AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Cold Wave: ದೆಹಲಿಯಲ್ಲಿ ನಿಲ್ಲದ ಶೀತಮಾರುತ, ದಟ್ಟೈಸಿದ ಮಂಜು; ವಿಮಾನ-ರೈಲು ಸಂಚಾರ ವ್ಯತ್ಯಯ, ಶಾಲೆಗಳಿಗೆ ರಜೆ

Delhi Weather: ದೆಹಲಿಯಿಂದ ನೇಪಾಳಕ್ಕೆ ತೆರಳಬೇಕಿದ್ದ ವಿಮಾನ, ಜೈಪುರ, ಶಿಮ್ಲಾ, ಚಂಡೀಗಡ, ಕುಲು, ಡೆಹ್ರಾಡೂನ್​​ ಸೇರಿದಂತೆ ಹಲವು ನಗರಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

Delhi Cold Wave: ದೆಹಲಿಯಲ್ಲಿ ನಿಲ್ಲದ ಶೀತಮಾರುತ, ದಟ್ಟೈಸಿದ ಮಂಜು; ವಿಮಾನ-ರೈಲು ಸಂಚಾರ ವ್ಯತ್ಯಯ, ಶಾಲೆಗಳಿಗೆ ರಜೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 10, 2023 | 7:47 AM

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀತಮಾರುತ (Delhi Cold Wave) ಸತತ 5ನೇ ದಿನವೂ ಬೀಸುತ್ತಿದ್ದು, ಉಷ್ಣಾಂಶ ತೀವ್ರವಾಗಿ ಕುಸಿದಿದೆ. ದಟ್ಟ ಮಂಜು ಕವಿದಿದ್ದು, ಚಳಿ ಹೆಚ್ಚಾಗಿದೆ. ಮಂಜು (Fog) ದಟ್ಟೈಸಿದ ಕಾರಣ ರನ್​ವೇಗಳು ಪೈಲಟ್​ಗಳಿಗೆ ಸರಿಯಾಗಿ ಕಾಣಿಸುತ್ತಿಲ್ಲ. ಹೀಗಾಗಿ ದೆಹಲಿಯಲ್ಲಿ ವಿವಿಧೆಡೆ ತೆರಳಬೇಕಾದ ಹಾಗೂ ದೆಹಲಿಯಲ್ಲಿ ಇಳಿಯಬೇಕಾದ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ (Flight Disruption). ದೆಹಲಿಯಿಂದ ನೇಪಾಳಕ್ಕೆ ತೆರಳಬೇಕಿದ್ದ ವಿಮಾನ, ಜೈಪುರ, ಶಿಮ್ಲಾ, ಚಂಡೀಗಡ, ಕುಲು, ಡೆಹ್ರಾಡೂನ್​​ ಸೇರಿದಂತೆ ಹಲವು ನಗರಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ದೆಹಲಿ ಮತ್ತು ಉತ್ತರ ಭಾರತದ ಹಲವು ನಗರಗಳಲ್ಲಿ ಮಂಜು ದಟ್ಟೈಸಿರುವುದರಿಂದ 150ಕ್ಕೂ ಹೆಚ್ಚು ದೇಶೀಯ ವಿಮಾನಗಳ ಸಂಚಾರ ರದ್ದಾಗಿದೆ. ಸುಮಾರು 250 ರೈಲುಗಳ ಸಂಚಾರ ರದ್ದಾಗಿದೆ. ಸತತ 5ನೇ ದಿನವೂ ಶೀತಮಾರುತ ಬೀಸುತ್ತಿದ್ದು, ಉಷ್ಣಾಂಶ ಕುಸಿದಿದೆ. ದಟ್ಟ ಮಂಜಿನಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಗೋಚರಿಸುವ ಪ್ರಮಾಣವು ಕೇವಲ 25 ಮೀಟರ್​ಗಳಿಗೆ ಕುಸಿದಿದೆ. ವಾಹನಗಳು ಹೆಡ್​ಲೈಟ್​ಗಳೊಂದಿಗೆ ನಿಧಾನವಾಗಿ ಸಂಚರಿಸುತ್ತಿವೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಫಾಗ್ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯೂ ಇದೇ ರೀತಿಯ ಅಲರ್ಟ್​ ಘೋಷಿಸಲಾಗಿತ್ತು. ಕೆಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಹಳಿಗಳು ಮತ್ತು ಸಿಗ್ನಲ್ ಸರಿಯಾಗಿ ಗೋಚರಿಸುತ್ತಿಲ್ಲವಾದ ಕಾರಣ ರೈಲುಗಳ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿದೆ. 267 ರೈಲುಗಳ ಸಂಚಾರ ರದ್ದಾಗಿದ್ದಾರೆ, 170 ರೈಲುಗಳು ನಿಧಾನವಾಗಿ ಸಂಚರಿಸುತ್ತಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ದೆಹಲಿಯ ಸಫ್ದಾರ್​ಜಂಗ್​ ಹವಾಮಾನ ವೀಕ್ಷಣಾ ಕೇಂದ್ರದಲ್ಲಿ ಕನಿಷ್ಠ ತಾಪಮಾನವು 3.8 ಡಿಗ್ರಿ ಸೆಲ್ಷಿಯಸ್ ದಾಖಲಾಗಿದೆ. ಲೋಧಿ ರಸ್ತೆ, ಅಯನಗರ್ ಮತ್ತು ರಿಡ್ಜ್​ ಹವಾಮಾನ ಕೇಂದ್ರಗಳಲ್ಲಿ ಸರಾಸರಿ 3.2 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖಲಾಗಿದೆ.

ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿದಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಗಿರಿಧಾಮಗಳಿಗಿಂತಲೂ ಕಡಿಮೆ ಪ್ರಮಾಣದ ಉಷ್ಣಾಂಶ ದೆಹಲಿಯಲ್ಲಿ ದಾಖಲಾಗಿದೆ. ದೆಹಲಿಗೆ ಪಶ್ಚಿಮ ಭಾಗದಲ್ಲಿರುವ ಪರ್ವತ ಪ್ರದೇಶಗಳಿಂದ ಹಿಮಗಾಳಿ ಬೀಸುತ್ತಿರುವುದು ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಉಷ್ಣಾಂಶ ಕುಸಿಯಲು ಮುಖ್ಯ ಕಾರಣ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಚಳಿಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ಶಾಲೆಗಳಿಗೆ ರಜೆ ಘೋಷಿಸುವಂತೆ ದೆಹಲಿ ಸರ್ಕಾರ ಸೂಚನೆ ನೀಡಿದೆ. 1997 ಮತ್ತು 1998ರಲ್ಲಿ ದೆಹಲಿಯಲ್ಲಿ ಸತತ 7 ದಿನಗಳ ಶೀತಗಾಳಿ ಬೀಸಿತ್ತು. 2003, 2013 ಮತ್ತು 2021ರಲ್ಲಿ 6 ದಿನಗಳ ಶೀತಮಾರುತ ಕಾಣಿಸಿಕೊಂಡಿತ್ತು. 1992 ಮತ್ತು 2008ರಲ್ಲಿ ದಾಖಲೆಯ 12 ದಿನಗಳ ಶೀತಮಾರುತ ಬೀಸಿತ್ತು. ಈ ಬಾರಿ ಶೀತಮಾರುತವು ಸತತ 5ನೇ ದಿನ ಬೀಸುತ್ತಿದ್ದು, ಇದು ಹೊಸ ದಾಖಲೆ ಬರೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Delhi Cold Wave ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಚಳಿ, ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ಮತ್ತಷ್ಟು ರಾಷ್ಟ್ರೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 am, Tue, 10 January 23

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ