AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ನೀಡುವುದಾಗಿ ಪಂಜಾಬ್​ ಸರ್ಕಾರ ಹುಸಿ ಭರವಸೆ: ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್​ ಏರಿದ ಶಿಕ್ಷಕರು

ದೈಹಿಕ ಶಿಕ್ಷಣ ಶಿಕ್ಷಕರಿಗೆ ​​ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ, ಈಗ ಈಡೇರಿಸಲ್ಲವೆಂದು ಪಂಜಾಬ್​ ಸರ್ಕಾರದ ವಿರುದ್ಧ ಮಹಿಳಾ ದೈಹಿಕ ಶಿಕ್ಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಉದ್ಯೋಗ ನೀಡುವುದಾಗಿ ಪಂಜಾಬ್​ ಸರ್ಕಾರ ಹುಸಿ ಭರವಸೆ: ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್​ ಏರಿದ ಶಿಕ್ಷಕರು
TV9 Web
| Edited By: |

Updated on: Oct 05, 2022 | 4:21 PM

Share

ಮೊಹಾಲಿ: ಪಂಜಾಬ್​​ನಲ್ಲಿ ಎಎಪಿ (AAP)​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ (Physical Training Teacher) ಉದ್ಯೋಗ ನಿಡುವುದಾಗಿ ಎಎಪಿ ಭರವಸೆ ನೀಡಿತ್ತು. ಆದರೆ ಈಗ ಭರವಸೆಯನ್ನು ಈಡೇರಿಸಲ್ಲ ಎಂದು ಮೊಹಾಲಿಯಲ್ಲಿ ಇಬ್ಬರು ಮಹಿಳಾ ದೈಹಿಕ ಶಿಕ್ಷಣ ಶಿಕ್ಷಕರು ಕೈಯಲ್ಲಿ ಪೆಟ್ರೋಲ್​ ತುಂಬಿದ ಬಾಟಲ್​ ಹಿಡಿದುಕೊಂಡು ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಪಂಜಾಬ್‍ನಲ್ಲಿ ಕಳೆದ ಒಂದು ವರ್ಷದಿಂದ ದೈಹಿಕ ಬೋಧಕ (PTI) ತರಬೇತಿ ಪಡೆದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಿಕೊಳ್ಳುವ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ​​ಎಎಪಿ ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು 7 ತಿಂಗಳಾದರು ಇನ್ನೂ ಕೆಲಸ ನೀಡಿಲ್ಲ ಎಂದು ​ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಸಿಪ್ಪಿ ಶರ್ಮಾ ಮತ್ತು ವೀರಪಾಲ್ ಕೌರ್ ಎಂಬ ಇಬ್ಬರು ಶಿಕ್ಷಕರು ತಡರಾತ್ರಿ ಮೊಹಾಲಿಯ ಸೊಹಾನಾದಲ್ಲಿರುವ ಸಿಂಗ್ ಶಹೀದನ್ ಗುರುದ್ವಾರದ ಬಳಿ ಇರುವ ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಪ್ರತಿಭಟನಾನಿರತ ಆನಂದಪುರ ಸಾಹಿಬ್ ನಿವಾಸಿ ಸಿಪ್ಪಿ ಶರ್ಮಾ ವೀಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ನಮಗೆ ಈ ಹಿಂದಿನ ಪಂಜಾಬ್ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಆದರೆ ಕೊಟ್ಟಿರಲಿಲ್ಲ. ಈ ವೇಳೆ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಇದೀಗ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿದೆ. ಇನ್ನೂ ಕೂಡ ನಮಗೆ ಉದ್ಯೋಗ ನೀಡಿಲ್ಲ. ಸರ್ಕಾರ ನಮಗೆ ಸುಳ್ಳು ಭರವಸೆ ನೀಡಿದೆ. ಹಾಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸದಿದ್ದರೆ ನಾವು ಇಲ್ಲಿಂದ ಬರುವುದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ