AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ

ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್​ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್​ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
|

Updated on:Mar 21, 2021 | 3:24 PM

Share

ನಾಗ್ಪುರ್: ನಾಗ್ಪುರ್​ನಲ್ಲಿ ಕೊವಿಡ್ ಲಾಕ್​ಡೌನ್ ನಡುವೆಯೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂದ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ದೇಶ್​ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು.ಈ ಹಿನ್ನೆಲೆಯಲ್ಲಿ ದೇಶ್​ಮುಖ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ನಾಗ್ಪುರ್ ನಲ್ಲಿ ಈ ತಿಂಗಳ ಅಂತ್ಯದವರೆಗೆ ಕೊವಿಡ್ ನಿರ್ಬಂಧ ಹೇರಲಾಗಿದೆ. ಮಾರ್ಚ್ 15ರಂದು ಸಂಪೂರ್ಣ ಲಾಕ್​ಡೌನ್ ಘೋಷಣೆಯಾಗಿದ್ದು ಮಾರ್ಚ್ 21ರವರೆಗೆ ಮುಂದುವರಿಯಲಿದೆ. ಅಗತ್ಯ ವಸ್ತುಗಳಾದ ಹಣ್ಣು, ಹಾಲು ತರಕಾರಿ ಅಂಗಡಿಗಳನ್ನು ಮಾತ್ರ ತೆರೆಯಬಹುದು ಎಂದು ನಾಗ್ಪುರ್ ಜಿಲ್ಲಾಡಳಿತ ಹೇಳಿತ್ತು. ಭಾನುವಾರ ಲಾಕ್​ಡೌನ್ ಇದ್ದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಆದಾಗ್ಯೂ, ದೇಶ್​ಮುಖ್ ಅವರ ನಿವಾಸದ ಹೊರಗೆ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ  ನೇತೃತ್ವದ ಸರ್ಕಾರದಲ್ಲಿ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ. ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಇದನ್ನೂ ಓದಿ:  ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 3:15 pm, Sun, 21 March 21

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?