AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ.

Delta Variant: ಡೆಲ್ಟಾ ವೈರಾಣು ಮಿದುಳಿಗೆ ಅಟ್ಯಾಕ್​ ಆದ್ರೆ ಏನಾಗುತ್ತದೆ?-ಐಸಿಎಂಆರ್​ ಮಾಜಿ ಮುಖ್ಯ ವಿಜ್ಞಾನಿ ನೀಡಿದ್ದಾರೆ ಮತ್ತೊಂದು ಎಚ್ಚರಿಕೆ..
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Jun 27, 2021 | 9:44 AM

Share

ದೆಹಲಿ: ಕೊರೊನಾ ರೂಪಾಂತರ ತಳಿಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಾಣುಗಳು ಅತ್ಯಂತ ಮಾರಣಾಂತಿಕವಾಗಿದ್ದು, ಅತಿ ವೇಗವಾಗಿ ಹರಡಬಲ್ಲವು ಎಂದು ಹೇಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಇದನ್ನೇ ಹೇಳಿದೆ. ಹಾಗೇ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ(ಐಸಿಎಂಆರ್​) ಮಾಜಿ ಮುಖ್ಯ ವಿಜ್ಞಾನಿ ರಾಮನ್ ಗಂಗಖೇಡ್ಕರ್ ಕೂಡ ಇದೇ ವಿಚಾರವನ್ನು ಹೊರಹಾಕಿದ್ದಾರೆ. ಅದರೊಂದಿಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್​ ವೈರಸ್​​ಗಳು ನರ ನರವೈಜ್ಞಾನಿಕ ಸಂಬಂಧ ಕಾಯಿಲೆಗಳನ್ನು ಉಂಟು ಮಾಡಬಲ್ಲವು ಎಂದು ಹೇಳಿದ್ದಾರೆ.

ಡೆಲ್ಟಾ ರೂಪಾಂತರಿ ವೈರಸ್​​ಗಳು ಕೋಶದಿಂದ ಕೋಶಕ್ಕೆ ವರ್ಗಾವಣೆಯಾಗಬಲ್ಲವು. ಇದು ಒಮ್ಮೆ ಮಿದುಳಿಗೆ ತಗುಲಿದರೆ ಸಾಮಾನ್ಯವಾಗಿ ನರವೈಜ್ಞಾನಿಕ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಡೆಲ್ಟಾ ವೈರಸ್​ ನಮ್ಮ ದೇಹದೊಳಗೆ ಯಾವ ಅಂಗಕ್ಕೆ ತಗುಲುತ್ತದೆಯೂ ಅದಕ್ಕೆ ಸಂಬಂಧಪಟ್ಟ ರೋಗ ಲಕ್ಷಣವನ್ನು ಹೊರಹಾಕುತ್ತದೆ. ಆ ನಿರ್ದಿಷ್ಟ ಅಂಗಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ರಾಮನ್​ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೂ ಸಹ ಈ ಡೆಲ್ಟಾ ವೈರಸ್​ ತುಂಬ ಹಾನಿಕಾರಿ ಎಂದು ಹೇಳಿದ್ದಾರೆ. ಕೊರೊನಾದ ರೂಪಾಂತರವಾದ ಈ ವೈರಾಣು ಮೊದಲು ಹುಟ್ಟಿದ್ದು ಭಾರತದಲ್ಲಾದರೂ ಸದ್ಯ ಸುಮಾರು 85 ರಾಷ್ಟ್ರಗಳಿಗೆ ವ್ಯಾಪಿಸಿದೆ. ಉಳಿದೆಲ್ಲ ರೂಪಾಂತರಿ ವೈರಸ್​ಗಳಿಗೆ ಹೋಲಿಸಿದರೆ ಡೆಲ್ಟಾ ಅತ್ಯಂತ ವೇಗವಾಗಿ ಹರಡುತ್ತದೆ ಎಂದು ಹೇಳಿದ್ದಾರೆ. ಡೆಲ್ಟಾ ವೈರಸ್​ ಕಂಡು ಬಂದ ಪ್ರದೇಶದಲ್ಲಿ ಹೆಚ್ಚಿನ ಕಾಳಜಿ ತೆಗೆದುಕೊಳ್ಳಬೇಕು. ಕಂಟೈನ್​ಮೆಂಟ್​ ಝೋನ್​ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಜನರು ಗುಂಪುಗೂಡುವನ್ನು ತಡೆಯಬೇಕು. ತಪಾಸಣೆ ಪ್ರಮಾಣ ಹೆಚ್ಚಿಸಬೇಕು ಮತ್ತು ಲಸಿಕೆ ನೀಡುವ ವೇಗವನ್ನೂ ಹೆಚ್ಚಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆನ್‌ಲೈನ್ ರಂಗಭೂಮಿ ತರಬೇತಿ; ರಂಗ ಚಟುವಟಿಕೆ ಆರಂಭಕ್ಕೆ ಮೈಸೂರಿನಲ್ಲಿ ಚಾಲನೆ ನೀಡಿದ ನಟ ಮಂಡ್ಯ ರಮೇಶ್

Published On - 9:42 am, Sun, 27 June 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..