AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ನೀಡುವುದಾಗಿ ಪಂಜಾಬ್​ ಸರ್ಕಾರ ಹುಸಿ ಭರವಸೆ: ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್​ ಏರಿದ ಶಿಕ್ಷಕರು

ದೈಹಿಕ ಶಿಕ್ಷಣ ಶಿಕ್ಷಕರಿಗೆ ​​ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ, ಈಗ ಈಡೇರಿಸಲ್ಲವೆಂದು ಪಂಜಾಬ್​ ಸರ್ಕಾರದ ವಿರುದ್ಧ ಮಹಿಳಾ ದೈಹಿಕ ಶಿಕ್ಷಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಉದ್ಯೋಗ ನೀಡುವುದಾಗಿ ಪಂಜಾಬ್​ ಸರ್ಕಾರ ಹುಸಿ ಭರವಸೆ: ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್​ ಏರಿದ ಶಿಕ್ಷಕರು
TV9 Web
| Edited By: |

Updated on: Oct 05, 2022 | 4:21 PM

Share

ಮೊಹಾಲಿ: ಪಂಜಾಬ್​​ನಲ್ಲಿ ಎಎಪಿ (AAP)​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರಿಗೆ (Physical Training Teacher) ಉದ್ಯೋಗ ನಿಡುವುದಾಗಿ ಎಎಪಿ ಭರವಸೆ ನೀಡಿತ್ತು. ಆದರೆ ಈಗ ಭರವಸೆಯನ್ನು ಈಡೇರಿಸಲ್ಲ ಎಂದು ಮೊಹಾಲಿಯಲ್ಲಿ ಇಬ್ಬರು ಮಹಿಳಾ ದೈಹಿಕ ಶಿಕ್ಷಣ ಶಿಕ್ಷಕರು ಕೈಯಲ್ಲಿ ಪೆಟ್ರೋಲ್​ ತುಂಬಿದ ಬಾಟಲ್​ ಹಿಡಿದುಕೊಂಡು ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ಮಾಡುತ್ತಿದ್ದಾರೆ.

ಪಂಜಾಬ್‍ನಲ್ಲಿ ಕಳೆದ ಒಂದು ವರ್ಷದಿಂದ ದೈಹಿಕ ಬೋಧಕ (PTI) ತರಬೇತಿ ಪಡೆದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡಿಕೊಳ್ಳುವ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ​​ಎಎಪಿ ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು 7 ತಿಂಗಳಾದರು ಇನ್ನೂ ಕೆಲಸ ನೀಡಿಲ್ಲ ಎಂದು ​ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಸಿಪ್ಪಿ ಶರ್ಮಾ ಮತ್ತು ವೀರಪಾಲ್ ಕೌರ್ ಎಂಬ ಇಬ್ಬರು ಶಿಕ್ಷಕರು ತಡರಾತ್ರಿ ಮೊಹಾಲಿಯ ಸೊಹಾನಾದಲ್ಲಿರುವ ಸಿಂಗ್ ಶಹೀದನ್ ಗುರುದ್ವಾರದ ಬಳಿ ಇರುವ ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಪ್ರತಿಭಟನಾನಿರತ ಆನಂದಪುರ ಸಾಹಿಬ್ ನಿವಾಸಿ ಸಿಪ್ಪಿ ಶರ್ಮಾ ವೀಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ನಮಗೆ ಈ ಹಿಂದಿನ ಪಂಜಾಬ್ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಆದರೆ ಕೊಟ್ಟಿರಲಿಲ್ಲ. ಈ ವೇಳೆ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಇದೀಗ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿದೆ. ಇನ್ನೂ ಕೂಡ ನಮಗೆ ಉದ್ಯೋಗ ನೀಡಿಲ್ಲ. ಸರ್ಕಾರ ನಮಗೆ ಸುಳ್ಳು ಭರವಸೆ ನೀಡಿದೆ. ಹಾಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸದಿದ್ದರೆ ನಾವು ಇಲ್ಲಿಂದ ಬರುವುದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ