AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ. ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ […]

ಪಾಕಿಸ್ತಾನದ ಕರಾಚಿ ಭಾರತಕ್ಕೆ ಸೇರಬೇಕು ಎಂದ ದೇವೇಂದ್ರ ಫಡ್ನವೀಸ್​!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Nov 21, 2020 | 12:45 PM

Share

ಮುಂಬೈ:ಅತ್ತ ಪಾಕಿಸ್ತಾನವು ಕಾಶ್ಮೀರವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಳ್ಳಲು ಹುನ್ನಾರ ಮಾಡುತ್ತಿದ್ದರೆ ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರಾಚಿಯನ್ನೂ ಭಾರತಕ್ಕೆ ಸೇರಿಸುವ ಮಾತನಾಡಿದ್ದಾರೆ.

ನಾವು ಅಖಂಡ ಭಾರತ ನಿರ್ಮಾಣದಲ್ಲಿ ನಂಬಿಕೆ ಇಟ್ಟಿದ್ದೇವೆ. ಮುಂದೊಂದು ದಿನ ಕರಾಚಿಯೂ ಭಾರತದ ಒಂದು ಭಾಗವಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಇತ್ತೀಚೆಗೆ ಶಿವಸೇನೆ ಕಾರ್ಯಕರ್ತರೊಬ್ಬರು ಸ್ವೀಟ್​ ಅಂಗಡಿಯೊಂದರ ಮಾಲೀಕನ ಬಳಿ, ನಿಮ್ಮ ಶಾಪ್​​ಗೆ ಇಟ್ಟ ಕರಾಚಿ ಸ್ವೀಟ್ಸ್​ ಎಂಬ ಹೆಸರಿನಲ್ಲಿ ಕರಾಚಿ ಎಂಬ ಶಬ್ದವನ್ನು ತೆಗೆಯಿರಿ ಎಂದು ಹೇಳಿದ್ದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಂದ್ರ ಫಡ್ನವೀಸ್​ ಈ ಹೇಳಿಕೆ ನೀಡಿದ್ದಾರೆ.

ಕರಾಚಿ ಸ್ವೀಟ್ಸ್​ ಆ್ಯಂಡ್​ ಕರಾಚಿ ಬೇಕರಿ ಎಂಬ ಅಂಗಡಿ ಮುಂಬೈನಲ್ಲಿ ಕಳೆದ 60 ವರ್ಷಗಳಿಂದಲೂ ಇದೆ. ಆದರೆ ಕೆಲವು ದಿನಗಳ ಹಿಂದೆ ಶಿವಸೇನೆ ಕಾರ್ಯಕರ್ತ ನಿತಿನ್​ ನಂದಗಾಂವ್ಕರ್​ ಎಂಬುವರು ಹೆಸರು ಬದಲಿಸುವಂತೆ ಹೇಳಿದ್ದರು. ಆದರೆ ಶಿವಸೇನೆ, ನಿತಿನ್​ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು. ಅದು ನಿತಿನ್​ ಅವರ ವೈಯಕ್ತಿಕ ಅಭಿಪ್ರಾಯ. ನಮಗೂ-ಅದಕ್ಕೂ ಸಂಬಂಧವಿಲ್ಲ ಎಂದಿತ್ತು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್