AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devendra Fadnavis: ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರೆಂಬಂತೆ ನಡೆಯುತ್ತಿದ್ದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಅವರೇ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ.

Devendra Fadnavis: ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ
ದೇವೇಂದ್ರ ಫಡ್ನವಿಸ್
ನಯನಾ ರಾಜೀವ್
|

Updated on:Dec 04, 2024 | 12:21 PM

Share

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರೆಂಬಂತೆ ನಡೆಯುತ್ತಿದ್ದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವಿಸ್(Devendra Fadnavis) ಆಯ್ಕೆಯಾಗಿದ್ದು, ಅವರೇ ಮುಂದಿನ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ. ನೀರು ಬತ್ತಿ ಹೋಗಿದೆ ಎಂದು ದಡದಲ್ಲಿ ಮನೆಕಟ್ಟಬೇಡಿ ನಾನು ಸಾಗರ ಮತ್ತೆ ಹಿಂದಿರುಗುತ್ತೇನೆ ಎಂದು 2019ರಲ್ಲಿ ಫಡ್ನವಿಸ್ ಈ ಸಾಲುಗಳನ್ನು ಹೇಳಿದ್ದರು.

ಇಂದು ದೇವೇಂದ್ರ ಫಡ್ನವೀಸ್ ಅವರು ಸಿಎಂ ಆಗಿ ಆಯ್ಕೆಯಾದಾಗ ಆ 5 ವರ್ಷಗಳ ಹಿಂದಿನ ಸಾಲು ಸಂಪೂರ್ಣವಾಗಿ ಸರಿ ಎಂದು ಸಾಬೀತಾಗಿದೆ. ದೇವೇಂದ್ರ ಫಡ್ನವೀಸ್ ಅವರು ಸಂಪೂರ್ಣ ಸ್ಥಾನಮಾನ ಮತ್ತು ಪ್ರಭಾವದೊಂದಿಗೆ ಮಹಾರಾಷ್ಟ್ರ ರಾಜಕೀಯಕ್ಕೆ ಮರಳಿದ್ದಾರೆ.

ಈಗ ಮಹಾರಾಷ್ಟ್ರದ ಅಧಿಕಾರ ಅವರ ಕೈಯಲ್ಲಿರುತ್ತದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ.ಫಡ್ನವೀಸ್ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ವನವಾಸ 2014 ರಲ್ಲಿ ಕೊನೆಗೊಂಡಿತ್ತು.

ಮತ್ತಷ್ಟು ಓದಿ: ಏಕನಾಥ್ ಶಿಂಧೆಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ದೇವೇಂದ್ರ ಫಡ್ನವಿಸ್

ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಅವರು. ದೇವೇಂದ್ರ ಫಡ್ನವೀಸ್ ಅವರ ರಾಜಕೀಯ ಪಯಣ ನೇರವಾಗಿ ಶಾಸಕ ಅಥವಾ ಸಿಎಂ ಹುದ್ದೆಯಿಂದ ಆರಂಭವಾಗಿಲ್ಲ. ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸಕ್ರಿಯ ರಾಜಕಾರಣಕ್ಕೆ ಬಂದವರು. ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಕ್ರಿಯ ಸದಸ್ಯರಾಗಿದ್ದಾರೆ. ಎಬಿವಿಪಿ ಸದಸ್ಯರಾಗಿದ್ದಾಗಲೇ ಪ್ರಥಮ ಬಾರಿಗೆ ನಗರಸಭೆಯಲ್ಲಿ ಕೌನ್ಸಿಲರ್ ಆದರು. ಕೇವಲ 5 ವರ್ಷಗಳ ನಂತರ, ಅವರು ನಾಗ್ಪುರದ ಮೇಯರ್ ಆದರು. ಮರಾಠಾ ಚಳವಳಿಯನ್ನು ಚೆನ್ನಾಗಿ ನಿಭಾಯಿಸಿದ್ದರು.

ತಮ್ಮ 44 ನೇ ವಯಸ್ಸಿನಲ್ಲಿ ಮಹಾರಾಷ್ಟ್ರದ ಎರಡನೇ ಅತಿ ಕಿರಿಯ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಹೊಂದಿದ್ದಾರೆ. ದೇವೇಂದ್ರ ಫಡ್ನವೀಸ್ 1999 ಮತ್ತು 2014 ರಲ್ಲಿ ನಾಗ್ಪುರ ಸೌತ್ ವೆಸ್ಟ್ ನಿಂದ ಶಾಸಕರಾಗಿದ್ದರು. ಇದಾದ ನಂತರ ಬಿಜೆಪಿ ಶಾಸಕರು ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದರು. 1960 ರಲ್ಲಿ ಮಹಾರಾಷ್ಟ್ರ ರಚನೆಯಾದ ನಂತರ, ರಾಜ್ಯದಲ್ಲಿ 17 ಮುಖ್ಯಮಂತ್ರಿಗಳಿದ್ದರು, ಆದರೆ ಅವರಲ್ಲಿ ಇಬ್ಬರು ಮಾತ್ರ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು.

ಅವರಲ್ಲಿ ದೇವೇಂದ್ರ ಫಡ್ನವಿಸ್ ಕೂಡ ಒಬ್ಬರು. ಈ ಮೊದಲು ವಸಂತರಾವ್ ನಾಯಕ್ ಮಾತ್ರ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಯಿತು. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಫಡ್ನವೀಸ್ ಅವರು ಸಂಘದೊಂದಿಗೆ ಸಕ್ರಿಯವಾಗಿ ಸಂಬಂಧ ಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:10 pm, Wed, 4 December 24

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ