AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ನೀಡುವುದಾಗಿ ಪಂಜಾಬ್​ ಸರ್ಕಾರ ಹುಸಿ ಭರವಸೆ: ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್​ ಏರಿದ ಶಿಕ್ಷಕರು

ದೈಹಿಕ ಶಿಕ್ಷಣ ಶಿಕ್ಷಕರಿಗೆ ​​ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ, ಈಗ ಈಡೇರಿಸಲ್ಲವೆಂದು ಪಂಜಾಬ್​ ಸರ್ಕಾರದ ವಿರುದ್ಧ ಮಹಿಳಾ ದೈಹಿಕ ಶಿಕ್ಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಉದ್ಯೋಗ ನೀಡುವುದಾಗಿ ಪಂಜಾಬ್​ ಸರ್ಕಾರ ಹುಸಿ ಭರವಸೆ: ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್​ ಏರಿದ ಶಿಕ್ಷಕರು
TV9 Web
| Edited By: ವಿವೇಕ ಬಿರಾದಾರ|

Updated on: Oct 05, 2022 | 4:21 PM

Share

ಮೊಹಾಲಿ: ಪಂಜಾಬ್​​ನಲ್ಲಿ ಎಎಪಿ (AAP)​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ (Physical Training Teacher) ಉದ್ಯೋಗ ನಿಡುವುದಾಗಿ ಎಎಪಿ ಭರವಸೆ ನೀಡಿತ್ತು. ಆದರೆ ಈಗ ಭರವಸೆಯನ್ನು ಈಡೇರಿಸಲ್ಲ ಎಂದು ಮೊಹಾಲಿಯಲ್ಲಿ ಇಬ್ಬರು ಮಹಿಳಾ ದೈಹಿಕ ಶಿಕ್ಷಣ ಶಿಕ್ಷಕರು ಕೈಯಲ್ಲಿ ಪೆಟ್ರೋಲ್​ ತುಂಬಿದ ಬಾಟಲ್​ ಹಿಡಿದುಕೊಂಡು ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಪಂಜಾಬ್‍ನಲ್ಲಿ ಕಳೆದ ಒಂದು ವರ್ಷದಿಂದ ದೈಹಿಕ ಬೋಧಕ (PTI) ತರಬೇತಿ ಪಡೆದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಿಕೊಳ್ಳುವ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ​​ಎಎಪಿ ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು 7 ತಿಂಗಳಾದರು ಇನ್ನೂ ಕೆಲಸ ನೀಡಿಲ್ಲ ಎಂದು ​ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಸಿಪ್ಪಿ ಶರ್ಮಾ ಮತ್ತು ವೀರಪಾಲ್ ಕೌರ್ ಎಂಬ ಇಬ್ಬರು ಶಿಕ್ಷಕರು ತಡರಾತ್ರಿ ಮೊಹಾಲಿಯ ಸೊಹಾನಾದಲ್ಲಿರುವ ಸಿಂಗ್ ಶಹೀದನ್ ಗುರುದ್ವಾರದ ಬಳಿ ಇರುವ ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಪ್ರತಿಭಟನಾನಿರತ ಆನಂದಪುರ ಸಾಹಿಬ್ ನಿವಾಸಿ ಸಿಪ್ಪಿ ಶರ್ಮಾ ವೀಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ನಮಗೆ ಈ ಹಿಂದಿನ ಪಂಜಾಬ್ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಆದರೆ ಕೊಟ್ಟಿರಲಿಲ್ಲ. ಈ ವೇಳೆ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಇದೀಗ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿದೆ. ಇನ್ನೂ ಕೂಡ ನಮಗೆ ಉದ್ಯೋಗ ನೀಡಿಲ್ಲ. ಸರ್ಕಾರ ನಮಗೆ ಸುಳ್ಳು ಭರವಸೆ ನೀಡಿದೆ. ಹಾಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸದಿದ್ದರೆ ನಾವು ಇಲ್ಲಿಂದ ಬರುವುದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?