Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾಸಕೋಶದ ಮೇಲೆ ಡೆಲ್ಟಾ ಪ್ಲಸ್​ ಪರಿಣಾಮ ಹೀಗಿದೆ; ಕೊರೊನಾ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಇಲ್ಲ: ಡಾ.ಎನ್​.ಕೆ.ಅರೋರಾ

Delta Plus Variant: ಯಾವ ವ್ಯಕ್ತಿ ಕೊರೊನಾ ಲಸಿಕೆಯ ಎರಡು ಅಥವಾ ಒಂದು ಡೋಸ್‌ ಪಡೆದಿರುತ್ತಾರೋ ಅವರ ಮೇಲೆ ಡೆಲ್ಟಾ ಪ್ಲಸ್ ತಳಿಯು ಕನಿಷ್ಠ ಪರಿಣಾಮ ಬೀರಲಿದೆ ಎನ್ನುವುದಂತೂ ಈವರೆಗಿನ ಅಧ್ಯಯನದಿಂದ ತಿಳಿದುಬಂದಿದೆ ಎಂದು ಡಾ. ಅರೋರಾ ಸುದ್ದಿ ಸಂಸ್ಥೆ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಶ್ವಾಸಕೋಶದ ಮೇಲೆ ಡೆಲ್ಟಾ ಪ್ಲಸ್​ ಪರಿಣಾಮ ಹೀಗಿದೆ; ಕೊರೊನಾ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಇಲ್ಲ: ಡಾ.ಎನ್​.ಕೆ.ಅರೋರಾ
ಶ್ವಾಸಕೋಶ (ಸಾಂಕೇತಿಕ ಚಿತ್ರ)
Follow us
TV9 Web
| Updated By: Skanda

Updated on: Jun 28, 2021 | 8:16 AM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ದುರ್ಬಲವಾಗುತ್ತಿದೆ ಎಂದು ಭಾವಿಸುವಷ್ಟರಲ್ಲಿ ಡೆಲ್ಟಾ ಪ್ಲಸ್​ ಮಾದರಿಯ ವೈರಾಣು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಎರಡನೇ ಅಲೆಯ ತೀವ್ರತೆಗೆ ಕಾರಣವಾದ ಡೆಲ್ಟಾ ವೈರಾಣುವಿನ ರೂಪಾಂತರಿಯಾಗಿರುವ ಡೆಲ್ಟಾ ಪ್ಲಸ್​, ಇನ್ನೂ ಅಧಿಕ ಮಟ್ಟದ ಅಪಾಯ ಸೃಷ್ಟಿಸಬಹುದು ಎಂಬ ಆತಂಕವನ್ನು ಈಗಾಗಲೇ ತಜ್ಞರ ಕೆಲ ವರದಿಗಳಲ್ಲಿ ವ್ಯಕ್ತಪಡಿಸಲಾಗಿದೆ. ಆದರೆ, ಇದೇ ವಿಚಾರದ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ತಾಂತ್ರಿಕ ಸಲಾಹಾ ಸಮಿತಿ (ಎನ್​ಟಿಎಜಿಐ) ಮುಖ್ಯಸ್ಥ ಡಾ.ಎನ್​.ಕೆ.ಅರೋರಾ, ಈ ಹಿಂದೆ ಇದ್ದ ಕೊರೊನಾ ವೈರಾಣು ಮಾದರಿಗಳಿಗೆ ಹೋಲಿಸಿದರೆ ಡೆಲ್ಟಾ ಪ್ಲಸ್​ ಶ್ವಾಸಕೋಶದ ಅಂಗಾಂಶಗಳತ್ತ ಹೆಚ್ಚು ಆಕರ್ಷಿತವಾಗುವ ಗುಣ ಹೊಂದಿದೆ ಎಂದ ಮಾತ್ರಕ್ಕೆ ಅತ್ಯಂತ ಗಂಭೀರ ಪ್ರಮಾಣದ ಹಾನಿ ಉಂಟುಮಾಡಬಹುದು ಅಥವಾ ಇನ್ನೂ ವೇಗವಾಗಿ ಪಸರಿಸಬಹುದು ಎಂದು ಹೇಳಲಾಗುವುದಿಲ್ಲ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇಲ್ಲಿಯ ತನಕ ಕಂಡುಬಂದ ಬೇರೆ ತಳಿಗಳಿಗೆ ಹೋಲಿಸಿದರೆ ಡೆಲ್ಟಾ ಪ್ಲಸ್​ ರೂಪಾಂತರಿಯು ಶ್ವಾಸಕೋಶದತ್ತ ಬಲುಬೇಗನೇ ಆಕರ್ಷಿತವಾಗಬಹುದು. ಆದರೆ ಅದು ಹೆಚ್ಚು ಹಾನಿ ಉಂಟುಮಾಡುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಈಗಲೇ ಹೇಳಲು ಸ್ಪಷ್ಟತೆ ಸಿಕ್ಕಿಲ್ಲ. ಹೆಚ್ಚು ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದರೆ ಈ ತಳಿಯ ಪರಿಣಾಮ ಏನೆಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಬಹುದು. ಆದರೆ, ಯಾವ ವ್ಯಕ್ತಿ ಕೊರೊನಾ ಲಸಿಕೆಯ ಎರಡು ಅಥವಾ ಒಂದು ಡೋಸ್‌ ಪಡೆದಿರುತ್ತಾರೋ ಅವರ ಮೇಲೆ ಡೆಲ್ಟಾ ಪ್ಲಸ್ ತಳಿಯು ಕನಿಷ್ಠ ಪರಿಣಾಮ ಬೀರಲಿದೆ ಎನ್ನುವುದಂತೂ ಈವರೆಗಿನ ಅಧ್ಯಯನದಿಂದ ತಿಳಿದುಬಂದಿದೆ ಎಂದು ಡಾ. ಅರೋರಾ ಸುದ್ದಿ ಸಂಸ್ಥೆ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಡೆಲ್ಟಾ ಪ್ಲಸ್ ತಳಿಯ ಪ್ರಸರಣದ ವೇಗ ಯಾವ ಪ್ರಮಾಣದಲ್ಲಿ ಇದೆ ಎನ್ನುವುದನ್ನು ತಿಳಿಯಬೇಕಾದರೆ ಅದರ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು. ಡೆಲ್ಟಾ ಪ್ಲಸ್‌ ಸೋಂಕಿತರ ಪೈಕಿ ಹೆಚ್ಚಿನವರಲ್ಲಿ ರೋಗಲಕ್ಷಣಗಳು ಕಾಣಿಸುವುದಿಲ್ಲ. ಆದ್ದರಿಂದ ಈಗ ಪತ್ತೆಯಾಗಿರುವುದಕ್ಕಿಂತಲೂ ಅಧಿಕ ಮಂದಿ ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ. ಇಂಥವರು ವೈರಾಣುವಿನ ಪ್ರಮುಖ ವಾಹಕರಾಗುವ ಸಾಧ್ಯತೆ ಇದೆ. ನಮ್ಮ ವಿಜ್ಞಾನಿಗಳು ಈ ತಳಿಯನ್ನು ಬೇಗನೆ ಪತ್ತೆ ಹಚ್ಚಿದ್ದಾರೆ. ಈಗ ಇದರ ಮೇಲೆ ನಿಗಾ ವಹಿಸಬೇಕು, ಪ್ರಸರಣ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಗಳಿಗೆ ಸೂಚನೆಯನ್ನೂ ನೀಡಲಾಗಿದೆ. ಸೂಕ್ತ ಕ್ರಮ ಕೈಗೊಂಡರೆ ಈ ತಳಿಯ ಪ್ರಸರಣ ನಿಯಂತ್ರಿಸುವುದು ಸುಲಭವಾಗಬಹುದು. ಇದರ ಜತೆಗೆ, ಲಸಿಕೆ ನೀಡಿಕೆಯ ವೇಗವನ್ನು ಹೆಚ್ಚಿಸುವತ್ತಲೂ ಗಮನ ಹರಿಸುವುದು ಅವಶ್ಯಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡೆಲ್ಟಾ ಪ್ಲಸ್‌ ಮಾದರಿಯಿಂದಾಗಿ ದೇಶದಲ್ಲಿ ಕೊರೊನಾ ಮೂರನೇ ಅಲೆ ಏಳಬಹುದೇ ಎಂಬುದನ್ನು ಈಗಲೇ ಹೇಳುವುದು ಕಷ್ಟ. ರೂಪಾಂತರಿ ತಳಿಗಳೇ ಹೊಸ ಅಲೆಗೆ ಕಾರಣವಾಗಿರುತ್ತವೆ ಎನ್ನುವುದು ನಿಜ. ಹೀಗಾಗಿ ಡೆಲ್ಟಾ ಪ್ಲಸ್‌ ರೂಪಾಂತರಗೊಂಡ ತಳಿಯಾಗಿರುವುದರಿಂದ ಮೂರನೇ ಅಲೆ ಸೃಷ್ಟಿಸುವ ಸಾಧ್ಯತೆಯನ್ನು ಖಡಾಖಂಡಿತವಾಗಿ ಅಲ್ಲಗಳೆಯಲಾಗದು. ಆದರೆ ಮೂರನೇ ಅಲೆಯು ಇದರ ಜತೆಗೆ ಇನ್ನೂ ಕೆಲವು ವಿಚಾರಗಳನ್ನು ಅವಲಂಬಿಸಿರುತ್ತದೆ ಎನ್ನುವುದನ್ನು ಗಮನಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಕೊವಿಡ್ ಮೂರನೇ ಅಲೆಗೆ ಕಾರಣವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸುವುದು ಕಷ್ಟ: ಡಾ.ಎನ್‌.ಕೆ.ಅರೋರಾ 

Delta Plus Variant: ಡೆಲ್ಟಾ ಪ್ಲಸ್​ ಮಾದರಿಯ ಪ್ರಾಥಮಿಕ ಹಂತದ ಗುಣಲಕ್ಷಣಗಳೇನು?

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!