AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ

ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್​ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್​ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on:Mar 21, 2021 | 3:24 PM

Share

ನಾಗ್ಪುರ್: ನಾಗ್ಪುರ್​ನಲ್ಲಿ ಕೊವಿಡ್ ಲಾಕ್​ಡೌನ್ ನಡುವೆಯೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂದ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ದೇಶ್​ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು.ಈ ಹಿನ್ನೆಲೆಯಲ್ಲಿ ದೇಶ್​ಮುಖ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ನಾಗ್ಪುರ್ ನಲ್ಲಿ ಈ ತಿಂಗಳ ಅಂತ್ಯದವರೆಗೆ ಕೊವಿಡ್ ನಿರ್ಬಂಧ ಹೇರಲಾಗಿದೆ. ಮಾರ್ಚ್ 15ರಂದು ಸಂಪೂರ್ಣ ಲಾಕ್​ಡೌನ್ ಘೋಷಣೆಯಾಗಿದ್ದು ಮಾರ್ಚ್ 21ರವರೆಗೆ ಮುಂದುವರಿಯಲಿದೆ. ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್​ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್​ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ  ನೇತೃತ್ವದ ಸರ್ಕಾರದಲ್ಲಿ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ. ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 3:15 pm, Sun, 21 March 21

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ