AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಒಪ್ಪದ ಸಿಬ್ಬಂದಿ; ಹತ್ರಾಸ್​ನ ಬೀದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಆಸ್ಪತ್ರೆಯ ಹೊರಗೆ ಹೆರಿಗೆ ನೋವಿನಿಂದ ನರಳಾಡುತ್ತಿದ್ದ ಮಹಿಳೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆಕೆಯ ಸುತ್ತಲೂ ಜನ ಓಡಾಡುತ್ತಿದ್ದು, ಆಕೆ ನೆಲದ ಮೇಲೆ ಮಲಗಿದ್ದಾರೆ.

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಒಪ್ಪದ ಸಿಬ್ಬಂದಿ; ಹತ್ರಾಸ್​ನ ಬೀದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 20, 2023 | 3:58 PM

Share

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ (Hathras) 9 ತಿಂಗಳ ಗರ್ಭಿಣಿಯೊಬ್ಬರು (Pregnant) ತನ್ನ ರಕ್ತದ ಪರೀಕ್ಷೆಯ ರಿಪೋರ್ಟ್​ ತರಲಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಯ ಸಿಬ್ಬಂದಿ ಆಕೆಯನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿದರು. ಹೀಗಾಗಿ, ಆ ಮಹಿಳೆ ಆಸ್ಪತ್ರೆಯ ಹೊರಗೆ ಬೀದಿಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ಗುರುವಾರ ನಡೆದಿದ್ದು, ಕಲ್ಪನಾ ಎಂಬ ಮಹಿಳೆಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳದೆ ವಾಪಾಸ್ ಕಳುಹಿಸಲಾಗಿದೆ.

ಆಸ್ಪತ್ರೆಯ ಹೊರಗೆ ಹೆರಿಗೆ ನೋವಿನಿಂದ ನರಳಾಡುತ್ತಿದ್ದ ಮಹಿಳೆಯ ನರಳಾಟದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆಕೆಯ ಸುತ್ತಲೂ ಜನ ಓಡಾಡುತ್ತಿದ್ದು, ಆಕೆ ನೆಲದ ಮೇಲೆ ಮಲಗಿದ್ದಾರೆ.

ಇದನ್ನೂ ಓದಿ: ಮನೆ ಕೆಲಸಕ್ಕೆ ಬರುತ್ತಿದ್ದಾಗ ವಿದ್ಯಾರ್ಥಿಯಿಂದ ನಿರಂತರ ಅತ್ಯಾಚಾರ; ಗರ್ಭಿಣಿಯಾದ ಬಾಲಕಿ

ನಮ್ಮ ಬಳಿ ಬ್ಲಡ್ ರಿಪೋರ್ಟ್​ ಇಲ್ಲದ ಕಾರಣದಿಂದ ನನ್ನ ಹೆಂಡತಿ ಮತ್ತು ನನಗೆ ಆಸ್ಪತ್ರೆಗೆ ದಾಖಲಾಗಲು ಬಿಡಲಿಲ್ಲ. ತುರ್ತು ಚಿಕಿತ್ಸಾ ಕೊಠಡಿಯಲ್ಲಿದ್ದ ಸಿಬ್ಬಂದಿ ನೋವಿನಿಂದ ನರಳುತ್ತಿದ್ದ ನನ್ನ ಹೆಂಡತಿಯ ಮಾತನ್ನೂ ಕೇಳಲಿಲ್ಲ. ಆ ಬಳಿಕ ನನ್ನ ಪತ್ನಿಗೆ ನೋವು ತಡೆದುಕೊಳ್ಳಲಾಗದೆ ಆಸ್ಪತ್ರೆಯ ಹೊರಗೆ ನೆಲದ ಮೇಲೆ ಬಿದ್ದು, ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಆ ಗರ್ಭಿಣಿಯ ಪತಿ ಸನೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ

ಆದರೆ, ಅವರ ಆರೋಪಗಳನ್ನು ತಳ್ಳಿಹಾಕಿದ ಮುಖ್ಯ ವೈದ್ಯಕೀಯ ಅಧೀಕ್ಷಕ ಶೆಲ್ಲಿ ಸಿಂಗ್, ಆ ಮಹಿಳೆಗೆ ಆಧಾರ್‌ನಂತಹ ಐಡಿಗಳನ್ನು ನೀಡುವಂತೆ ಕೇಳಲಾಯಿತು. ಆಸ್ಪತ್ರೆಯ ಪ್ರಸವಪೂರ್ವ ಕೋಣೆಗೆ ಹೋಗಲು ಸಲಹೆ ನೀಡಲಾಯಿತು. ಆದರೆ, ಆಕೆ ಅದಕ್ಕೆ ಒಪ್ಪದೆ ಆಸ್ಪತ್ರೆಯಿಂದ ಹೊರಗೆ ಹೋದರು. ಆಮೇಲೆ ಅಲ್ಲಿಯೇ ಹೆರಿಗೆಯಾಯಿತು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ