿತು, ವಿಸ್ತೃತ ಮಾಹಿತಿ ನೀಡಲಾಗಿದೆ. ಈ ಹಿಂದೆ ನೀಡಿದ್ದ ಸೂಚನೆಗಳಿಗೆ ಅನುಗುಣವಾಗಿಯೇ ಮುಂದಿನ ಚಿಕಿತ್ಸಾ ಕ್ರಮವೂ ನಡೆಯಬೇಕು. ಸಣ್ಣ ಸಂಖ್ಯೆಯಲ್ಲಿ ಶುರುವಾಗಿರುವ ಈ ಅಪಾಯ ದೊಡ್ಡಮಟ್ಟದಲ್ಲಿ ಬೆಳೆಯುವುದು ನಮಗೆ ಬೇಕಿಲ್ಲ ಎಂದು ಲಸಿಕಾಕರಣ ನಿರ್ವಹಣೆಗಾಗಿ ರೂಪಿಸಿರುವ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ವಿ.ಕೆ.ಪೌಲ್ ತಿಳಿಸಿದ್ದಾರೆ.

ಕೆಲವೇ ಕೆಲ ಸಂಖ್ಯೆಗಳಲ್ಲಿ ವರದಿಯಾಗುತ್ತಿರುವ ಸೋಂಕು ಮುಂದಿನ ದಿನಗಳಲ್ಲಿ ಬೃಹತ್ ಪ್ರಮಾಣದಲ್ಲಿ ವಿಸ್ತರಿಸುವ ಅಪಾಯವಿದೆ ಎಂದು ಮಹಾರಾಷ್ಟ್ರದ ತಜ್ಞರು ಹೇಳಿದ್ದಾರೆ. ಈಗಲೇ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಕೊರೊನಾ ಸೋಂಕಿನ 3ನೇ ಅಲೆಯು ಅಂದುಕೊಂಡಿದ್ದಕ್ಕಿಂತಲೂ ಬೇಗ ಅಪ್ಪಳಿಸಬಹುದು ಎಂದು ಎಚ್ಚರಿಸಿದ್ದಾರೆ.

ವೈರಾಣುವಿನ ಈ ರೂಪಾಂತರದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ. ಭಾರತದ ಹೊರತಾಗಿ ಅಮೆರಿಕ, ಬ್ರಿಟನ್, ಪೋರ್ಚುಗಲ್, ಸ್ವಿಟ್ಜರ್​ಲೆಂಡ್, ಜಪಾನ್, ಪೊಲೆಂಡ್, ರಷ್ಯಾ ಮತ್ತು ಚೀನಾ ದೇಶಗಳಲ್ಲಿ ಈ ರೂಪಾಂತರಿ ವೈರಾಣು ಪತ್ತೆಯಾಗಿದೆ. ಈ ರೂಪಾಂತರಿ ವೈರಾಣು ಇಲ್ಲಿಂದಾಚೆಗೆ ಹೇಗೆ ವರ್ತಿಸಬಹುದು ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ. ನಾವು ಈಗಾಗಲೇ ಗಮನಿಸಿರುವ ಕೆಲ ರೂಪಾಂತರಿಗಳು ಮೂಲ ವೈರಾಣುಗಳಿಗಿಂತಲೂ ವಿಭಿನ್ನವಾದ ರೀತಿಯಲ್ಲಿ ವರ್ತಿಸಿರುವುದನ್ನು ಗಮನಿಸಿದ್ದೇವೆ ಎಂದು ಕೊವಿಡ್​ ನಿರ್ವಹಣೆಗಾಗಿ ರಚಿಸಿರುವ ಮಹಾರಾಷ್ಟ್ರ ಕಾರ್ಯಪಡೆಯ ಸದಸ್ಯ ಓಂ ಶ್ರೀವಾತ್ಸವ ಹೇಳಿದ್ದಾರೆ.

ವಿಶ್ವದ ಇತರ ದೇಶಗಳಲ್ಲಿ ಡೆಲ್ಟಾ ಅಲೆಯು ಅತ್ಯಂತ ಅಪಾಯಕಾರಿಯಾಗಿ ವರ್ತಿಸಿದೆ. ವೇಗವಾಗಿ ಸೋಂಕು ಹರಡುವ ಜೊತೆಗೆ ಹೆಚ್ಚಿನ ಸಂಖ್ಯೆಯ ಜನರನ್ನು ವೇಗವಾಗಿ ಬಾಧಿಸಿದೆ ಎಂದು ಹೇಳಿದರು. ಪ್ರತಿ ಜಿಲ್ಲೆಯಲ್ಲಿಯೂ ತಲಾ 100 ಮಾದರಿಗಳ ಜಿನೋವ್ ಸೀಕ್ವೆನ್ಸ್​ ಮಾಡಲಾಗಿದೆ. ಮೇ 15ರಿಂದ ಈವರೆಗೆ 7,500 ಮಾದರಿಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 21 ಮಾದರಿಗಳಲ್ಲಿ ಡೆಲ್ಟಾ ಪ್ಲಸ್ ಸೋಂಕು ಪತ್ತೆಯಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ತೊಪಿ ಹೇಳಿದ್ದಾರೆ.

ವಿಶ್ವದ 80 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ. ಇದರಂತೆಯೇ ಡೆಲ್ಟಾ ಪ್ಲಸ್ ಸಹ ವೇಗವಾಗಿ ಹರಡುವ ಮತ್ತು ತೀವ್ರ ಸೋಂಕು ಉಂಟು ಮಾಡುವ ರೂಪಾಂತರಿ ಎನಿಸಿದೆ. ಸೋಂಕಿತರ ಶ್ವಾಸಕೋಶದ ಜೀವಕೋಶಗಳನ್ನು ತೀವ್ರವಾಗಿ ಬಾಧಿಸುವ ಈ ವೈರಾಣು, ಪ್ರತಿಕಾಯಗಳ ವ್ಯವಸ್ಥೆಯನ್ನೂ ಹಾಳುಗೆಡವುತ್ತದೆ. ಪ್ರಸ್ತುತ ಚಾಲ್ತಿಯಲ್ಲಿರುವ ಕೊವಿಡ್ ಚಿಕಿತ್ಸಾ ಕ್ರಮಗಳು ಡೆಲ್ಟಾ ರೂಪಾಂತರಿಯ ವಿರುದ್ಧವೂ ಪರಿಣಾಮಕಾರಿಯಾಗಬಲ್ಲುದೆ ಎಂಬ ಬಗ್ಗೆ ಅನುಮಾನಗಳಿವೆ. ಲಸಿಕೆಗಳಿಂದ ಎಷ್ಟರಮಟ್ಟಿಗೆ ಪ್ರಯೋಜನವಾದೀತು ಎಂಬ ಬಗ್ಗೆಯೂ ಪ್ರಶ್ನೆಗಳಿವೆ.

ಭಾರತದಲ್ಲಿ ಉತ್ಪಾದನೆಯಾಗುತ್ತಿರುವ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಡೆಲ್ಟಾ ರೂಪಾಂತರದ ವಿರುದ್ಧವೂ ಪರಿಣಾಮಕಾರಿ ಎಂದು ಸರ್ಕಾರವು ಹೇಳಿದೆ. ಜಿನೋಮ್ ತಪಾಸಣೆ ನಡೆಸುತ್ತಿರುವ ಇನ್​ಸಾಕೊಗ್​ ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಕೊರೊನಾ ವೈರಾಣುವಿನ ಅಪಾಯಕಾರಿ ರೂಪಾಂತರಿ ಎಂದು ಘೋಷಿಸಿದೆ.

(Delta Plus Infections Found in Maharashtra India to face new Danger in its fight against coronavirus)

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

ಇದನ್ನೂ ಓದಿ: ಭಾರತದ ಮೂರು ರಾಜ್ಯಗಳಲ್ಲಿ ಕೊರೋನಾವೈರಸ್​ನ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ; ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?