AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಪಾಕಿಸ್ತಾನವಲ್ಲ ಎಂದ ದೇವೇಂದ್ರ ಫಡ್ನವಿಸ್​

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನೆರೆಯ ರಾಜ್ಯ ಪಾಕಿಸ್ತಾನವಲ್ಲ ಮತ್ತು ಕೆಲವು ಯೋಜನೆಗಳು ಇತರ ರಾಜ್ಯಗಳಿಗೆ ಹೋಗುವುದು ಸಹಜ ಎಂದು ಹೇಳಿದ್ದಾರೆ. ನಾವು "ಸ್ಪರ್ಧಾತ್ಮಕ ಫೆಡರಲಿಸಂ" ಯುಗದಲ್ಲಿದ್ದೇವೆ ಮತ್ತು ಹೂಡಿಕೆಗಾಗಿ ಸ್ಪರ್ಧಿಸುತ್ತಿರುವ ರಾಜ್ಯಗಳ ಸಂಖ್ಯೆಯು ಕೇವಲ ಎರಡು-ಮೂರು ಮೊದಲು 10 ಕ್ಕೆ ಏರಿದೆ, ಇದು ಸ್ವಾಗತ ಎಂದರು.

ಗುಜರಾತ್ ಪಾಕಿಸ್ತಾನವಲ್ಲ ಎಂದ ದೇವೇಂದ್ರ ಫಡ್ನವಿಸ್​
ದೇವೇಂದ್ರ ಫಡ್ನವಿಸ್Image Credit source: LNC Bharat
ನಯನಾ ರಾಜೀವ್
|

Updated on: Mar 07, 2024 | 2:30 PM

Share

ಮಹಾರಾಷ್ಟ್ರದಿಂದ ಗುಜರಾತ್‌ಗೆ ಕೆಲವು ಯೋಜನೆಗಳನ್ನು ಸ್ಥಳಾಂತರಿಸುವ ಕುರಿತು ನಡೆಯುತ್ತಿರುವ ಟೀಕೆಗಳ ನಡುವೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಅವರು ನೆರೆಯ ಗುಜರಾತ್ ಪಾಕಿಸ್ತಾನವಲ್ಲ ಮತ್ತು ಕೆಲವು ಯೋಜನೆಗಳು ಇತರ ರಾಜ್ಯಗಳಿಗೆ ಹೋಗುವುದು ಸಹಜ ಎಂದು ಹೇಳಿದ್ದಾರೆ. ಇಂಡಿಯಾ ಗ್ಲೋಬಲ್ ಫೋರಂ ನಲ್ಲಿ ಮಾಡಿದ ಭಾಷಣದಲ್ಲಿ ಫಡ್ನವಿಸ್, ನಾವು ಸ್ಪರ್ಧಾತ್ಮಕ ಫೆಡರಲಿಸಂ ಯುಗದಲ್ಲಿದ್ದೇವೆ ಮತ್ತು ಹೂಡಿಕೆಗಾಗಿ ಪೈಪೋಟಿ ನಡೆಸುತ್ತಿರುವ ರಾಜ್ಯಗಳ ಸಂಖ್ಯೆ ಕೇವಲ ಎರಡು-ಮೂರರಿಂದ 10 ಕ್ಕೆ ಏರಿದೆ, ಇದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.

ಒಂದು ಕಂಪನಿಯು ಗುಜರಾತ್, ಕರ್ನಾಟಕ ಅಥವಾ ದೆಹಲಿಗೆ ಹೋಗುತ್ತಿದ್ದರೆ ಅದು ಪಾಕಿಸ್ತಾನವಲ್ಲ. ಇದು ನಮ್ಮ ದೇಶ. ಮಹಾರಾಷ್ಟ್ರವು ಎಲ್ಲರೂ ರಾಜ್ಯಕ್ಕೆ ಬರಬೇಕೆಂದು ನಿಜವಾಗಿಯೂ ಬಯಸುತ್ತದೆ ಎಂದರು. ಗುಜರಾತ್‌ಗೆ ಸೆಮಿಕಂಡಕ್ಟರ್‌ಗಳಂತಹ ಬೃಹತ್ ಹೂಡಿಕೆ ಯೋಜನೆಗಳನ್ನು ಮಹಾರಾಷ್ಟ್ರ ಸರ್ಕಾರ ಸ್ಥಳಾಂತರಿಸುತ್ತಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಆರ್ಥಿಕ ಯಶಸ್ಸನ್ನು ಸಾಧಿಸಲು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ನೇತೃತ್ವದಲ್ಲಿ ಮಹಾರಾಷ್ಟ್ರ ಸಮಿತಿಯನ್ನು ರಚಿಸಿದೆ ಎಂದು ಫಡ್ನವಿಸ್ ಹೇಳಿದರು. 2030ರ ವೇಳೆಗೆ ರಾಜ್ಯದ ಒಟ್ಟು ಆಂತರಿಕ ಉತ್ಪನ್ನ ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತಷ್ಟು ಓದಿ: Maharashtra Cabinet Expansion: ಮಹಾರಾಷ್ಟ್ರದಲ್ಲಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ, ತಡರಾತ್ರಿ ಶಿಂದೆ, ಫಡ್ನವಿಸ್ ನಡುವೆ ಮಹತ್ವದ ಚರ್ಚೆ

ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ರಾಜ್ಯದ 48 ರಲ್ಲಿ 42 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದು, ಅದು 45 ಕ್ಕೆ ಏರಬಹುದು ಎಂದು ಉಪಮುಖ್ಯಮಂತ್ರಿ ಹೇಳಿದರು.

2014-19ರ ಅವಧಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗ ಮುಂಬೈ ಮಹಾನಗರ ಪ್ರದೇಶದಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು USD 30 ಶತಕೋಟಿ ಮೌಲ್ಯದ ಯೋಜನೆಗಳನ್ನು ಪ್ರಾರಂಭಿಸಲಾಗಿತ್ತು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!