AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಂತಿ ಬಯಸುವುದಿಲ್ಲ, ಅದು ಮುಸ್ಲಿಮರನ್ನು ದ್ವೇಷಿಸುತ್ತದೆ: ಅಸಾದುದ್ದೀನ್ ಓವೈಸಿ

ನಮ್ಮೊಂದಿಗೆ ರಾಜಕೀಯವಾಗಿ ಹೋರಾಡಿ. ಆದರೆ ಈ ರೀತಿ ಅಲ್ಲ. ಈ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಬೆಂಬಲಿಸದಿದ್ದರೆ ಅವರು ಪ್ರತಿಕ್ರಿಯಿಸಬೇಕು

ಬಿಜೆಪಿ ಶಾಂತಿ ಬಯಸುವುದಿಲ್ಲ, ಅದು ಮುಸ್ಲಿಮರನ್ನು ದ್ವೇಷಿಸುತ್ತದೆ: ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ
TV9 Web
| Edited By: |

Updated on:Aug 23, 2022 | 8:19 PM

Share

ಪ್ರವಾದಿ ಮೊಹಮ್ಮದ್ (Prophet Mohammad) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಹೈದರಾಬಾದ್‌ನಲ್ಲಿ ಪ್ರತಿಭಟನೆಗೆ ಕಾರಣವಾದ ಕೆಲವೇ ಗಂಟೆಗಳ ನಂತರ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ (T Raja Singh) ಅವರನ್ನು ಬಂಧಿಸಿದ್ದು ಬಿಜೆಪಿ ಅವರನ್ನು ಅಮಾನತುಗೊಳಿಸಿದೆ . ಈ ವಿವಾದ ನಡುವೆ ಪ್ರತಿಕ್ರಿಯಿಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಶಾಸಕರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಹೈದರಾಬಾದ್‌ನಲ್ಲಿ ಶಾಂತಿಯಾಗಿರುವುದು  ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ಪ್ರವಾದಿ ಮುಹಮ್ಮದ್ ಮತ್ತು ಮುಸ್ಲಿಮರನ್ನು ದ್ವೇಷಿಸುತ್ತದೆ. ಅವರು ಭಾರತದ ಸಾಮಾಜಿಕ ರಚನೆಯನ್ನು ನಾಶಮಾಡಲು ಬಯಸುತ್ತಾರೆ ಎಂದು ಓವೈಸಿ ಹೇಳಿರುವುದಾಗಿ ಎಎನ್ಐ ಉಲ್ಲೇಖಿಸಿದೆ.

ನಮ್ಮೊಂದಿಗೆ ರಾಜಕೀಯವಾಗಿ ಹೋರಾಡಿ. ಆದರೆ ಈ ರೀತಿ ಅಲ್ಲ. ಈ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಬೆಂಬಲಿಸದಿದ್ದರೆ ಅವರು ಪ್ರತಿಕ್ರಿಯಿಸಬೇಕು. ನಾನು ಕೂಡ ಘೋಷಣೆಗಳನ್ನು (ಸರ್ ತಾನ್ ಸೆ ಜುದಾ) ಖಂಡಿಸುತ್ತೇನೆ. ಜನರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ನಾನು ಅವರಿಗೆ ಹೇಳುತ್ತೇನೆ.

ಪ್ರವಾದಿಯ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿ ಎಐಎಂಐಎಂ ಕಾರ್ಯಕರ್ತರು ಹೈದರಾಬಾದ್ ಪೊಲೀಸ್ ಮುಖ್ಯಸ್ಥರ ಕಚೇರಿಯ ಮುಂದೆ ಧರಣಿ ನಡೆಸಿ ರಾಜಾ ಸಿಂಗ್​​ನ್ನು ಬಂಧಿಸುವಂತೆ ಕರೆ ನೀಡಿದರು. ಕಮಿಷನರ್ ಕಚೇರಿಗೆ ನುಗ್ಗಲು ಯತ್ನಿಸಿದ ಕೆಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ
Image
BIG NEWS: ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಪಕ್ಷದಿಂದ ಅಮಾನತು: ಸೆ. 2ರೊಳಗೆ ಉತ್ತರ ನೀಡಲು ಆದೇಶ
Image
Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ
Image
ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು

ಸೋಮವಾರ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಸಿಂಗ್ ಪ್ರವಾದಿ ವಿರುದ್ಧ ಅಸಭ್ಯ ಭಾಷೆ ಬಳಸಿದ್ದಾರೆ ಎಂದು ಕಾರ್ಯಕರ್ತ ವಜಿಹುದ್ದೀನ್ ಸಲ್ಮಾನ್ ಹೇಳಿದ್ದಾರೆ. ನಂತರ ವಿಡಿಯೊವನ್ನು ತೆಗೆದುಹಾಕಲಾಗಿದೆ.

ರಾಜಾ ಸಿಂಗ್ ಅವರು ಉದ್ರೇಕಕಾರಿ ಭಾಷಣಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ತೆಲಂಗಾಣ ಸರ್ಕಾರ ಹೈದರಾಬಾದ್‌ನಲ್ಲಿ ಪ್ರದರ್ಶನ ನೀಡಲು ಅವಕಾಶ ನೀಡಿದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರುಕಿಯ ಮೇಲೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದರು. “ಕಾರ್ಯಕ್ರಮ ಎಲ್ಲೇ ನಡೆದರೂ ನಾವು ಅವನನ್ನು ಥಳಿಸುತ್ತೇವೆ. ಅವನಿಗೆ ಸ್ಥಳವನ್ನು ಯಾರು ನೀಡಿದರೆ, ನಾವು ಅಲ್ಲಿಗೆ  ಬೆಂಕಿ ಹಚ್ಚುತ್ತೇವೆ ಎಂದಿದ್ದರು ರಾಜಾ ಸಿಂಗ್.

Published On - 8:18 pm, Tue, 23 August 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್