AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 27, 2021 | 9:44 AM

Share

ದೆಹಲಿ: ಕೊರೊನಾ ರೂಪಾಂತರ ತಳಿಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಾಣುಗಳು ಅತ್ಯಂತ ಮಾರಣಾಂತಿಕವಾಗಿದ್ದು, ಅತಿ ವೇಗವಾಗಿ ಹರಡಬಲ್ಲವು ಎಂದು ಹೇಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಇದನ್ನೇ ಹೇಳಿದೆ. ಹಾಗೇ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ(ಐಸಿಎಂಆರ್​) ಮಾಜಿ ಮುಖ್ಯ ವಿಜ್ಞಾನಿ ರಾಮನ್ ಗಂಗಖೇಡ್ಕರ್ ಕೂಡ ಇದೇ ವಿಚಾರವನ್ನು ಹೊರಹಾಕಿದ್ದಾರೆ. ಅದರೊಂದಿಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಸ್​​ಗಳು ನರ ನರವೈಜ್ಞಾನಿಕ ಸಂಬಂಧ ಕಾಯಿಲೆಗಳನ್ನು ಉಂಟು ಮಾಡಬಲ್ಲವು ಎಂದು ಹೇಳಿದ್ದಾರೆ.

ಡೆಲ್ಟಾ ರೂಪಾಂತರಿ ವೈರಸ್​​ಗಳು ಕೋಶದಿಂದ ಕೋಶಕ್ಕೆ ವರ್ಗಾವಣೆಯಾಗಬಲ್ಲವು. ಇದು ಒಮ್ಮೆ ಮಿದುಳಿಗೆ ತಗುಲಿದರೆ ಸಾಮಾನ್ಯವಾಗಿ ನರವೈಜ್ಞಾನಿಕ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಡೆಲ್ಟಾ ವೈರಸ್​ ನಮ್ಮ ದೇಹದೊಳಗೆ ಯಾವ ಅಂಗಕ್ಕೆ ತಗುಲುತ್ತದೆಯೂ ಅದಕ್ಕೆ ಸಂಬಂಧಪಟ್ಟ ರೋಗ ಲಕ್ಷಣವನ್ನು ಹೊರಹಾಕುತ್ತದೆ. ಆ ನಿರ್ದಿಷ್ಟ ಅಂಗಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ರಾಮನ್​ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ. ಉಳಿದೆಲ್ಲ ರೂಪಾಂತರಿ ವೈರಸ್​ಗಳಿಗೆ ಹೋಲಿಸಿದರೆ ಡೆಲ್ಟಾ ಅತ್ಯಂತ ವೇಗವಾಗಿ ಹರಡುತ್ತದೆ ಎಂದು ಹೇಳಿದ್ದಾರೆ. ಡೆಲ್ಟಾ ವೈರಸ್​ ಕಂಡು ಬಂದ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಕಂಟೈನ್​ಮೆಂಟ್​ ಝೋನ್​ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಜನರು ಗುಂಪುಗೂಡುವನ್ನು ತಡೆಯಬೇಕು. ತಪಾಸಣೆ ಪ್ರಮಾಣ ಹೆಚ್ಚಿಸಬೇಕು ಮತ್ತು ಲಸಿಕೆ ನೀಡುವ ವೇಗವನ್ನೂ ಹೆಚ್ಚಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್

Published On - 9:42 am, Sun, 27 June 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!