AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾಪ್ಟನ್ ಅಮರಿಂದರ್ ಸಿಂಗ್​​ನ್ನು ಬದಲಿಸಿ, ನವಜೋತ್ ಸಿಂಗ್ ಸಿಧು ಆಪ್ತರನ್ನು ವಜಾ ಮಾಡಿ’: ಪಂಜಾಬ್ ಕಾಂಗ್ರೆಸ್​ನಲ್ಲಿ ಮತ್ತೆ ಭಿನ್ನಮತದ ಕೂಗು

"ಕ್ಯಾಪ್ಟನ್​​ನ್ನು ಬದಲಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಉಳಿಯುವುದಿಲ್ಲ. ನಾವು ಸೋನಿಯಾ ಗಾಂಧಿಯನ್ನು ಭೇಟಿ ಮಾಡುತ್ತೇವೆ" ಎಂದು ಕ್ಯಾಬಿನೆಟ್ ಸಚಿವ ಟ್ರಿಪ್ಟ್ ಬಜ್ವಾ ಹೇಳಿದರು.

‘ಕ್ಯಾಪ್ಟನ್ ಅಮರಿಂದರ್ ಸಿಂಗ್​​ನ್ನು ಬದಲಿಸಿ, ನವಜೋತ್ ಸಿಂಗ್ ಸಿಧು ಆಪ್ತರನ್ನು ವಜಾ ಮಾಡಿ’: ಪಂಜಾಬ್ ಕಾಂಗ್ರೆಸ್​ನಲ್ಲಿ ಮತ್ತೆ ಭಿನ್ನಮತದ ಕೂಗು
ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು
TV9 Web
| Edited By: |

Updated on: Aug 24, 2021 | 5:58 PM

Share

ಅಮೃತಸರ: ಅಮರಿಂದರ್ ಸಿಂಗ್ ಅವರನ್ನು ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಬೇಡಿಕೆ ಮತ್ತೆ ಕೇಳಿ ಬಂದಿದೆ. ಅದೇ ವೇಳೆ ಪಾಕಿಸ್ತಾನ ಮತ್ತು ಕಾಶ್ಮೀರದ ಕುರಿತು ಟೀಕೆ ಮಾಡಿರುವ ನವಜೋತ್ ಸಿಧು ಅವರ ಸಲಹೆಗಾರರನ್ನು ವಜಾ ಮಾಡಬೇಕೆಂಬ ಕೂಗು ಎದ್ದಿದೆ. ಪಂಜಾಬ್ ಕಾಂಗ್ರೆಸ್‌ನ 23 ಶಾಸಕರು, ನಾಲ್ಕು ಸಚಿವರು ಸಿಂಗ್ ಅವರನ್ನು ತೆಗೆದುಹಾಕುವಂತೆ ಕೋರಿದ್ದು , ಅವರು ಮತ್ತೊಮ್ಮೆ ಪಕ್ಷದ ಉನ್ನತ ನಾಯಕತ್ವಕ್ಕೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ಕ್ಯಾಬಿನೆಟ್ ಮಂತ್ರಿಗಳಾದ ಟ್ರಿಪ್ಟ್ ರಾಜಿಂದರ್ ಬಾಜ್ವಾ, ಸುಖಜಿಂದರ್ ಸಿಂಗ್ ರಾಂಧವಾ, ಚರಣ್ಜಿತ್ ಸಿಂಗ್ ಚನ್ನಿ, ಸುಖಬಿಂದರ್ ಸಿಂಗ್ ಸರ್ಕಾರಿಯಾ ಮತ್ತು ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನವಜೋತ್ ಸಿಧುಗೆ ಆಪ್ತ ಪರ್ಗತ್ ಸಿಂಗ್ ಇಂದು ಈ ವಿಷಯದ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದಾರೆ.

“ಕ್ಯಾಪ್ಟನ್​​ನ್ನು ಬದಲಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಉಳಿಯುವುದಿಲ್ಲ. ನಾವು ಸೋನಿಯಾ ಗಾಂಧಿಯನ್ನು ಭೇಟಿ ಮಾಡುತ್ತೇವೆ” ಎಂದು ಕ್ಯಾಬಿನೆಟ್ ಸಚಿವ ಟ್ರಿಪ್ಟ್ ಬಜ್ವಾ ಹೇಳಿದರು.

ಪಂಜಾಬಿನಲ್ಲಿ ದೆಹಲಿಯಲ್ಲಿ ಮೂರು ಸದಸ್ಯರ ಸಮಿತಿಯನ್ನು ಭೇಟಿ ಮಾಡಲು ಶಾಸಕರನ್ನು ಕರೆದಾಗ ಸುಖ್‌ಬೀರ್ ಬಾದಲ್ ಅವರನ್ನು (ಗುರು ಗ್ರಂಥ ಸಾಹೀಬರ) ಪವಿತ್ರತೆಯ ತನಿಖೆಗೆ ಕರೆಸಲಾಯಿತು. ಆದರೆ ನಾವು ಎಲ್ಲಾ ಚುನಾವಣಾ ಭರವಸೆಗಳನ್ನು ಈಡೇರಿಸುವುದಿಲ್ಲ ಎಂದು ಭಾವಿಸುತ್ತೇವೆ. ಆದ್ದರಿಂದ ನಾವು ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲಾಗುವುದುಎಂದು ಕ್ಯಾಬಿನೆಟ್ ಸಚಿವ ಚರಣ್ಜಿತ್ ಸಿಂಗ್ ಚನ್ನಿ ಹೇಳಿದರು. ಅಮರಿಂದರ್ ಸಿಂಗ್ ಅವರ ನಿಷ್ಠಾವಂತರು, ಐದು ಸಚಿವರು ಮತ್ತು ಒಬ್ಬ ಶಾಸಕರು ಸಿಧು ಅವರ ಸಹಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ರಾಜ್ಯದ ನಾಯಕರು ಮುಖ್ಯಮಂತ್ರಿಯನ್ನು ತೆಗೆದುಹಾಕಲು ಹೈಕಮಾಂಡ್ ಗೆ ಮನವಿ ಮಾಡುತ್ತಿರುವುದು ಇದು ಎರಡನೇ ಬಾರಿ.

ಮುಂದಿನ ವರ್ಷದ ಅಸೆಂಬ್ಲಿ ಚುನಾವಣೆಯ ದೃಷ್ಟಿಯಿಂದ ಸಿಂಗ್ ಅವರನ್ನು ತೆಗೆದುಹಾಕುವುದಿಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದ್ದರೂ, ರಾಜಿ ಸೂತ್ರವು ನವಜೋತ್ ಸಿಧು ಅವರನ್ನು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ಮಾಡುವುದನ್ನು ಒಳಗೊಂಡಿತ್ತು.

ಕಳೆದ ವಾರ ಸಿಧು ಅವರ ಸಲಹೆಗಾರರಾದ ಪ್ಯಾರೆ ಲಾಲ್ ಗರ್ಗ್ ಮತ್ತು ಮಲ್ವಿಂದರ್ ಮಾಲಿ, ಪಾಕಿಸ್ತಾನ ಮತ್ತು ಕಾಶ್ಮೀರದ ಕುರಿತು ತಮ್ಮ ಟೀಕೆಗಳಿಂದ ಸುದ್ದಿಯಾಗಿದ್ದರು.

ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಮಾಲಿ ಅವರು ಭಾರತ ಮತ್ತು ಪಾಕಿಸ್ತಾನ ಎರಡೂ ಕಾಶ್ಮೀರದಲ್ಲಿ ಅಕ್ರಮ ನಿವಾಸಿಗಳು ಎಂದು ಸೂಚಿಸಿದ್ದಾರೆ. ಯುಎನ್ಒ ನಿರ್ಣಯಗಳ ತತ್ವಗಳಿಗೆ ವಿರುದ್ಧವಾಗಿ, ಭಾರತ ಮತ್ತು ಪಾಕಿಸ್ತಾನವು ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಂಡಿವೆ. ಕಾಶ್ಮೀರವು ಭಾರತದ ಭಾಗವಾಗಿದ್ದರೆ, 370 ಮತ್ತು 35-A ವಿಧಿಗಳನ್ನು ಹೊಂದುವ ಅಗತ್ಯವೇನು?” ಎಂದು ಅವರು ಪ್ರಶ್ನಿಸಿದ್ದರು.  ಇನ್ನೊಂದು ಪೋಸ್ಟ್ ನಲ್ಲಿ ಈಗ ಸಿಖ್ಖರು ಮತ್ತು ಹಿಂದೂಗಳನ್ನು ರಕ್ಷಿಸುವುದು ಅವರ ಜವಾಬ್ದಾರಿಯಾಗಿದೆ. ಅವರು ದೇಶದ ಸ್ಥಿತಿಯನ್ನು ಸುಧಾರಿಸಲು ಆಳುತ್ತಾರೆ, ಮೊದಲಿನಂತೆ ಅಲ್ಲ ಎಂದಿದ್ದರು.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಬಗ್ಗೆ ವಿವಾದಿತ ಹೇಳಿಕೆ ಬೆನ್ನಲ್ಲೇ ಇಂದಿರಾ ಗಾಂಧಿ ಚಿತ್ರ ಪೋಸ್ಟ್ ಮಾಡಿ ವಿವಾದಕ್ಕೀಡಾದ ನವಜೋತ್ ಸಿಂಗ್ ಸಿಧು ಸಲಹೆಗಾರ

(Demand for the removal of Amarinder Singh Sack Navjot Sidhu Aides resurface in Punjab)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ