AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೂರು ರಾಜ್ಯಗಳಲ್ಲಿ ಕೊರೋನಾವೈರಸ್​ನ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ; ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು

ನೀತಿ ಆಯೋಗದ ಸದಸ್ಯರೊಬ್ಬರು, ಡೆಲ್ಟಾ ಪ್ಲಸ್ ರೂಪಾಂತರಿ ಇದುವರೆಗೆ ಕಳವಳ ಹುಟ್ಟಿಸುವ ರೂಪಾಂತರಿಯಾಗಿ ವರ್ಗೀಕೃತಗೊಂಡಿಲ್ಲ ಎಂದು ಹೇಳಿದ್ದಾರೆ. ಈ ರೂಪಾಂತರಿಯು ಮೊಟ್ಟ ಮೊದಲ ಬಾರಿಗೆ ಮಾರ್ಚ್​ನಲ್ಲಿ ಯುರೋಪ್​ನಲ್ಲಿ ಪತ್ತೆಯಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತದ ಮೂರು ರಾಜ್ಯಗಳಲ್ಲಿ ಕೊರೋನಾವೈರಸ್​ನ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ; ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಪ್ರಕರಣಗಳು
ಡೆಲ್ಟಾ ಪ್ಲಸ್ ರೂಪಾಂತರಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 22, 2021 | 4:12 PM

Share

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾವೈರಸ್ ರೂಪಾಂತರಿ ಡೆಲ್ಟಾ ಪ್ಲಸ್ ಅಥವಾ ಎವೈ.1 ಮೊದಲ ಬಾರಿಗೆ ಭಾರತದಲ್ಲೇ ಕಾಣಿಸಿಕೊಂಡಿರೋದು ಅಂತ ಹೇಳುತ್ತಿರುವ ಬೆನ್ನಲ್ಲೇ ಅದರ ಪ್ರಕರಣಗಳು ಭಾರತದ ಮೂರು ರಾಜ್ಯಗಳಲ್ಲಿ ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕೇರಳ ರಾಜ್ಯಗಳಲ್ಲಿ ಕಂಡುಬಂದಿವೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಜೂನ್​ 21 ರಂದು ನೀಡಿರುವ ಹೇಳಿಕೆಯೊಂದರಲ್ಲಿ ಡೆಲ್ಟ್ ಪ್ಲಸ್ ರೂಪಾಂತರಿ ವೈರಸ್​ ನಿಂದ ಸೃಷ್ಟಿಯಾಗಿರುವ 21 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಎಲ್ಲಕ್ಕಿಂತ ಹೆಚ್ಚು ಅಂದರೆ 9 ಪ್ರಕರಣಗಳು ರತ್ನಾಗಿರಿ ಜಿಲ್ಲೆಯಲ್ಲಿ ವರದಿಯಾಗಿದ್ದರೆ, ಜಲಗಾಂವ್​ನಲ್ಲಿ 7, ಮುಂಬೈನಲ್ಲಿ 2 ಮತ್ತು ಪಲ್ಘಾರ್. ಠಾಣೆ ಮತ್ತು ಸಿಂಧುದುರ್ಗ್ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ ಎಂದು ಟೋಪೆ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದ ಐವರು ಕೋವಿಡ್​ ಸೋಂಕಿತರಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕಂಡುಬಂದಿದೆ ಎಂದು ಈ ರಾಜ್ಯದ ಆರೋಗ್ಯ ಸಚಿವ ಪ್ರಭುರಾಮ್ ಚೌಧರಿ ಹೇಳಿದ್ದಾರೆ.

‘ಮಧ್ಯಪ್ರದೇಶದಲ್ಲಿ ಇದುವರಗೆ ಡೆಲ್ಟಾ ಪ್ಲಸ್ ರೂಪಾಂತರಿ 5 ಪ್ರಕರಣಗಳು ಪತ್ತೆಯಾಗಿವೆ. ಲಸಿಕೆ ಪಡೆದ ಐವರಲ್ಲಿ ನಾಲ್ವರು ಅರೋಗ್ಯವಂತರಾಗಿದ್ದರೆ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ,’ ಎಂದು ಚೌಧರಿ ಎ ಎನ್ ಐ ಸುದ್ದಿಸಂಸ್ಥೆ ಜೊತೆ ಮಾತಾಡುವಾಗ ಹೇಳಿದ್ದಾರೆ.

ಕೇರಳದ ಅಧಿಕಾರಿಗಳು ಪಿ ಟಿ ಐಗೆ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದ ಎರಡು ಜಿಲ್ಲೆಗಳು-ಪಲಕ್ಕಾಡ್ ಮತ್ತು ಪಥನಂತಿಟ್ಟಗಳಲ್ಲಿ ಕೋವಿಡ್​-19 ಸೋಂಕಿತರಿಂದ ಸಂಗ್ರಹಿಸಿದ ಸ್ಯಾಂಪಲ್​ಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕಂಡುಬಂದಿದೆ.

ಪಥನಂತಿಟ್ಟ ಜಿಲ್ಲಾ ಕಲೆಕ್ಟರ್ ನರಸಿಂಭುಗಾರಿ ಟಿಎಲ್ ರೆಡ್ಡಿ ಅವರು ಜಿಲ್ಲೆಯ ಕಡಪರ ಪಂಚಾಯತ್​ನಲ್ಲಿ ಒಬ್ಬ ನಾಲ್ಕು ವರ್ಷದ ಬಾಲಕ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಸೋಂಕಿತನಾಗಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ನೀತಿ ಆಯೋಗದ ಸದಸ್ಯರೊಬ್ಬರು, ಡೆಲ್ಟಾ ಪ್ಲಸ್ ರೂಪಾಂತರಿ ಇದುವರೆಗೆ ಕಳವಳ ಹುಟ್ಟಿಸುವ ರೂಪಾಂತರಿಯಾಗಿ ವರ್ಗೀಕೃತಗೊಂಡಿಲ್ಲ ಎಂದು ಹೇಳಿದ್ದಾರೆ. ಈ ರೂಪಾಂತರಿಯು ಮೊಟ್ಟ ಮೊದಲ ಬಾರಿಗೆ ಮಾರ್ಚ್​ನಲ್ಲಿ ಯುರೋಪ್​ನಲ್ಲಿ ಪತ್ತೆಯಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

‘ಪ್ರಸಕ್ತ ವಿದ್ಯಮಾನಗಳ ಬಗ್ಗೆ ಹೇಳಬೇಕಾದರೆ, ಹೌದು ಕೊರೋನಾವೈರಸ್​ನ ಒಂದು ಹೊಸ ರೂಪಾಂತರಿಯನ್ನು ಪತ್ತೆ ಮಾಡಲಾಗಿದೆ. ಈವರೆಗೆ ಇದು ವೇರಿಯಂಟ್​ ಆಫ್ ಇಂಟ್ರಸ್ಟ್ (ವಿಒಐ) ಎಂದು ವರ್ಗೀಕರಿಸಲಾಗಿದೆಯೇ ಹೊರತು ವೇರಿಯಂಟ್ ಆಫ್ ಕನ್ಸರ್ನ್ (ವಿಒಸಿ) ಆಗಿ ಅಲ್ಲ. ನಮಗೆ ಮಾಹಿತಿಯಿರುವ ಹಾಗೆ ತೀವ್ರವಾಗಿ ಹರಡುವ ಸಾಮರ್ಥ್ಯ ಹೊಂದಿರುವ ಅಥವಾ ಹೆಚ್ಚು ಅಪಾಯಕಾರಿಯಾಗಿರುವ ಕಾರಣ ವಿಒಸಿ ಮಾನವಕುಲದ ಮೇಲೆ ಹೆಚ್ಚಿನ ದುಷ್ಪರಿಣಾಮಗಳನ್ನು ಉಂಟು ಮಾಡುತ್ತದೆ. ಡೆಲ್ಟಾ ಪ್ಲಸ್ ರೂಪಾಂತರಿಯು ಇದೇ ಪ್ರಕಾರದ್ದೇ ಎನ್ನುವ ಕುರಿತು  ಮಾಹಿತಿ ನಮ್ಮಲ್ಲಿ ಇಲ್ಲ,’ ಎಂದು ಅವರು ಹೇಳಿದ್ದಾರೆ.

ಡೆಲ್ಟಾ ಪ್ಲಸ್ ರೂಪಾಂತರಿಯು B.1.617 ಪ್ರಬೇಧಕ್ಕೆ ಸೇರಿದ್ದಾಗಿದೆ. ಈ ವರ್ಷದ ಆರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು B.1.617 (ಡೆಲ್ಟ್) ರೂಪಾಂತರಿಯನ್ನು ವೇರಿಯಂಟ್ ಆಫ್ ಕನ್ಸರ್ನ್ ಅಂತ ವರ್ಗೀಕರಿಸಿದೆ.

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ