AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ

Amruta Fadnavis ಮಹಾತ್ಮ ಗಾಂಧಿ ರಾಷ್ಟ್ರಪಿತ ಆದರೆ ಮೋದಿ ಜೀ ನವ ಭಾರತದ ಪಿತ. ನಮ್ಮ ದೇಶಕ್ಕೆ ಎರಡು ರಾಷ್ಟ್ರಪಿತ ಇದ್ದಾರೆ . ಒಂದು ಈ ಯುಗದ್ದು ಇನ್ನೊಂದು ಆ ಯುಗದ್ದು ಎಂದು ಅಮೃತಾ ಮರಾಠಿಯಲ್ಲಿ ಹೇಳಿದ್ದಾರೆ.

ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ
ಅಮೃತಾ ಫಡ್ನವೀಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 21, 2022 | 8:55 PM

Share

ನಾಗ್ಪುರ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವೀಸ್ (Amruta Fadnavis) ಅವರು ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) “ರಾಷ್ಟ್ರಪಿತ” ಎಂದಿದ್ದಾರೆ. ಈ ವಾರ ನಾಗ್ಪುರದಲ್ಲಿ ಬರಹಗಾರರ ಸಂಘವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ನಡೆದ ಸಂದರ್ಶನದಲ್ಲಿ, ಪ್ರಧಾನಿ ಮೋದಿಯನ್ನು “ರಾಷ್ಟ್ರಪಿತ” ಎಂದು ಹೇಳಿದ ಅವರಲ್ಲಿ ಹಾಗಾದರೆ ಮಹಾತ್ಮ ಗಾಂಧಿ ಯಾರು ಎಂದು ಕೇಳಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರಪಿತ ಆದರೆ ಮೋದಿ ಜೀ ನವ ಭಾರತದ ಪಿತ. ನಮ್ಮ ದೇಶಕ್ಕೆ ಎರಡು ರಾಷ್ಟ್ರಪಿತ ಇದ್ದಾರೆ . ಒಂದು ಈ ಯುಗದ್ದು ಇನ್ನೊಂದು ಆ ಯುಗದ್ದು ಎಂದು ಅಮೃತಾ ಮರಾಠಿಯಲ್ಲಿ ಹೇಳಿದ್ದಾರೆ. ಅಂದಹಾಗೆ ಅಮೃತಾ ಅವರು ನರೇಂದ್ರ ಮೋದಿಯವರನ್ನು ಹೀಗೆ ಬಣ್ಣಿಸಿದ್ದು ಇದೇ ಮೊದಲಲ್ಲ. 2019 ರಲ್ಲಿ ಅಮೃತಾ ಅವರು ನಮ್ಮ ರಾಷ್ಟ್ರಪಿತ  ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು – ಅವರು ಸಮಾಜದ ಒಳಿತಿಗಾಗಿ ಪಟ್ಟುಬಿಡದೆ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತಾರೆ ಎಂದು ಮೋದಿಗೆ ಶುಭಾಶಯ ಕೋರಿದ್ದರು.

ತನ್ನ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ಮತ್ತು ಸಾರ್ವಜನಿಕ ಹೇಳಿಕೆಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುವ ಅಮೃತಾ ಫಡ್ನವಿಸ್ ಈ ವರ್ಷದ ಆರಂಭದಲ್ಲಿ ಶಿವಸೇನಾ ದಂಗೆಯ ನಡುವೆ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧವೂ ಟೀಕಾ ಪ್ರಹಾರ ಮಾಡಿದ್ದರು. “ಏಕ್ ‘ಥಾ’ ಕಪಟಿ ರಾಜಾ… (ಒಬ್ಬ ದುಷ್ಟ ರಾಜನಿದ್ದ)” ಎಂದು ಟ್ವೀಟ್‌ ಮಾಡಿದ್ದ ಅವರು ನಂತರ ಅದನ್ನು ಅಳಿಸಿ ಹಾಕಿದ್ದರು. ಆಕೆಯ “ರಾಜ”ನ ಉಲ್ಲೇಖ ಮತ್ತು ‘ಥಾ’ (‘ಆಗಿದ್ದರು’) ಎಂಬುದು ಠಾಕ್ರೆಯನ್ನು ಉದ್ದೇಶಿಸಿಯೇ ಆಗಿತ್ತು ಎಂಬುದು ಚರ್ಚೆಯಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ