AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಐದು ತಾಸಿನೊಳಗೆ ವಿಚ್ಛೇದನವೂ ಆಯ್ತು, ಇದೆಂಥಾ ಮದುವೆ

ಮದುವೆ(Marriage)ಯಾಗಿ ಐದೇ ತಾಸಿನೊಳಗೆ ಈ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಉತ್ತರ ಪ್ರದೇಶದ ದೇವರಿಯಾ ಗ್ರಾಮದಲ್ಲಿ ನಡೆದಿದೆ. ಜೀವನದಲ್ಲಿ ಅತ್ಯಂತ ಸಂತೋಷದಾಯಕ ಮತ್ತು ಸ್ಮರಣೀಯ ದಿನವಾಗಬೇಕಿದ್ದ ಆ ದಿನ ದುಃಸ್ವಪ್ನವಾಗಿ ಪರಿಣಮಿಸಿತು. ಗುರುಹಿರಿಯರ ಎದುರು ವಿಶಾಲ್ ಹಾಗೂ ಪೂಜಾ ಹಸೆಮಣೆ ಏರಿದ್ದರು. ಮದುವೆಯೂ ಅದ್ಧೂರಿಯಾಗಿ ನೆರವೇರಿತ್ತು. ವಧುವನ್ನು ಗಂಡನ ಮನೆಗೆ ಕಳುಹಿಸುವ ಶಾಸ್ತ್ರವೂ ಆಗಿತ್ತು. ಮನೆಗೆ ಹೋದ ಬಳಿಕ ವಧು ಕೋಣೆಯಿಂದ ಹೊರಬಂದವಳೇ ನಾನು ತವರು ಮನೆಗೆ ಹೋಗುತ್ತೇನೆಂದು ಪಟ್ಟು ಹಿಡಿದಳು.

ಮದುವೆಯಾಗಿ ಐದು ತಾಸಿನೊಳಗೆ ವಿಚ್ಛೇದನವೂ ಆಯ್ತು, ಇದೆಂಥಾ ಮದುವೆ
ಮದುವೆ
ನಯನಾ ರಾಜೀವ್
|

Updated on: Dec 03, 2025 | 12:03 PM

Share

ದೇವರಿಯಾ, ಡಿಸೆಂಬರ್ 03: ಮದುವೆ(Marriage)ಯಾಗಿ ಐದೇ ತಾಸಿನೊಳಗೆ ಈ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಉತ್ತರ ಪ್ರದೇಶದ ದೇವರಿಯಾ ಗ್ರಾಮದಲ್ಲಿ ನಡೆದಿದೆ. ಜೀವನದಲ್ಲಿ ಅತ್ಯಂತ ಸಂತೋಷದಾಯಕ ಮತ್ತು ಸ್ಮರಣೀಯ ದಿನವಾಗಬೇಕಿದ್ದ ಆ ದಿನ ದುಃಸ್ವಪ್ನವಾಗಿ ಪರಿಣಮಿಸಿತು. ಗುರುಹಿರಿಯರ ಎದುರು ವಿಶಾಲ್ ಹಾಗೂ ಪೂಜಾ ಹಸೆಮಣೆ ಏರಿದ್ದರು. ಮದುವೆಯೂ ಅದ್ಧೂರಿಯಾಗಿ ನೆರವೇರಿತ್ತು. ವಧುವನ್ನು ಗಂಡನ ಮನೆಗೆ ಕಳುಹಿಸುವ ಶಾಸ್ತ್ರವೂ ಆಗಿತ್ತು. ಮನೆಗೆ ಹೋದ ಬಳಿಕ ವಧು ಕೋಣೆಯಿಂದ ಹೊರಬಂದವಳೇ ನಾನು ತವರು ಮನೆಗೆ ಹೋಗುತ್ತೇನೆಂದು ಪಟ್ಟು ಹಿಡಿದಳು.

ಮದುವೆಯಾಗಿ ಮನೆಗೆ ಬಂದು ಕೇವಲ 20 ನಿಮಿಷಗಳಲ್ಲಿ ಎಲ್ಲವೂ ನಡೆದುಹೋಗಿತ್ತು. ಈ ಮನೆಯಲ್ಲಿ ಇರುವುದಿಲ್ಲ ಎಂದು ಆಕೆ ಹೇಳಿದಾಗ ಎಲ್ಲರೂ ತಮಾಷೆ ಮಾಡುತ್ತಿದ್ದಾಳೆ ಎಂದೇ ಭಾವಿಸಿದ್ದರು. ಆದರೆ ಪೂಜಾ ತನ್ನ ಹೆತ್ತವರಿಗೆ ಕರೆ ಮಾಡಿ ನಾನು ಇಲ್ಲಿ ಇರುವುದಿಲ್ಲ ಎಂದು ಹೇಳಿದ್ದಾಳೆ, ಆದರೆ ಯಾಕೆ ಈ ರೀತಿಯ ನಿರ್ಧಾರ ಮಾಡಿದ್ದಾಳೆ ಎನ್ನುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಅವಳ ಮನಸ್ಸನ್ನು ಬದಲಾಯಿಸಿದ ಬಗ್ಗೆ ಹೆಚ್ಚಿನ ವಿವರಗಳಿಲ್ಲ.

ನಂತರ ವಿಶಾಲ್ ಕುಟುಂಬವು ಪೂಜಾಳ ಕುಟುಂಬಕ್ಕೆ ಕರೆ ಮಾಡಿ ಆಕೆಯ ನಿರ್ಧಾರವನ್ನು ತಿಳಿಸಿದೆ. ಅವರು ಆಕೆಯ ಮನವೊಲಿಸಲು ಪ್ರಯತ್ನಿಸಿದರೂ, ಆಕೆ ತನ್ನ ನಿರ್ಧಾರವನ್ನು ಬದಲಾಯಿಸಲು ಅಥವಾ ತನ್ನ ಹಠಾತ್ ಮನಸ್ಸಿನ ಬದಲಾವಣೆಯ ಹಿಂದಿನ ಕಾರಣವನ್ನು ಹಂಚಿಕೊಳ್ಳಲು ಇನ್ನೂ ಸಿದ್ಧರಿರಲಿಲ್ಲ.

ಮತ್ತಷ್ಟು ಓದಿ: ಮದುವೆಯಾದ ಮರುದಿನವೇ ಮದುಮಗ ಹೃದಯಾಘಾತದಿಂದ ಸಾವು

ಇದಾದ ನಂತರ, ಗ್ರಾಮದಲ್ಲಿ ಪಂಚಾಯತ್ ಕರೆಯಲಾಯಿತು, ಅಲ್ಲಿ ಎರಡೂ ಕುಟುಂಬಗಳು ಮತ್ತು ಸ್ಥಳೀಯ ನಿವಾಸಿಗಳು ಮರುದಿನ ಸುಮಾರು ಐದು ಗಂಟೆಗಳ ಕಾಲ ಈ ವಿಷಯದ ಬಗ್ಗೆ ಚರ್ಚಿಸಿದರು. ಅಂತಿಮವಾಗಿ ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಕೊನೆಗೊಳಿಸಬೇಕು ಎಂದು ನಿರ್ಧರಿಸಲಾಯಿತು. ಎಲ್ಲಾ ಮದುವೆಯ ಉಡುಗೊರೆಗಳನ್ನು ಹಿಂತಿರುಗಿಸಲಾಯಿತು ಮತ್ತು ವಧು ತನ್ನ ಕುಟುಂಬದೊಂದಿಗೆ ಹೊರಟುಹೋದಳು.

ಸುದ್ದಿವಾಹಿನಿಯೊಂದಕ್ಕೆ ಮಾತನಾಡಿದ ವಿಶಾಲ್, ಪೂಜಾ ಮದುವೆಗೆ ಮೊದಲು ತನ್ನನ್ನು ಮದುವೆಯಾಗಲು ಎಂದಿಗೂ ಇಷ್ಟವಿರಲಿಲ್ಲ, ಆಕೆ ಹೆಚ್ಚಾಗಿ ನನ್ನೊಂದಿಗೆ ಮಾತನಾಡುತ್ತಲೇ ಇರಲಿಲ್ಲ, ಈಗ ಮದುವೆಯ ಬಳಿಕ ಆಕೆ ಮನೆ ಬಿಟ್ಟು ಹೋಗಿರುವುದು ಎರಡೂ ಕುಟುಂಬಗಳಿಗೂ ಮುಜುಗರವನ್ನುಂಟು ಮಾಡಿದೆ ಎಂದು ವಿಶಾಲ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?