AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 27, 2021 | 9:44 AM

Share

ದೆಹಲಿ: ಕೊರೊನಾ ರೂಪಾಂತರ ತಳಿಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಾಣುಗಳು ಅತ್ಯಂತ ಮಾರಣಾಂತಿಕವಾಗಿದ್ದು, ಅತಿ ವೇಗವಾಗಿ ಹರಡಬಲ್ಲವು ಎಂದು ಹೇಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಇದನ್ನೇ ಹೇಳಿದೆ. ಹಾಗೇ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ(ಐಸಿಎಂಆರ್​) ಮಾಜಿ ಮುಖ್ಯ ವಿಜ್ಞಾನಿ ರಾಮನ್ ಗಂಗಖೇಡ್ಕರ್ ಕೂಡ ಇದೇ ವಿಚಾರವನ್ನು ಹೊರಹಾಕಿದ್ದಾರೆ. ಅದರೊಂದಿಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಸ್​​ಗಳು ನರ ನರವೈಜ್ಞಾನಿಕ ಸಂಬಂಧ ಕಾಯಿಲೆಗಳನ್ನು ಉಂಟು ಮಾಡಬಲ್ಲವು ಎಂದು ಹೇಳಿದ್ದಾರೆ.

ಡೆಲ್ಟಾ ರೂಪಾಂತರಿ ವೈರಸ್​​ಗಳು ಕೋಶದಿಂದ ಕೋಶಕ್ಕೆ ವರ್ಗಾವಣೆಯಾಗಬಲ್ಲವು. ಇದು ಒಮ್ಮೆ ಮಿದುಳಿಗೆ ತಗುಲಿದರೆ ಸಾಮಾನ್ಯವಾಗಿ ನರವೈಜ್ಞಾನಿಕ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಡೆಲ್ಟಾ ವೈರಸ್​ ನಮ್ಮ ದೇಹದೊಳಗೆ ಯಾವ ಅಂಗಕ್ಕೆ ತಗುಲುತ್ತದೆಯೂ ಅದಕ್ಕೆ ಸಂಬಂಧಪಟ್ಟ ರೋಗ ಲಕ್ಷಣವನ್ನು ಹೊರಹಾಕುತ್ತದೆ. ಆ ನಿರ್ದಿಷ್ಟ ಅಂಗಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ರಾಮನ್​ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ. ಉಳಿದೆಲ್ಲ ರೂಪಾಂತರಿ ವೈರಸ್​ಗಳಿಗೆ ಹೋಲಿಸಿದರೆ ಡೆಲ್ಟಾ ಅತ್ಯಂತ ವೇಗವಾಗಿ ಹರಡುತ್ತದೆ ಎಂದು ಹೇಳಿದ್ದಾರೆ. ಡೆಲ್ಟಾ ವೈರಸ್​ ಕಂಡು ಬಂದ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಕಂಟೈನ್​ಮೆಂಟ್​ ಝೋನ್​ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಜನರು ಗುಂಪುಗೂಡುವನ್ನು ತಡೆಯಬೇಕು. ತಪಾಸಣೆ ಪ್ರಮಾಣ ಹೆಚ್ಚಿಸಬೇಕು ಮತ್ತು ಲಸಿಕೆ ನೀಡುವ ವೇಗವನ್ನೂ ಹೆಚ್ಚಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್

Published On - 9:42 am, Sun, 27 June 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!