AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 27ಕ್ಕೆ ದೆಹಲಿ ಶಾಲೆಗಳಲ್ಲಿ ಆರಂಭವಾಗಲಿದೆ ದೇಶಭಕ್ತಿ ಪಠ್ಯಕ್ರಮ: ಅರವಿಂದ ಕೇಜ್ರಿವಾಲ್

Arvind Kejriwal: ಇದು ವಾಡಿಕೆ ಕಲಿಕೆಯ ಅಗತ್ಯವಿರುವ ವಿಷಯವಲ್ಲ. ಮಕ್ಕಳಿಗೆ ರಾಷ್ಟ್ರದ ಕಥೆಗಳ ಬಗ್ಗೆ ಹೇಳಲಾಗುತ್ತದೆ. ರಾಷ್ಟ್ರದ ಮೇಲೆ ಅವರ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ಮತ್ತು ಅವರು ಹೇಗೆ ಕೊಡುಗೆ ನೀಡಬಹುದು ಎಂಬುದರ ಕುರಿತು ಚರ್ಚೆಗಳು ನಡೆಯುತ್ತವೆ ಎಂದು ಕೇಜ್ರಿವಾಲ್ ಹೇಳಿದರು

ಸೆಪ್ಟೆಂಬರ್ 27ಕ್ಕೆ ದೆಹಲಿ ಶಾಲೆಗಳಲ್ಲಿ ಆರಂಭವಾಗಲಿದೆ ದೇಶಭಕ್ತಿ ಪಠ್ಯಕ್ರಮ: ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 15, 2021 | 3:25 PM

Share

ದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಜನ್ಮ ದಿನಾಚರಣೆಯ ನಿಮಿತ್ತ ಸೆಪ್ಟೆಂಬರ್ 27 ರಿಂದ ದೆಹಲಿಯಾದ್ಯಂತ ಶಾಲೆಗಳಲ್ಲಿ ದೇಶಭಕ್ತಿ ಪಠ್ಯಕ್ರಮವು ಜಾರಿಗೆ ಬರಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಇದು ಚಟುವಟಿಕೆ ಆಧಾರಿತವಾಗಿದ್ದು ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಇದು ವಾಡಿಕೆ ಕಲಿಕೆಯ ಅಗತ್ಯವಿರುವ ವಿಷಯವಲ್ಲ. ಮಕ್ಕಳಿಗೆ ರಾಷ್ಟ್ರದ ಕಥೆಗಳ ಬಗ್ಗೆ ಹೇಳಲಾಗುತ್ತದೆ. ರಾಷ್ಟ್ರದ ಮೇಲೆ ಅವರ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ಮತ್ತು ಅವರು ಹೇಗೆ ಕೊಡುಗೆ ನೀಡಬಹುದು ಎಂಬುದರ ಕುರಿತು ಚರ್ಚೆಗಳು ನಡೆಯುತ್ತವೆ ಎಂದು ಕೇಜ್ರಿವಾಲ್ ಹೇಳಿದರು. ಕಳೆದ ವಾರ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು ಪಠ್ಯಕ್ರಮವನ್ನು ಅಳವಡಿಸಿಕೊಂಡಿದೆ.

ಭಾನುವಾರ ಸ್ವಾತಂತ್ರ್ಯ ದಿನದಂದು ದೆಹಲಿ ಸೆಕ್ರೆಟರಿಯೇಟ್ ನಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಕೇಜ್ರಿವಾಲ್ ಮಾತನಾಡಿದ ಕೇಜ್ರಿವಾಲ್ ಸಾಂಕ್ರಾಮಿಕ ಸಮಯದಲ್ಲಿ ಜೀವ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಗೌರವ ಸಲ್ಲಿಸಿದ್ದಾರೆ.

ಒಂದು ಗಂಟೆಯ ಸುದೀರ್ಘ ಭಾಷಣದಲ್ಲಿ ಸಿಎಂ ಕಳೆದ ವರ್ಷ ಶಾಲಾ ಶಿಕ್ಷಣದಲ್ಲಿ ವಿವಿಧ ಬದಲಾವಣೆಗಳ ಬಗ್ಗೆ ಮಾತನಾಡಿದರು.

ಅಕ್ಟೋಬರ್ 2 ರಂದು ನಗರದ ಹಲವು ಭಾಗಗಳಲ್ಲಿ ಉದ್ಯಾನವನಗಳು ಮತ್ತು ಸಮುದಾಯ ಭವನಗಳಲ್ಲಿ ದೆಹಲಿಯಲ್ಲಿ ಉಚಿತ ಯೋಗ ತರಗತಿಗಳು ಆರಂಭವಾಗಲಿವೆ ಎಂದು ಕೇಜ್ರಿವಾಲ್ ಹೇಳಿದರು. ಪ್ರಾದೇಶಿಕ ಸಂಚಾರ ಕಚೇರಿಗಳಲ್ಲಿ ಮತ್ತು ಮನೆಬಾಗಿಲು ವಿತರಣಾ ಸೇವೆಗಳ ಮೂಲಕ ಫೇಸ್ ಲೆಸ್ ಸೇವೆಗಳ ರೂಪದಲ್ಲಿ ಆಡಳಿತದಲ್ಲಿನ ಬದಲಾವಣೆಗಳನ್ನು ಅವರು ಎತ್ತಿ ತೋರಿಸಿದರು. ದೇಶಭಕ್ತಿ ಪಠ್ಯಕ್ರಮದ ಕುರಿತು ಮಾತನಾಡಿದ ಅವರು ತಮ್ಮ ಮಕ್ಕಳಿಗೆ ಸಹಾಯ ಮಾಡುವಲ್ಲಿ ಪೋಷಕರು ಕೂಡ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.

“ನಿಮ್ಮ ಮಗು ಶಾಲೆ ಮುಗಿಸಿ ಬಂದಾಗ, ಅವರೊಂದಿಗೆ ಕುಳಿತು ರಾಷ್ಟ್ರದ ಬಗ್ಗೆ ಮಾತನಾಡಿ, ಅವರಿಗೆ ಏನು ಕಲಿಸಲಾಗಿದೆ ಎಂದು ಕೇಳಿ. ಮಕ್ಕಳು ಮತ್ತು ಪೋಷಕರು ಇಬ್ಬರೂ ಕಲಿಯುತ್ತಾರೆ, ”ಎಂದು ಅವರು ಹೇಳಿದರು. ಅಂತಾರಾಷ್ಟ್ರೀಯ ಬ್ಯಾಕಲೌರಿಯೇಟ್ ಮಂಡಳಿಯೊಂದಿಗೆ ಸರ್ಕಾರವು ಹೊಂದಿಕೊಂಡಿರುವ ಒಪ್ಪಂದದ ಬಗ್ಗೆ ಮಾತನಾಡಿದ ಕೇಜ್ರಿವಾಲ್ ಈ ವರ್ಷ 30 ಶಾಲೆಗಳು ಹೊಸ ಪಠ್ಯಕ್ರಮವನ್ನು ಹೊಂದಿವೆ. ಹೊಸ ದೆಹಲಿ ಶಾಲಾ ಶಿಕ್ಷಣ ಮಂಡಳಿಯ ಅಡಿಯಲ್ಲಿ ಎಲ್ಲಾ ದೆಹಲಿ ಸರ್ಕಾರಿ ಶಾಲೆಗಳಲ್ಲಿ ಇದನ್ನು ಜಾರಿಗೊಳಿಸುವ ನಿರೀಕ್ಷೆಯಿದೆ ಎಂದಿದ್ದಾರೆ.

ಇದನ್ನೂ ಓದಿ:  Independence Day: ಭಾರತದ ಜೊತೆ ಈ ದೇಶಗಳಿಗೂ ಇಂದು ರಾಷ್ಟೀಯ ದಿನದ ಸಂಭ್ರಮ

ಇದನ್ನೂ ಓದಿ: ದೇಶ ವಿಭಜನೆ ವೇಳೆ ಪಾಕ್ ಪಾಲಾದ ಕುಟುಂಬದ ಮೂಲ ಅರಸಿ ಹೋದ ಭಾರತೀಯ; ಕಪ್ಪು ನವಿಲಿನ ಜಾಡು ಹಿಡಿದು ಹೊರಟ ರೋಚಕ ಕತೆ

(Deshbhakti curriculum Delhi from Arvind Kejriwal Bhagat Singh State Council of Educational Research)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​