AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟು ಅಮಾನ್ಯೀಕರಣ ಬಳಿಕ ಮಾಜಿ ಸಿಎಂ ಮಾಡಿದ್ದೇನು?: ದೇವೇಂದ್ರ ಫಡ್ನವೀಸ್​ ವಿರುದ್ಧ ಗಂಭೀರ ಆರೋಪ ಮಾಡಿದ ನವಾಬ್​ ಮಲ್ಲಿಕ್

ದೇವೇಂದ್ರ ಫಡ್ನವೀಸ್​ ಕ್ರಿಮಿನಲ್​ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ನವಾಬ್​ ಮಲ್ಲಿಕ್​, ದೇವೇಂದ್ರ ಫಡ್ನವೀಸ್​ ಮುಖ್ಯಮಂತ್ರಿಯಾಗಿದ್ದಾಗ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮುನ್ನಾ ಯಾದವ್​ನನ್ನು ಅಧ್ಯಕ್ಷನನ್ನಾಗಿ ನೇಮಕ ಮಾಡಿದರು ಎಂದು ಹೇಳಿದರು.

ನೋಟು ಅಮಾನ್ಯೀಕರಣ ಬಳಿಕ ಮಾಜಿ ಸಿಎಂ ಮಾಡಿದ್ದೇನು?: ದೇವೇಂದ್ರ ಫಡ್ನವೀಸ್​ ವಿರುದ್ಧ ಗಂಭೀರ ಆರೋಪ ಮಾಡಿದ ನವಾಬ್​ ಮಲ್ಲಿಕ್
ನವಾಬ್​ ಮಲ್ಲಿಕ್​​
TV9 Web
| Edited By: |

Updated on: Nov 10, 2021 | 1:52 PM

Share

ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್ (Nawab Malik) ​​ಗೆ ಭೂಗತ ಜಗತ್ತಿನೊಟ್ಟಿಗೆ ನಂಟಿದೆ. ಅವರು ಭೂಗತ ಪಾತಕಿಗಳೊಟ್ಟಿಗೆ ಆಸ್ತಿ ವ್ಯವಹಾರ ನಡೆಸಿದ್ದಾರೆ ಎಂದು ನಿನ್ನೆ ಸಾಕ್ಷಿ ಸಮೇತ ಬಹಿರಂಗ ಪಡಿಸಿದ್ದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಇಂದು ನವಾಬ್​ ಮಲ್ಲಿಕ್​ ತಿರುಗೇಟು ನೀಡಿದ್ದಾರೆ. ನಿನ್ನೆ ಫಡ್ನವೀಸ್​ ಸುದ್ದಿಗೋಷ್ಠಿಯ ಬೆನ್ನಲ್ಲೇ ಮಾತನಾಡಿದ್ದ ನವಾಬ್​ ಮಲ್ಲಿಕ್​, ನಾನು ದೇವೇಂದ್ರ ಫಡ್ನವೀಸ್(Devendra Fadnavis)​ಗೆ ಸಂಬಂಧಪಟ್ಟಂತೆ ಒಂದು ಹೈಡ್ರೋಜನ್​ ಬಾಂಬ್​ ಸ್ಫೋಟಿಸುತ್ತೇನೆ ಎಂದಿದ್ದರು. ಅದರಂತೆ ಇಂದು ಫಡ್ನವೀಸ್​​ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಆಪ್ತ ರಿಯಾಜ್​ ಭಾಟಿಯೊಂದಿಗೆ ಫಡ್ನವೀಸ್​ಗೆ ನಂಟಿದೆ ಎಂದು ಆರೋಪ ಮಾಡಿರುವ ನವಾಬ್​ ಮಲ್ಲಿಕ್​, ದಾವೂದ್​ ಜತೆಗೆ ನಂಟಿರುವ ರಿಯಾಜ್​ ಭಾಟಿ ನಕಲಿ ಪಾಸ್​ಪೋರ್ಟ್​ ಜತೆ 2015ರಲ್ಲಿ ಸಿಕ್ಕಿಬಿದ್ದಿದ್ದ. ಆದರೆ ಸಿಕ್ಕಿಬಿದ್ದ ಎರಡೇ ದಿನಕ್ಕೆ ಆತನನ್ನು ಬಿಡಲಾಯಿತು. ಅವನು ಅದಕ್ಕೂ ಮೊದಲು ಬಿಜೆಪಿಗೆ ಸಂಬಂಧಪಟ್ಟ ಹಲವು ಕಾರ್ಯಕ್ರಮದಲ್ಲಿ ಆತ ಕಾಣಿಸಿಕೊಂಡಿದ್ದ. ದೇವೇಂದ್ರ ಫಡ್ನವೀಸ್​ ಜತೆಗೂ ಆತ ಕಾಣಿಸಿಕೊಂಡಿದ್ದಾನೆ ಎಂದು ನವಾಬ್​ ಮಲ್ಲಿಕ್​ ಹೇಳಿದರು. ಇದೆಲ್ಲ ಆಗಿದ್ದು ಬಿಜೆಪಿ ಸರ್ಕಾರವಿದ್ದಾಗ ಎಂದೂ ಆರೋಪ ಮಾಡಿದರು. ನನಗೆ ಈಗ ನಾನು ಮಾಡುತ್ತಿರುವ ಆರೋಪದಲ್ಲಿ ಪ್ರಧಾನಿಯವರ ಹೆಸರನ್ನು ಎಳೆದು ತರಲು ಇಷ್ಟವಿಲ್ಲ. ಆದರೂ ಈ ರಿಯಾಜ್​ ಭಾಟಿ ಪ್ರಧಾನಿ ಮೋದಿ ಪಾಲ್ಗೊಂಡ ಸಮಾರಂಭದಲ್ಲೂ ಕಾಣಿಸಿಕೊಂಡಿದ್ದ. ಪ್ರಧಾನಿಯವರೊಂದಿಗೆ ಈತ ನಿಂತಿರುವ ಫೋಟೋಗಳು ಇವೆ ಎಂದೂ ನವಾಬ್​ ಮಲ್ಲಿಕ್​ ಹೇಳಿದರು. ಇನ್ನು ದೇವೇಂದ್ರ ಫಡ್ನವೀಸ್​ ಅವರು ಈ ರಿಯಾಜ್​ ಜತೆ ಇರುವ ಫೋಟೋಗಳನ್ನೂ ಕೂಡ ನವಾಬ್​ ಮಲ್ಲಿಕ್​ ಬಿಡುಗಡೆ ಮಾಡಿದ್ದಾರೆ.

ದೇವೇಂದ್ರ ಫಡ್ನವೀಸ್​ ಕ್ರಿಮಿನಲ್​ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ದೇವೇಂದ್ರ ಫಡ್ನವೀಸ್​ ಮುಖ್ಯಮಂತ್ರಿಯಾಗಿದ್ದಾಗ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮುನ್ನಾ ಯಾದವ್​ನನ್ನು ಅಧ್ಯಕ್ಷನನ್ನಾಗಿ ನೇಮಕ ಮಾಡಿದರು. ಆತ ನಾಗಪುರದ ನಟೋರಿಯಸ್​ ಕ್ರಿಮಿನಲ್​ ಎಂಬುದು ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಾಂಗ್ಲಾದೇಶೀಯರ ಅಕ್ರಮ ವಲಸೆಯಲ್ಲಿ ಆರೋಪಿಯಾಗಿದ್ದ ಹೈದರ್​ ಆಜಮ್​​ನನ್ನು ಮೌಲಾನಾ ಆಜಾದ್​ ಫೈನಾನ್ಸ್​ ಕಾರ್ಪೋರೇಶನ್​ಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ಖೋಟಾನೋಟು ಹಗರಣದ ಆರೋಪ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್​ ಮುಖ್ಯಮಂತ್ರಿಯಾಗಿದ್ದಾಗ ಖೋಟಾನೋಟು ದಂಧೆ ವ್ಯಾಪಕವಾಗಿ ನಡೆಯುತ್ತಿತ್ತು. ಆ ನಕಲಿ ಕರೆನ್ಸಿ ದಂಧೆಕೋರರಿಗೆ ಫಡ್ನವೀಸ್​ ರಕ್ಷಣೆ ಒದಗಿಸಿದ್ದರು. 2016ರ ನವೆಂಬರ್​ 8ರಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣವನ್ನು ಘೋಷಿಸಿದರು. ಅದಾದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಖೋಟಾನೋಟುಗಳನ್ನು ಜಪ್ತಿ ಮಾಡಲಾಯಿತು. ಆದರೆ ನೋಟು ಅಮಾನ್ಯೀಕರಣವಾಗಿ ಒಂದು ವರ್ಷದವರೆಗೂ ಮಹಾರಾಷ್ಟ್ರದಲ್ಲಿ ಒಂದೇ ಒಂದು ನಕಲಿ ಕರೆನ್ಸಿ ಪ್ರಕರಣ ದಾಖಲಾಗಲಿಲ್ಲ. 2017ರ ಅಕ್ಟೋಬರ್​ 8ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಮಹಾರಾಷ್ಟ್ರದಲ್ಲಿ ದಾಳಿ ನಡೆಸಿ ಸುಮಾರು 14.56 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿತು. ಆದರೆ ಆ ಕೇಸ್​ ಕೂಡ ನಿಲ್ಲಲಿಲ್ಲ. ಅದನ್ನು ಇದೇ ಫಡ್ನವೀಸ್​ ಮರೆಮಾಚಿದರು. 14 ಕೋಟಿಯ ಬದಲು ಕೇವಲ 8.80 ಲಕ್ಷ ರೂಪಾಯಿ ಮಾತ್ರ ಜಪ್ತಿಯಾಗಿದೆ ಎಂದು ಸಾರ್ವಜನಿಕವಾಗಿ ಹೇಳಿದರು. ಇದೊಂದು ದೊಡ್ಡ ಹಗರಣ ಎಂದು ನವಾಬ್​ ಮಲ್ಲಿಕ್​ ಆರೋಪಿಸಿದರು.

ಇದನ್ನೂ ಓದಿ: ‘ಪುನೀತ್​ ಅಂತಿಮ ದರ್ಶನ ಪಡೆದೆನೋ, ಇಲ್ಲವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ’; ಟೀಕಾಕಾರರಿಗೆ ರಾಧಿಕಾ ಪಂಡಿತ್​ ತಿರುಗೇಟು

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು