AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sydney Dialogue: ಕ್ರಿಪ್ಟೋಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ ಮೋದಿ; ದುರ್ಬಳಕೆ ತಡೆಯಲು ಒಗ್ಗಟ್ಟಾಗುವಂತೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಕರೆ

Cryptocurrency: ಸದ್ಯಕ್ಕಂತೂ ದೇಶದಲ್ಲಿ ಕ್ರಿಪ್ಟೋಕರೆನ್ಸಿ ವ್ಯಾಪಕವಾಗಿ ಸುದ್ದಿಯಲ್ಲಿದೆ. ಡಿಜಿಟಲ್​ ಕರೆನ್ಸಿ ಬೆಳವಣಿಗೆಯೆಂಬುದು ದೇಶದ ಭದ್ರತೆಗೆ ಆತಂಕವೊಡ್ಡುವ ಸಾಧ್ಯತೆಯಿದೆ ಎಂಬ ಕಳವಳವೂ ಹೆಚ್ಚುತ್ತಿದೆ.

Sydney Dialogue: ಕ್ರಿಪ್ಟೋಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ ಮೋದಿ; ದುರ್ಬಳಕೆ ತಡೆಯಲು ಒಗ್ಗಟ್ಟಾಗುವಂತೆ ಪ್ರಜಾಪ್ರಭುತ್ವ ರಾಷ್ಟ್ರಗಳಿಗೆ ಕರೆ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Nov 18, 2021 | 1:15 PM

Share

ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ಕೆಲವು ಸುದ್ದಿಗಳು ಓಡಾಡುತ್ತಿವೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಕೂಡ ನಡೆದಿದೆ. ಹಾಗೇ, ಖಾಸಗಿ ಕ್ರಿಪ್ಟೋಕರೆನ್ಸಿ (cryptocurrency) ಗಳನ್ನು ರದ್ದುಗೊಳಿಸಿ, ಸರ್ಕಾರದ ಕ್ರಿಪ್ಟೋಕರೆನ್ಸಿಗಳೇ ಚಾಲನೆಗೆ ಬರಲಿವೆ ಎಂಬ ವಿಚಾರ ಬಲ್ಲಮೂಲಗಳಿಂದ ತಿಳಿದುಬಂದಿದೆ. ಆದರೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಹೀಗಿರುವಾಗ ಇಂದು ಸಿಡ್ನಿ ಡೈಲಾಗ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಇದೇ ಮೊದಲ ಬಾರಿಗೆ ಕ್ರಿಪ್ಟೋಕರೆನ್ಸಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ‘ಆಧುನಿಕ ತಂತ್ರಜ್ಞಾನಗಳು ಸಂಘರ್ಷ ಮತ್ತು ವಿನಾಶವನ್ನುಂಟು ಮಾಡುವಷ್ಟು ಶಕ್ತಿಶಾಲಿಗಳು ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಅದಾಗಲು ಬಿಡಬಾರದು. ಇನ್ನು ಕ್ರಿಪ್ಟೋಕರೆನ್ಸಿ ತಪ್ಪಾದ ಜನರ ಕೈಗೆ ಸೇರದಂತೆ ತಡೆಯುವ ಜವಾಬ್ದಾರಿಯನ್ನು ಎಲ್ಲ ಪ್ರಜಾಪ್ರಭುತ್ವ ರಾಷ್ಟ್ರಗಳೂ ಹೊರಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಈ ಕ್ರಿಪ್ಟೋಕರೆನ್ಸಿ  ನಮ್ಮ ಯುವಜನರ ಭವಿಷ್ಯವನ್ನೇ ಹಾಳುಮಾಡುವಷ್ಟು ಸಾಮರ್ಥ್ಯ ಹೊಂದಿದೆ ಎಂದು ಈ ಡಿಜಿಟಲ್​ ಕರೆನ್ಸಿ ಬಗ್ಗೆ ಆತಂಕ ವ್ಯಕ್ತಪಡಿಸಿದರು.  

ಇಂದು ಸಿಡ್ನಿ ಡೈಲಾಗ್​​​ ಉದ್ದೇಶಿಸಿ, ಭಾರತದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಮತ್ತು ಕ್ರಾಂತಿ ಎಂಬ ವಿಚಾರವಾಗಿ ಮಾತನಾಡಿದ ಅವರು, ಭಾರತದಲ್ಲ ದತ್ತಾಂಶ ರಕ್ಷಣೆ, ಖಾಸಗಿತನ ಮತ್ತು ಭದ್ರತೆಗಾಗಿ ದೃಢವಾದ ಚೌಕಟ್ಟು ರೂಪಿಸಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಹಕ್ಕಿಗೆ ತೊಡಕಾಗದಂತೆ, ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಡಾಟಾ ಬಳಕೆ ಮಾಡುತ್ತ ಜನರ ಸಬಲೀಕರಣಗೊಳಿಸಲಾಗುತ್ತಿದೆ ಎಂದು ಇಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅಂದಹಾಗೆ ಈ ಸಿಡ್ನಿ ಡೈಲಾಗ್​ನ್ನು ಆಸ್ಟ್ರೇಲಿಯನ್ ಸ್ಟ್ರಾಟೆಜಿಕ್ ಪಾಲಿಸಿ ಇನ್ಸ್ಟಿಟ್ಯೂಟ್ ಆಯೋಜಿಸಿತ್ತು. ಅದರಲ್ಲಿ ಮೋದಿಯವರು ವರ್ಚ್ಯುವಲ್​ ಆಗಿ ಭಾಷಣ ಮಾಡಿದ್ದಾರೆ.

ಸದ್ಯಕ್ಕಂತೂ ದೇಶದಲ್ಲಿ ಕ್ರಿಪ್ಟೋಕರೆನ್ಸಿ ವ್ಯಾಪಕವಾಗಿ ಸುದ್ದಿಯಲ್ಲಿದೆ. ಡಿಜಿಟಲ್​ ಕರೆನ್ಸಿ ಬೆಳವಣಿಗೆಯೆಂಬುದು ದೇಶದ ಭದ್ರತೆಗೆ ಆತಂಕವೊಡ್ಡುವ ಸಾಧ್ಯತೆಯಿದೆ ಎಂಬ ಕಳವಳವೂ ಹೆಚ್ಚುತ್ತಿದೆ. ಅದರಲ್ಲೂ ಈ ಕ್ರಿಪ್ಟೋಕರೆನ್ಸಿಗಳು ಉಗ್ರರಿಗೆ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುವ ಪ್ರಮುಖ ಮಾರ್ಗವಾಗಬಹುದು ಎಂದೇ ವಿಶ್ಲೇಷಿಸಲಾಗುತ್ತಿದೆ. ಇನ್ನು ಈ ಬಗ್ಗೆ ಪಾರ್ಲಿಮೆಂಟ್​​ನ ಚಳಿಗಾಲದ ಅಧಿವೇಶನದಲ್ಲಿ ವ್ಯಾಪಕ ಚರ್ಚೆಯಾಗಲಿದ್ದು, ನಿಯಂತ್ರಣ ಸಂಬಂಧ ಮಸೂದೆ ಮಂಡನೆಯಾಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಸ್ಪರ್ಧಾತ್ಮಕ ಜಗತ್ತಿನಲ್ಲೀಗ ತಂತ್ರಜ್ಞಾನವೇ ಪ್ರಮುಖ ಅಸ್ತ್ರ: ಸಿಡ್ನಿ ಡೈಲಾಗ್​ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ
ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ