AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ

Amruta Fadnavis ಮಹಾತ್ಮ ಗಾಂಧಿ ರಾಷ್ಟ್ರಪಿತ ಆದರೆ ಮೋದಿ ಜೀ ನವ ಭಾರತದ ಪಿತ. ನಮ್ಮ ದೇಶಕ್ಕೆ ಎರಡು ರಾಷ್ಟ್ರಪಿತ ಇದ್ದಾರೆ . ಒಂದು ಈ ಯುಗದ್ದು ಇನ್ನೊಂದು ಆ ಯುಗದ್ದು ಎಂದು ಅಮೃತಾ ಮರಾಠಿಯಲ್ಲಿ ಹೇಳಿದ್ದಾರೆ.

ದೇಶಕ್ಕೆ ಇಬ್ಬರು ರಾಷ್ಟ್ರಪಿತ, ಮೋದಿ ಜೀ ನವ ಭಾರತದ ರಾಷ್ಟ್ರಪಿತ ಎಂದ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ
ಅಮೃತಾ ಫಡ್ನವೀಸ್
TV9 Web
| Edited By: |

Updated on: Dec 21, 2022 | 8:55 PM

Share

ನಾಗ್ಪುರ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವೀಸ್ (Amruta Fadnavis) ಅವರು ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) “ರಾಷ್ಟ್ರಪಿತ” ಎಂದಿದ್ದಾರೆ. ಈ ವಾರ ನಾಗ್ಪುರದಲ್ಲಿ ಬರಹಗಾರರ ಸಂಘವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ನಡೆದ ಸಂದರ್ಶನದಲ್ಲಿ, ಪ್ರಧಾನಿ ಮೋದಿಯನ್ನು “ರಾಷ್ಟ್ರಪಿತ” ಎಂದು ಹೇಳಿದ ಅವರಲ್ಲಿ ಹಾಗಾದರೆ ಮಹಾತ್ಮ ಗಾಂಧಿ ಯಾರು ಎಂದು ಕೇಳಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರಪಿತ ಆದರೆ ಮೋದಿ ಜೀ ನವ ಭಾರತದ ಪಿತ. ನಮ್ಮ ದೇಶಕ್ಕೆ ಎರಡು ರಾಷ್ಟ್ರಪಿತ ಇದ್ದಾರೆ . ಒಂದು ಈ ಯುಗದ್ದು ಇನ್ನೊಂದು ಆ ಯುಗದ್ದು ಎಂದು ಅಮೃತಾ ಮರಾಠಿಯಲ್ಲಿ ಹೇಳಿದ್ದಾರೆ. ಅಂದಹಾಗೆ ಅಮೃತಾ ಅವರು ನರೇಂದ್ರ ಮೋದಿಯವರನ್ನು ಹೀಗೆ ಬಣ್ಣಿಸಿದ್ದು ಇದೇ ಮೊದಲಲ್ಲ. 2019 ರಲ್ಲಿ ಅಮೃತಾ ಅವರು ನಮ್ಮ ರಾಷ್ಟ್ರಪಿತ  ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು – ಅವರು ಸಮಾಜದ ಒಳಿತಿಗಾಗಿ ಪಟ್ಟುಬಿಡದೆ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತಾರೆ ಎಂದು ಮೋದಿಗೆ ಶುಭಾಶಯ ಕೋರಿದ್ದರು.

ತನ್ನ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ಮತ್ತು ಸಾರ್ವಜನಿಕ ಹೇಳಿಕೆಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುವ ಅಮೃತಾ ಫಡ್ನವಿಸ್ ಈ ವರ್ಷದ ಆರಂಭದಲ್ಲಿ ಶಿವಸೇನಾ ದಂಗೆಯ ನಡುವೆ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧವೂ ಟೀಕಾ ಪ್ರಹಾರ ಮಾಡಿದ್ದರು. “ಏಕ್ ‘ಥಾ’ ಕಪಟಿ ರಾಜಾ… (ಒಬ್ಬ ದುಷ್ಟ ರಾಜನಿದ್ದ)” ಎಂದು ಟ್ವೀಟ್‌ ಮಾಡಿದ್ದ ಅವರು ನಂತರ ಅದನ್ನು ಅಳಿಸಿ ಹಾಕಿದ್ದರು. ಆಕೆಯ “ರಾಜ”ನ ಉಲ್ಲೇಖ ಮತ್ತು ‘ಥಾ’ (‘ಆಗಿದ್ದರು’) ಎಂಬುದು ಠಾಕ್ರೆಯನ್ನು ಉದ್ದೇಶಿಸಿಯೇ ಆಗಿತ್ತು ಎಂಬುದು ಚರ್ಚೆಯಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು