AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ. ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ […]

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 21, 2020 | 12:45 PM

Share

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ.

ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಂದ್ರ ಫಡ್ನವೀಸ್​ ಈ ಹೇಳಿಕೆ ನೀಡಿದ್ದಾರೆ.

ಕರಾಚಿ ಸ್ವೀಟ್ಸ್​ ಆ್ಯಂಡ್​ ಕರಾಚಿ ಬೇಕರಿ ಎಂಬ ಅಂಗಡಿ ಮುಂಬೈನಲ್ಲಿ ಕಳೆದ 60 ವರ್ಷಗಳಿಂದಲೂ ಇದೆ. ಆದರೆ ಕೆಲವು ದಿನಗಳ ಹಿಂದೆ ಶಿವಸೇನೆ ಕಾರ್ಯಕರ್ತ ನಿತಿನ್​ ನಂದಗಾಂವ್ಕರ್​ ಎಂಬುವರು ಹೆಸರು ಬದಲಿಸುವಂತೆ ಹೇಳಿದ್ದರು. ಆದರೆ ಶಿವಸೇನೆ, ನಿತಿನ್​ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಅದು ನಿತಿನ್​ ಅವರ ವೈಯಕ್ತಿಕ ಅಭಿಪ್ರಾಯ. ನಮಗೂ-ಅದಕ್ಕೂ ಸಂಬಂಧವಿಲ್ಲ ಎಂದಿತ್ತು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ