AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರ ವಿರುದ್ಧ ಸಿಎಂ ಫಡ್ನವೀಸ್ ವಾಗ್ದಾಳಿ, ಕಠಿಣ ಕ್ರಮದ ಎಚ್ಚರಿಕೆ

ಕಾಂಗ್ರೆಸ್ ಜೊತೆಗಿನ ಮೈತ್ರಿಗಾಗಿ ಬಿಜೆಪಿ ನಾಯಕರ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದಾರೆ. ಸ್ಥಳೀಯ ಬಿಜೆಪಿ ಘಟಕಗಳು ಪ್ರತಿಸ್ಪರ್ಧಿ ಪಕ್ಷಗಳೊಂದಿಗೆ ಚುನಾವಣಾ ನಂತರದ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಹ ಸಂಬಂಧಗಳನ್ನು ತಕ್ಷಣವೇ ಕೊನೆಗೊಳಿಸಬೇಕೆಂದು ನಿರ್ದೇಶಿಸಿದ್ದಾರೆ. ಅಂಬರ್ನಾಥ್‌ನಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವಂತೆ ಅವರು ಬಿಜೆಪಿ ಘಟಕಗಳಿಗೆ ಸೂಚಿಸಿದ್ದಾರೆ. ಇಲ್ಲವಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರ ವಿರುದ್ಧ ಸಿಎಂ ಫಡ್ನವೀಸ್ ವಾಗ್ದಾಳಿ, ಕಠಿಣ ಕ್ರಮದ ಎಚ್ಚರಿಕೆ
Fadnavis
ಸುಷ್ಮಾ ಚಕ್ರೆ
|

Updated on:Jan 07, 2026 | 4:35 PM

Share

ಮುಂಬೈ, ಜನವರಿ 7: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಜನವರಿ 7) ಕಾಂಗ್ರೆಸ್ ಜೊತೆಗಿನ ಯಾವುದೇ ಮೈತ್ರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂತಹ ಒಪ್ಪಂದವನ್ನು “ಸ್ವೀಕಾರಾರ್ಹವಲ್ಲ” ಎಂದು ಕರೆದಿದ್ದಾರೆ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಫಡ್ನವೀಸ್ ಅಸಮಾಧಾನ ಹೊರಹಾಕಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ. ಅಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಕೈಜೋಡಿಸಿವೆ ಎಂದು ವರದಿಯಾಗಿದೆ. ಈ ಕ್ರಮವು ಮಹಾರಾಷ್ಟ್ರ ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ

“ಕಾಂಗ್ರೆಸ್ ಜೊತೆಗಿನ ಮೈತ್ರಿ ಸ್ವೀಕಾರಾರ್ಹವಲ್ಲ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇರುವುದಿಲ್ಲ” ಎಂದು ಫಡ್ನವೀಸ್ ಹೇಳಿದ್ದಾರೆ.

“ಕಾಂಗ್ರೆಸ್ ಮುಕ್ತ ಭಾರತ”ಕ್ಕಾಗಿ ಬಿಜೆಪಿಯ ದೀರ್ಘಕಾಲದ ಅಭಿಯಾನದ ಹೊರತಾಗಿಯೂ ಮುಂಬೈನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಅಂಬರ್ನಾಥ್​​ನಲ್ಲಿ ಶಿವಸೇನೆಯ ಶಿಂಧೆ ಬಣವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದಾಗಿ ಬಿಜೆಪಿ-ಕಾಂಗ್ರೆಸ್ ಮೈತ್ರಿಯು ರಾಜಕೀಯ ವಲಯಗಳಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಅಲ್ಲಿನ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟಕ್ಕೆ ಅಂಬರ್ನಾಥ್ ವಿಕಾಸ್ ಅಘಾಡಿ ಎಂದು ಹೆಸರಿಸಲಾಗಿದೆ. ಈ ಬೆಳವಣಿಗೆಗಳು ಶಿವಸೇನೆಯ ಶಿಂಧೆ ಬಣದಲ್ಲಿ ಗಮನಾರ್ಹ ಅಸಮಾಧಾನವನ್ನು ಉಂಟುಮಾಡಿದೆ. ಬಿಜೆಪಿ-ಕಾಂಗ್ರೆಸ್ ಮೈತ್ರಿಕೂಟದ ನಂತರ ಶಿಂಧೆ ಬಣವು ಕೋಪಗೊಂಡಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ: JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ

ಶಿವಸೇನೆಯ ಶಿಂಧೆ ಬಣದ ಭದ್ರಕೋಟೆ ಎಂದು ಅಂಬರ್ನಾಥ್ ಪರಿಗಣಿಸಲಾಗಿದೆ. ಏಕನಾಥ್ ಶಿಂಧೆ ಅವರ ಮಗ ಶ್ರೀಕಾಂತ್ ಶಿಂಧೆ ಈ ಕ್ಷೇತ್ರದ ಸಂಸದರಾಗಿದ್ದಾರೆ. ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಯಲ್ಲಿ ಶಿಂಧೆ ಬಣವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಹುಮತಕ್ಕೆ ಸ್ವಲ್ಪ ಕಡಿಮೆ ಇತ್ತು. ಬಿಜೆಪಿಯ ಅಭ್ಯರ್ಥಿಯನ್ನು ಮೇಯರ್ ಆಗಿ ಆಯ್ಕೆ ಮಾಡಲಾಯಿತು. ಮುನ್ಸಿಪಲ್ ಕೌನ್ಸಿಲ್ ಸರ್ಕಾರ ರಚಿಸಲು ಬಿಜೆಪಿ ತಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಶಿಂಧೆ ಬಣ ನಿರೀಕ್ಷಿಸಿತ್ತು. ಆದರೆ, ಅನಿರೀಕ್ಷಿತ ತಿರುವಿನಲ್ಲಿ ಶಿಂಧೆ ಬಣವನ್ನು ಬೈಪಾಸ್ ಮಾಡಿ ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಜೊತೆ ಕೌನ್ಸಿಲ್ ಸರ್ಕಾರವನ್ನು ಬಿಜೆಪಿ ರಚಿಸಿತು. ಈ ನಿರ್ಧಾರವು ತೀಕ್ಷ್ಣವಾದ ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Wed, 7 January 26

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?