AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jun 27, 2021 | 9:44 AM

ದೆಹಲಿ: ಕೊರೊನಾ ರೂಪಾಂತರ ತಳಿಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಾಣುಗಳು ಅತ್ಯಂತ ಮಾರಣಾಂತಿಕವಾಗಿದ್ದು, ಅತಿ ವೇಗವಾಗಿ ಹರಡಬಲ್ಲವು ಎಂದು ಹೇಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಇದನ್ನೇ ಹೇಳಿದೆ. ಹಾಗೇ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ(ಐಸಿಎಂಆರ್​) ಮಾಜಿ ಮುಖ್ಯ ವಿಜ್ಞಾನಿ ರಾಮನ್ ಗಂಗಖೇಡ್ಕರ್ ಕೂಡ ಇದೇ ವಿಚಾರವನ್ನು ಹೊರಹಾಕಿದ್ದಾರೆ. ಅದರೊಂದಿಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಸ್​​ಗಳು ನರ ನರವೈಜ್ಞಾನಿಕ ಸಂಬಂಧ ಕಾಯಿಲೆಗಳನ್ನು ಉಂಟು ಮಾಡಬಲ್ಲವು ಎಂದು ಹೇಳಿದ್ದಾರೆ.

ಡೆಲ್ಟಾ ರೂಪಾಂತರಿ ವೈರಸ್​​ಗಳು ಕೋಶದಿಂದ ಕೋಶಕ್ಕೆ ವರ್ಗಾವಣೆಯಾಗಬಲ್ಲವು. ಇದು ಒಮ್ಮೆ ಮಿದುಳಿಗೆ ತಗುಲಿದರೆ ಸಾಮಾನ್ಯವಾಗಿ ನರವೈಜ್ಞಾನಿಕ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಡೆಲ್ಟಾ ವೈರಸ್​ ನಮ್ಮ ದೇಹದೊಳಗೆ ಯಾವ ಅಂಗಕ್ಕೆ ತಗುಲುತ್ತದೆಯೂ ಅದಕ್ಕೆ ಸಂಬಂಧಪಟ್ಟ ರೋಗ ಲಕ್ಷಣವನ್ನು ಹೊರಹಾಕುತ್ತದೆ. ಆ ನಿರ್ದಿಷ್ಟ ಅಂಗಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ರಾಮನ್​ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ. ಉಳಿದೆಲ್ಲ ರೂಪಾಂತರಿ ವೈರಸ್​ಗಳಿಗೆ ಹೋಲಿಸಿದರೆ ಡೆಲ್ಟಾ ಅತ್ಯಂತ ವೇಗವಾಗಿ ಹರಡುತ್ತದೆ ಎಂದು ಹೇಳಿದ್ದಾರೆ. ಡೆಲ್ಟಾ ವೈರಸ್​ ಕಂಡು ಬಂದ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಕಂಟೈನ್​ಮೆಂಟ್​ ಝೋನ್​ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಜನರು ಗುಂಪುಗೂಡುವನ್ನು ತಡೆಯಬೇಕು. ತಪಾಸಣೆ ಪ್ರಮಾಣ ಹೆಚ್ಚಿಸಬೇಕು ಮತ್ತು ಲಸಿಕೆ ನೀಡುವ ವೇಗವನ್ನೂ ಹೆಚ್ಚಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್

Published On - 9:42 am, Sun, 27 June 21

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್