AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gurmeet Ram Rahim: ಗುರ್ಮೀತ್ ರಾಮ್​ ರಹೀಮ್​ ಪೆರೋಲ್ ಮೇಲೆ ಬಿಡುಗಡೆ

ಈ ಬಾರಿಯ ಪೆರೋಲ್ ಅವಧಿಯಲ್ಲಿ, ಡೇರಾ ಸಚ್ಚಾ ಸೌದಾ ಮಾಜಿ ಮುಖ್ಯಸ್ಥ ಶಾ ಸಂತಮ್ ಸಿಂಗ್ ಜಯಂತಿಯಲ್ಲಿ ಸಿಂಗ್ ಪಾಲ್ಗೊಳ್ಳಲಿದ್ದಾನೆ ಎನ್ನಲಾಗಿದೆ. ಶಾ ಸಂತಮ್ ಸಿಂಗ್ ಜಯಂತಿ ಕಾರ್ಯಕ್ರಮ ಜನವರಿ 25ರಂದು ನಡೆಯಲಿದೆ.

Gurmeet Ram Rahim: ಗುರ್ಮೀತ್ ರಾಮ್​ ರಹೀಮ್​ ಪೆರೋಲ್ ಮೇಲೆ ಬಿಡುಗಡೆ
ಗುರ್ಮೀತ್ ರಾಮ್​ ರಹೀಮ್Image Credit source: PTI
Ganapathi Sharma
|

Updated on:Jan 21, 2023 | 2:54 PM

Share

ನವದೆಹಲಿ: ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಹರಿಯಾಣದ ರೋಹ್ಟಕ್​ ಜಿಲ್ಲೆಯ ಸುನರಿಯಾ ಜೈಲಿನಲ್ಲಿರುವ ಡೇರಾ ಸಚ್ಚಾ ಸೌದಾ (Dera Sacha Sauda) ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್​ನನ್ನು (Gurmeet Ram Rahim Singh) 40 ದಿನಗಳ ಪೆರೋಲ್ ಮೇಲೆ ಶನಿವಾರ ಬಿಡುಗಡೆ ಮಾಡಲಾಗಿದೆ. ಮೂರು ತಿಂಗಳ ಹಿಂದಷ್ಟೇ ರಹೀಮ್ ಸಿಂಗ್​ಗೆ ಪೆರೋಲ್ ನೀಡಲಾಗಿತ್ತು. ನಿಯಮಗಳ ಅನುಸಾರ ಪೆರೋಲ್ ನೀಡಲಾಗಿದೆ ಎಂದು ರೋಹ್ಟಕ್​ನ ವಿಭಾಗೀಯ ಕಮಿಷನರ್ ಸಂಜೀವ್ ವರ್ಮಾ ತಿಳಿಸಿದ್ದಾರೆ. ಡೇರಾ ಸಚ್ಚಾ ಸೌದಾ ಮುಖ್ಯಸ್ಥನ ಈ ಹಿಂದಿನ ಪೆರೋಲ್ ಅವಧಿ ನವೆಂಬರ್ 25ರಂದು ಮುಗಿದಿತ್ತು. ಆ ಅವಧಿಯಲ್ಲಿ ಆತ ಉತ್ತರ ಪ್ರದೇಶದ ಬರ್ಣವ ಆಶ್ರಮಕ್ಕೆ ತೆರಳಿದ್ದ. 40 ದಿನಗಳ ಪೆರೋಲ್ ಕೋರಿ ರಹೀಮ್ ಸಿಂಗ್ ಅರ್ಜಿ ಸಲ್ಲಿಸಿದ್ದ. ಅದನ್ನು ರೋಹ್ಟಕ್ ವಿಭಾಗೀಯ ಆಯುಕ್ತರಿಗೆ ಕಳುಹಿಸಿಕೊಡಲಾಗಿತ್ತು ಎಂದು ಹರಿಯಾಣದ ಜೈಲುಗಳ ಸಚಿವ ರಂಜಿತ್ ಸಿಂಗ್ ಚೌಟಾಲ ತಿಳಿಸಿದ್ದಾರೆ.

ಈ ಬಾರಿಯ ಪೆರೋಲ್ ಅವಧಿಯಲ್ಲಿ, ಡೇರಾ ಸಚ್ಚಾ ಸೌದಾ ಮಾಜಿ ಮುಖ್ಯಸ್ಥ ಶಾ ಸಂತಮ್ ಸಿಂಗ್ ಜಯಂತಿಯಲ್ಲಿ ಸಿಂಗ್ ಪಾಲ್ಗೊಳ್ಳಲಿದ್ದಾನೆ ಎನ್ನಲಾಗಿದೆ. ಶಾ ಸಂತಮ್ ಸಿಂಗ್ ಜಯಂತಿ ಕಾರ್ಯಕ್ರಮ ಜನವರಿ 25ರಂದು ನಡೆಯಲಿದೆ.

ಇದನ್ನೂ ಓದಿ: Social Media Influencers: ಸಾಮಾಜಿಕ ಮಾಧ್ಯಮ ಪ್ರಭಾವಿಗಳೇ ಎಚ್ಚರ; ಬಂದಿದೆ ಹೊಸ ನಿಯಮ, ತಪ್ಪಿದರೆ 50 ಲಕ್ಷ ದಂಡ

ಈ ಹಿಂದಿನ ಪೆರೋಲ್ ಅವಧಿಯಲ್ಲಿ ಉತ್ತರ ಪ್ರದೇಶದ ಬರ್ಣವ ಆಶ್ರಮದಿಂದಲೇ ಆನ್​ಲೈನ್ ಸತ್ಸಂಗ ಕಾರ್ಯಕ್ರಮಗಳನ್ನು ರಹೀಮ್ ಸಿಂಗ್ ನಡೆಸಿಕೊಟ್ಟಿದ್ದ. ಈ ಪೈಕಿ ಕೆಲವು ಕಾರ್ಯಕ್ರಮಗಳಿಗೆ ಹರಿಯಾಣದ ಬಿಜೆಪಿ ನಾಯಕರೂ ಹಾಜರಾಗಿದ್ದರು. ಅದಕ್ಕೂ ಮುನ್ನ ಜೂನ್​ನಲ್ಲಿ 1 ತಿಂಗಳ ಪೆರೋಲ್​ನಲ್ಲಿ ರಹೀಮ್ ಸಿಂಗ್ ಜೈಲಿನಿಂದ ಹೊರಬಂದಿದ್ದ. 2022ರ ಫೆಬ್ರವರಿ 7ರಂದು ಕೂಡ ಆತನಿಗೆ ಮೂರು ವಾರಗಳ ಪೆರೋಲ್ ನೀಡಲಾಗಿತ್ತು.

ರಹೀಮ್ ಸಿಂಗ್​ಗೆ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 16 ವರ್ಷಗಳ ಹಿಂದಿನ ಪತ್ರಕರ್ತನ ಕೊಲೆ ಪ್ರಕರಣದಲ್ಲಿಯೂ ರಾಮ್ ರಹೀಮ್ ಸಿಂಗ್ ಮತ್ತು ಇತರ ನಾಲ್ವರನ್ನು ಅಪರಾಧಿಗಳು ಎಂದು ಪರಿಗಣಿಸಿದ್ದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Sat, 21 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ