AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; ಬಿರಿಯಾನಿ ಪಾತ್ರೆಗಳೇ ಇದಕ್ಕೆ ಕಾರಣ?

Dengue in West Bengal: ಆರಂಭದಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಆತಂಕ ಮೂಡಿಸಿದ್ದ ಡೆಂಗ್ಯೂ ಇದೀಗ ಗ್ರಾಮೀಣ ಬಂಗಾಳದಲ್ಲೂ ತಲೆನೋವಾಗಿ ಪರಿಣಮಿಸಿದೆ. ಸೆಪ್ಟಂಬರ್ ಎರಡನೇ ವಾರದಲ್ಲಿಯೂ ಬಂಗಾಳ ಗ್ರಾಮ ಡೆಂಗ್ಯೂ ಜ್ವರದಿಂದ ತತ್ತರಿಸಿದೆ. ಪರಿಸ್ಥಿತಿ ಗಂಭೀರವಾಗಿರುವುದರಿಂದ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ ಭಾನುವಾರದಂದು ಆರೋಗ್ಯ ಇಲಾಖೆ ಹಾಗೂ ಆಡಳಿತಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; ಬಿರಿಯಾನಿ ಪಾತ್ರೆಗಳೇ ಇದಕ್ಕೆ ಕಾರಣ?
ಡೆಂಗ್ಯೂ ಸೊಳ್ಳೆ
Follow us
ರಶ್ಮಿ ಕಲ್ಲಕಟ್ಟ
|

Updated on: Sep 19, 2023 | 7:27 PM

ಕೋಲ್ಕತ್ತಾ ಸೆಪ್ಟೆಂಬರ್ 19:   ಪಶ್ಚಿಮ ಬಂಗಾಳದಲ್ಲಿ (West Bengal) ಬಂಗಾಳಿಗಳ ಬಿರಿಯಾನಿ (Biriyani) ಪ್ರೀತಿ ಹೊಸದೇನಲ್ಲ. ಅವರ ಈ ಬಿರಿಯಾನಿ ಮೋಹವೇ ಇಂದು ರಾಜ್ಯದಲ್ಲಿ ಡೆಂಗ್ಯೂ ಹರಡಲು ಕಾರಣವಾಗಿದೆ. ಆರೋಗ್ಯ ಭವನದ ಮೂಲಗಳ ಪ್ರಕಾರ, ಡೆಂಗ್ಯೂ (Dengue) ವೈರಸ್ ಹೊತ್ತ ಈಡಿಸ್ ಈಜಿಪ್ಟೈ ಸೊಳ್ಳೆಯ ಹೆಚ್ಚಿನ ಲಾರ್ವಾಗಳು ಈ ವರ್ಷ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ಕಂಡುಬಂದಿವೆ. ಇವುಗಳಲ್ಲಿ ಹೆಚ್ಚಿನವು ಬಿರಿಯಾನಿ, ಚಿಕನ್ ಚಾಪಾ ಅಥವಾ ಇತರ ಯಾವುದೇ ಆಹಾರವನ್ನು ಮನೆಗೆ ತಲುಪಿಸಲು ಬಳಸುವ ಪಾತ್ರೆಗಳಾಗಿವೆ. ಅನೇಕ ಸಂದರ್ಭಗಳಲ್ಲಿ, ಆ ಪಾತ್ರೆಗಳು ಯಾರ್ಯಾರದೋ ಕೈ ಸೇರಿ, ಆಮೇಲೆ ಕಂಡಕಂಡಲ್ಲಿ ಬಿಸಾಡಿರುತ್ತಾರೆ.ಅಲ್ಲಿ ಈಡಿಸ್ ಸೊಳ್ಳೆ ಹುಟ್ಟಿ ಎಲ್ಲೆಡೆ ಡೆಂಗ್ಯೂ ಹರಡುತ್ತದೆ.

ಆರಂಭದಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಆತಂಕ ಮೂಡಿಸಿದ್ದ ಡೆಂಗ್ಯೂ ಇದೀಗ ಗ್ರಾಮೀಣ ಬಂಗಾಳದಲ್ಲೂ ತಲೆನೋವಾಗಿ ಪರಿಣಮಿಸಿದೆ. ಸೆಪ್ಟಂಬರ್ ಎರಡನೇ ವಾರದಲ್ಲಿಯೂ ಬಂಗಾಳ ಗ್ರಾಮ ಡೆಂಗ್ಯೂ ಜ್ವರದಿಂದ ತತ್ತರಿಸಿದೆ. ಪರಿಸ್ಥಿತಿ ಗಂಭೀರವಾಗಿರುವುದರಿಂದ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ ಭಾನುವಾರದಂದು ಆರೋಗ್ಯ ಇಲಾಖೆ ಹಾಗೂ ಆಡಳಿತಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ದೃಢೀಕರಿಸದ ಮೂಲಗಳ ಪ್ರಕಾರ, ಈ ಋತುವಿನಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ 27,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಸರ್ಕಾರಿ ವಲಯದವರ ಸಂಖ್ಯೆ 22 ಸಾವಿರಕ್ಕೂ ಹೆಚ್ಚು. ಅವುಗಳಲ್ಲಿ, ಗ್ರಾಮೀಣ ಪ್ರದೇಶದಲ್ಲಿ ಸುಮಾರು 15 ಸಾವಿರ ಮತ್ತು ನಗರ ಪ್ರದೇಶಗಳಲ್ಲಿ 7 ಸಾವಿರಕ್ಕಿಂತ ಸ್ವಲ್ಪ ಹೆಚ್ಚು ಪ್ರಕರಣ ವರದಿ ಆಗಿದೆ.

ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಐದು ಜಿಲ್ಲೆಗಳು ಹೆಚ್ಚು ಆತಂಕಕ್ಕೊಳಗಾಗಿವೆ. ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿದೆ.ಇಲ್ಲಿ ಐದು ಸಾವಿರಕ್ಕೂ ಹೆಚ್ಚು ಪ್ರಕರಣ ವರದಿ ಆಗಿದ್ದು ನಾಡಿಯಾ ಮತ್ತು ಮುರ್ಷಿದಾಬಾದ್‌ನಲ್ಲಿ 3000 ಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಪೀಡಿತರಾಗಿದ್ದಾರೆ. ಹೌರಾ ಮತ್ತು ಹೂಗ್ಲಿ ಜಿಲ್ಲೆಗಳ ಪರಿಸ್ಥಿತಿ ಆರೋಗ್ಯ ಇಲಾಖೆಯನ್ನೂ ಚಿಂತಾಜನಕಗೊಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್