ಬಾಬಾ ಸಿದ್ದಿಕ್ ಹತ್ಯೆಗೆ ಗುಜರಾತ್ ನಂಟು ಇದೆ, ಅಮಿತ್ ಶಾ ರಾಜೀನಾಮೆ ನೀಡಲಿ: ಸಂಜಯ್ ರಾವತ್

ಈ ಸರ್ಕಾರದ ನಂತರ ಮುಂಬೈನಲ್ಲಿ ಗ್ಯಾಂಗ್ ವಾರ್ ಮತ್ತು ಭೂಗತ ಜಗತ್ತಿನ ಶಕ್ತಿ ಹೆಚ್ಚಾಗಬಹುದು ಎಂದು ನಾನು ಮೊದಲೇ ಹೇಳಿದ್ದೆ. ಈ ಸರ್ಕಾರಕ್ಕೂ ಭೂಗತ ಜಗತ್ತಿನ ಬೆಂಬಲವಿದ್ದು, ಆ ಭೂಗತ ಜಗತ್ತನ್ನು ಗುಜರಾತ್ ನಿಂದಲೇ ನಡೆಸಲಾಗುತ್ತಿದೆ. ಇಂದು ಗುಜರಾತ್ ನಲ್ಲಿ ₹5,000 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಇದರರ್ಥ ₹ 50,000 ಕೋಟಿ ಮೌಲ್ಯದ ಡ್ರಗ್ಸ್ ಈಗಾಗಲೇ ದೇಶದಲ್ಲಿ ಹಂಚಲಾಗಿದೆ

ಬಾಬಾ ಸಿದ್ದಿಕ್ ಹತ್ಯೆಗೆ ಗುಜರಾತ್ ನಂಟು ಇದೆ, ಅಮಿತ್ ಶಾ ರಾಜೀನಾಮೆ ನೀಡಲಿ: ಸಂಜಯ್ ರಾವತ್
ಸಂಜಯ್ ರಾವತ್
ರಶ್ಮಿ ಕಲ್ಲಕಟ್ಟ

Updated on: Oct 14, 2024 | 2:07 PM

ಮುಂಬೈ ಅಕ್ಟೋಬರ್ 14: ಶಿವಸೇನಾ (UBT) ಸಂಸದ ಸಂಜಯ್ ರಾವತ್ (Sanjay Raut) ಸೋಮವಾರ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆಗೂ ಗುಜರಾತ್‌ಗೂ ನಂಟು ಇದೆ ಎಂದು ಹೇಳಿದ್ದು, ಕರಾವಳಿ ರಾಜ್ಯದಿಂದ ಭೂಗತ ಜಗತ್ತು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಸಬರಮತಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅಪರಾಧದ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ ಎಂದ ರಾವತ್, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸವಾಲು ಹಾಕಿದ್ದಾರೆ. ಅಮಿತ್ ಶಾ ಗುಜರಾತ್‌ನವರು ಎಂದು ಸೂಚಿಸಿದ ಸಂಜಯ್ ರಾವತ್, ಹತ್ಯೆಯ ಹಿನ್ನೆಲೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಬೇಕು ಎಂದಿದ್ದಾರೆ.

“ಈ ಸರ್ಕಾರದ ನಂತರ ಮುಂಬೈನಲ್ಲಿ ಗ್ಯಾಂಗ್ ವಾರ್ ಮತ್ತು ಭೂಗತ ಜಗತ್ತಿನ ಶಕ್ತಿ ಹೆಚ್ಚಾಗಬಹುದು ಎಂದು ನಾನು ಮೊದಲೇ ಹೇಳಿದ್ದೆ. ಈ ಸರ್ಕಾರಕ್ಕೂ ಭೂಗತ ಜಗತ್ತಿನ ಬೆಂಬಲವಿದ್ದು, ಆ ಭೂಗತ ಜಗತ್ತನ್ನು ಗುಜರಾತ್ ನಿಂದಲೇ ನಡೆಸಲಾಗುತ್ತಿದೆ. ಇಂದು ಗುಜರಾತ್ ನಲ್ಲಿ ₹5,000 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಇದರರ್ಥ ₹ 50,000 ಕೋಟಿ ಮೌಲ್ಯದ ಡ್ರಗ್ಸ್ ಈಗಾಗಲೇ ದೇಶದಲ್ಲಿ ಹಂಚಲಾಗಿದೆ. ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಮತ್ತು ಗುಜರಾತ್ ಎಟಿಎಸ್ ವಶದಲ್ಲಿರುವ ದರೋಡೆಕೋರನೊಬ್ಬ ಬಾಬಾ ಸಿದ್ದಿಕ್ ಹತ್ಯೆಯ ಹೊಣೆಯನ್ನು ಹೊರುತ್ತಾನೆ. ಗುಜರಾತ್ ಮೂಲದ ಕೇಂದ್ರ ಗೃಹ ಸಚಿವರಿಗೆ ಇದು ಸವಾಲಾಗಿದೆ. ಅಮಿತ್ ಶಾ ರಾಜೀನಾಮೆಗೆ ಅಜಿತ್ ಪವಾರ್ ಒತ್ತಾಯಿಸಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ “ಸಿಂಗಮ್​​ಗಿರಿ”ಯನ್ನು ತೋರಿಸಬೇಕು ಎಂದು ಅವರು ಹೇಳಿದರು.

“ಅಕ್ಷಯ್ ಶಿಂಧೆಗೆ (ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ) ಗುಂಡು ಹಾರಿಸಿದ ನಂತರ ಅವರು (ಸಿಎಂ ಶಿಂಧೆ) ‘ಸಿಂಗಂ’ ಎಂದು ಘೋಷಿಸಿಕೊಂಡರು. ಈಗ ಈ ‘ಸಿಂಗಮ್​​ಗಿರಿ’ಯನ್ನು ಇಲ್ಲಿ ತೋರಿಸಿ. ನಿಮಗೆ ಧೈರ್ಯವಿದ್ದರೆ ಮತ್ತು ನೀವು ಮನುಷ್ಯನಾಗಿದ್ದರೆ ಬಾಬಾ ಸಿದ್ದಿಕ್  ಕೊಲೆ ಪ್ರಕರಣದ ಪಿತೂರಿಗಾರರನ್ನು ಎದುರಿಸಿ ಎಂದಿದ್ದಾರೆ ರಾವುತ್.

ಹಲವಾರು ಬಾಲಿವುಡ್ ತಾರೆಯರೊಂದಿಗಿನ ಸಂಪರ್ಕಕ್ಕೆ ಹೆಸರುವಾಸಿಯಾಗಿದ್ದ ಸಮಾಜವಾದಿ ಮತ್ತು ರಾಜಕಾರಣಿ ಬಾಬಾ ಸಿದ್ದಿಕ್ ಅವರನ್ನು ಶನಿವಾರ ರಾತ್ರಿ ಮೂವರು ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ನಡೆದಾಗ ಅವರು ಪಟಾಕಿ ಸಿಡಿಸುತ್ತಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಪೋಸ್ಟ್‌ನಲ್ಲಿ, ಸಲ್ಮಾನ್ ಖಾನ್ ಅವರ ಸಾಮೀಪ್ಯದಿಂದಾಗಿ ಬಾಬಾ ಸಿದ್ದಿಕ್ ಅವರನ್ನು ಕೊಲ್ಲಲಾಯಿತು ಎಂದು ಅವರು ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಾಕಿತ್ತು. ಈ ವರ್ಷದ ಆರಂಭದಲ್ಲಿ ಸಲ್ಮಾನ್ ಖಾನ್ ಅವರ ಮನೆಯಲ್ಲಿ ನಡೆದ ಗುಂಡಿನ ದಾಳಿಯ ಹಿಂದೆಯೂ ಇದೇ ಗ್ಯಾಂಗ್​​ನ ಕೈವಾಡ ಇತ್ತು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಬಿಜೆಪಿ 150 ರಿಂದ 160 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ

ಏತನ್ಮಧ್ಯೆ, ಕಾಂಗ್ರೆಸ್ ಮತ್ತು ಇಂಡಿಯಾ ಬ್ಲಾಕ್ ಸದಸ್ಯರು ಅಪರಾಧದ ಬಗ್ಗೆ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಹೇಳಿದೆ.
“ಕೆಲವರು ಈ ಘಟನೆಗಳನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿರುವುದು ಅತ್ಯಂತ ದುರದೃಷ್ಟಕರ. ಕಾಂಗ್ರೆಸ್ ಮತ್ತು ಇಂಡಿ. ಮೈತ್ರಿಕೂಟ ಈ ಚಟುವಟಿಕೆಯಲ್ಲಿ ತೊಡಗಿದೆ. ಬಾಬಾ ಸಿದ್ದಿಕ್ ಅವರ ಅಗಲಿಕೆಗೆ ನಾವೆಲ್ಲರೂ ಸಂತಾಪ ವ್ಯಕ್ತಪಡಿಸುತ್ತೇವೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಹಾರಾಷ್ಟ್ರದ ಸಿಎಂ ಮತ್ತು ಉಪ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಅವರು ಯಾವುದೇ ಗ್ಯಾಂಗ್‌ಗೆ ಸೇರಿದವರಾದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಹೇಳಿದ್ದಾರೆ.

ಮುಂಬೈ ಕ್ರೈಂ ಬ್ರಾಂಚ್ ಇಬ್ಬರು ಶೂಟರ್‌ಗಳನ್ನು ಬಂಧಿಸಿದೆ. ಮೂರನೇ ಶೂಟರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ಯಾಂಗ್‌ನ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪುಣೆಯ ಪ್ರವೀಣ್ ಲೋಂಕರ್ ಎಂಬ ವ್ಯಕ್ತಿಯನ್ನು ಅವರು ಬಂಧಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us