AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಟವನ್ನು ಕಿತ್ತು ಕಸದ ಬುಟ್ಟಿಗೆ ಎಸೆದಿದ್ರು, ಅಮೆರಿಕದಲ್ಲಿ ತಮಗಾದ ಅನುಭವ ಹಂಚಿಕೊಂಡ ವ್ಯಕ್ತಿ

ಒಂದೆಡೆ ಅಮೆರಿಕದಲ್ಲಿ ಭಾರತೀಯ ಅಕ್ರಮ ವಲಸಿಗರನ್ನು ನಡೆಸಿಕೊಳ್ಳುತ್ತಿರುವ ರೀತಿ ಹಾಗೂ ಭಾರತಕ್ಕೆ ಅವರನ್ನು ಕರೆತರುವ ರೀತಿ ಬಗ್ಗೆ ವಿರೋಧ ಪಕ್ಷಗಳು ಹಲವು ಬಾರಿ ಪ್ರಶ್ನೆಗಳನ್ನು ಎತ್ತಿದ್ದವು. ಆದರೂ ಅಮೆರಿಕದ ರೀತಿ ಬದಲಾಗಿಲ್ಲ. ಇತ್ತೀಚೆಗಷ್ಟೇ ಭಾರತೀಯರನ್ನು ವಿಮಾನದಲ್ಲಿ ಕರೆತರುವ ವೇಳೆ ಅವರ ಕೈಗಳಿಗೆ ಕೋಳ ತೊಡಿಸಲಾಗಿತ್ತು ಎಂದು ವ್ಯಕ್ತಿಯೊಬ್ಬರು ತಮಗಾದ ಕಹಿ ಅನುಭವ ಹಂಚಿಕೊಂಡಿದ್ದರು.

ಪೇಟವನ್ನು ಕಿತ್ತು ಕಸದ ಬುಟ್ಟಿಗೆ ಎಸೆದಿದ್ರು, ಅಮೆರಿಕದಲ್ಲಿ ತಮಗಾದ ಅನುಭವ ಹಂಚಿಕೊಂಡ ವ್ಯಕ್ತಿ
ಜತಿಂದರ್ Image Credit source: India Today
ನಯನಾ ರಾಜೀವ್
|

Updated on: Feb 17, 2025 | 11:39 AM

Share

ಒಂದೆಡೆ ಅಮೆರಿಕದಲ್ಲಿ ಭಾರತೀಯ ಅಕ್ರಮ ವಲಸಿಗರನ್ನು ನಡೆಸಿಕೊಳ್ಳುತ್ತಿರುವ ರೀತಿ ಹಾಗೂ ಭಾರತಕ್ಕೆ ಅವರನ್ನು ಕರೆತರುವ ರೀತಿ ಬಗ್ಗೆ ವಿರೋಧ ಪಕ್ಷಗಳು ಹಲವು ಬಾರಿ ಪ್ರಶ್ನೆಗಳನ್ನು ಎತ್ತಿದ್ದವು. ಆದರೂ ಅಮೆರಿಕದ ರೀತಿ ಬದಲಾಗಿಲ್ಲ. ಇತ್ತೀಚೆಗಷ್ಟೇ ಭಾರತೀಯರನ್ನು ವಿಮಾನದಲ್ಲಿ ಕರೆತರುವ ವೇಳೆ ಅವರ ಕೈಗಳಿಗೆ ಕೋಳ ತೊಡಿಸಲಾಗಿತ್ತು ಎಂದು ವ್ಯಕ್ತಿಯೊಬ್ಬರು ತಮಗಾದ ಕಹಿ ಅನುಭವ ಹಂಚಿಕೊಂಡಿದ್ದರು. ಇದೀಗ ಅಂಥದ್ದೇ ಘಟನೆಯೊಂದು ಮುನ್ನಲೆಗೆ ಬಂದಿದ್ದು, ಶಿಬಿರದಲ್ಲಿ ನಮ್ಮ ಪೇಟವನ್ನು ಕಸದ ಬುಟ್ಟಿಗೆ ಎಸೆದಿದ್ದರು, ಜತೆಗೆ ಚಿತ್ರಹಿಂಸೆ ಕೊಟ್ಟಿದ್ದರು ಎಂದು ವ್ಯಕ್ತಿಯೊಬ್ಬರು ಇಂಡಿಯಾ ಟುಡೇಗೆ ನೀಡಿರುವ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಭಾನುವಾರ ಅಮೆರಿಕದಿಂದ ಅಮೃತಸರಕ್ಕೆ ಗಡೀಪಾರು ಮಾಡಲಾದ 112 ಅಕ್ರಮ ಭಾರತೀಯ ವಲಸಿಗರಲ್ಲಿ ಒಬ್ಬರಾದ ಜತೀಂದರ್ ಸಿಂಗ್, ಅಲ್ಲಿನ ಬಂಧನ ಶಿಬಿರದಲ್ಲಿ ಎರಡು ವಾರಗಳ ಕಾಲ ತಂಗಿದ್ದ ಅನುಭವವನ್ನು ವಿವರಿಸಿದ್ದಾರೆ. ತನಗೆ ಚಿತ್ರಹಿಂಸೆ ನೀಡಲಾಯಿತು ಮತ್ತು ಸರಿಯಾದ ಆಹಾರ ಸಿಗಲಿಲ್ಲ, ಅಮೆರಿಕ ಸೇನೆಯು ತನ್ನ ಪೇಟವನ್ನು ತೆಗೆಯಲು ಒತ್ತಾಯಿಸಿದರು, ಬಳಿಕ ಅದನ್ನು ಕಸದ ಬುಟ್ಟಿಗೆ ಎಸೆದಿದ್ದರು. ಅಮೃತಸರದಲ್ಲಿ ಸರಿಯಾದ ಉದ್ಯೋಗ ಸಿಗದ ಕಾರಣ ತನ್ನ ಕುಟುಂಬವನ್ನು ಪೋಷಿಸಲು ವಿದೇಶದಲ್ಲಿ ಉದ್ಯೋಗ ಅರಸಿ ಹೋಗಿದ್ದೆ. ಅಮೆರಿಕದ ಮಿಲಿಟರಿ ವಿಮಾನದಲ್ಲಿ ಸುಮಾರು 36 ಗಂಟೆಗಳ ಕಾಲ ಬಂಧನದಲ್ಲಿದ್ದೆ ಎಂದರು.

ಕಳೆದ ವರ್ಷ ನವೆಂಬರ್ 27 ರಂದು ನಾನು ಅಮೆರಿಕದ ಗಡಿಯನ್ನು ಪ್ರವೇಶಿಸುವಾಗ ಸಿಕ್ಕಿಬಿದ್ದ ನಂತರ ನನ್ನನ್ನು ಎರಡು ವಾರಗಳ ಕಾಲ ಬಂಧನ ಶಿಬಿರಕ್ಕೆ ಕಳುಹಿಸಲಾಯಿತು. ಕಳೆದ ವರ್ಷ ಸೆಪ್ಟೆಂಬರ್ 12 ರಂದು ನಾನು ಮನೆಯಿಂದ ಹೊರಟೆ. ಬಂಧನ ಶಿಬಿರದಲ್ಲಿ, ನನ್ನ ವಿರೋಧದ ಹೊರತಾಗಿಯೂ ಅವರು ನನ್ನ ಪೇಟವನ್ನು ತೆಗೆಯುವಂತೆ ಒತ್ತಾಯಿಸಿದರು.

ಮತ್ತಷ್ಟು ಓದಿ: ಅಮೆರಿಕದಿಂದ ಭಾರತೀಯರ ಗಡಿಪಾರು: ಪ್ರಧಾನಿ ಮೋದಿಯನ್ನು ಭೇಟಿಯಾದ ಜೈಶಂಕರ್

2024 ರ ನವೆಂಬರ್‌ನಲ್ಲಿ ತನ್ನ ಸ್ನೇಹಿತರ ಸಲಹೆಯ ಮೇರೆಗೆ ಏಜೆಂಟ್‌ ಜೊತೆ ಸಂಪರ್ಕಕ್ಕೆ ಬಂದ ಜತೀಂದರ್ ಸಿಂಗ್, ಅವರನ್ನು ಅಮೆರಿಕಕ್ಕೆ ಕರೆದೊಯ್ಯುವ ಭರವಸೆ ನೀಡಿದ ನಂತರ ಅವರಿಗೆ 50 ಲಕ್ಷ ರೂ.ಗಳನ್ನು ಪಾವತಿಸಿದ್ದರು. ನನ್ನ ಇಬ್ಬರು ವಿವಾಹಿತ ಸಹೋದರಿಯರ ಆಭರಣಗಳನ್ನು ಸಹ ನಾನು ಮಾರಿ ಉಳಿದ ಮೊತ್ತವನ್ನು ಏಜೆಂಟ್‌ಗೆ ಪಾವತಿಸಿದ್ದೆ, ಜತೆಗೆ 1.3 ಎಕರೆಯಷ್ಟು ಜಮೀನು ಮಾಡಿದ್ದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ