AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ವರ್​ ಯಾತ್ರೆಗೆ ಹೊರಟ ವ್ಯಕ್ತಿಯನ್ನು ತಡೆದು ಬೆಂಕಿ ಹಚ್ಚಿದ ಪತ್ನಿಯ ಪ್ರಿಯಕರ

ಕನ್ವರ್ ಯಾತ್ರೆಗೆ ಹೊರಟ ವ್ಯಕ್ತಿಯನ್ನು ತಡೆದು ನಿಲ್ಲಿಸಿ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​ನಲ್ಲಿ ನಡೆದಿದೆ. ಐದು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ವ್ಯಕ್ತಿ ಸಾವನ್ನಪ್ಪಿದ್ದಾರೆ.   ಮೃತ ವ್ಯಕ್ತಿ ಜಿಲ್ಲೆಯ ರಾಮಲಾ ಪೊಲೀಸ್ ಠಾಣೆ ಪ್ರದೇಶದ ಕಂದಾರ ಗ್ರಾಮದ ನಿವಾಸಿ. ಮೃತನನ್ನು ಸನ್ನಿ ಎಂದು ಗುರುತಿಸಲಾಗಿದೆ. ಮೃತ ಸನ್ನಿ ಅವರ ಪತ್ನಿ ಅಂಕಿತಾ ಅಯ್ಯೂಬ್ ಎಂಬ ಯುವಕನೊಂದಿಗೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಅಂಕಿತಾ ಅವರು ಫೋನ್‌ನಲ್ಲಿ ಅಪರಿಚಿತರೊಂದಿಗೆ ಮಾತನಾಡುವಾಗ ಸನ್ನಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು.

ಕನ್ವರ್​ ಯಾತ್ರೆಗೆ ಹೊರಟ ವ್ಯಕ್ತಿಯನ್ನು ತಡೆದು ಬೆಂಕಿ ಹಚ್ಚಿದ ಪತ್ನಿಯ ಪ್ರಿಯಕರ
ಸನ್ನಿ
ನಯನಾ ರಾಜೀವ್
|

Updated on: Jul 30, 2025 | 3:11 PM

Share
ಬಾಗ್​​ಪತ್, ಜುಲೈ 30: ಕನ್ವರ್ ಯಾತ್ರೆಗೆ ಹೊರಟ ವ್ಯಕ್ತಿಯನ್ನು ತಡೆದು ನಿಲ್ಲಿಸಿ ಬೆಂಕಿ(Fire) ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್​ನಲ್ಲಿ ನಡೆದಿದೆ. ಐದು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ವ್ಯಕ್ತಿ ಸಾವನ್ನಪ್ಪಿದ್ದಾರೆ.   ಮೃತ ವ್ಯಕ್ತಿ ಜಿಲ್ಲೆಯ ರಾಮಲಾ ಪೊಲೀಸ್ ಠಾಣೆ ಪ್ರದೇಶದ ಕಂದಾರ ಗ್ರಾಮದ ನಿವಾಸಿ  ಸನ್ನಿ ಎಂದು ಗುರುತಿಸಲಾಗಿದೆ.
ಮೃತ ಸನ್ನಿ ಅವರ ಪತ್ನಿ ಅಂಕಿತಾ ಅಯ್ಯೂಬ್ ಎಂಬ ಯುವಕನೊಂದಿಗೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಅಂಕಿತಾ ಅವರು ಫೋನ್‌ನಲ್ಲಿ ಅಪರಿಚಿತರೊಂದಿಗೆ ಮಾತನಾಡುವಾಗ ಸನ್ನಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಆಗ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.
ಇದಾದ ಬಳಿಕ ಸನ್ನಿ ಪತ್ನಿ ಅಂಕಿತಾ ತನ್ನ ತಾಯಿಯ ಮನೆಗೆ ಹೋಗಿದ್ದಳು. ಮತ್ತೊಂದೆಡೆ ಸನ್ನಿ ಕುಟುಂಬದವರ ಪ್ರಕಾರ, ಜುಲೈ 22ರಂದು ಸನ್ನಿ ಕನ್ವರ್​ ಯಾತ್ರೆಗೆ ಹೊರಟಿದ್ದರು. ದೋಘಾಟ್ ಪ್ರದೇಶದ ಕನ್ವರ್ ಮಾರ್ಗವನ್ನು ತಲುಪಿದಾಗ ಅವನ ಅತ್ತೆ-ಮಾವನ ಕಡೆಯ ಜನರು ಮತ್ತು ಹೆಂಡತಿಯ ಪ್ರಿಯಕರ ಅಯ್ಯೂಬ್ ಅಲ್ಲಿಗೆ ಬಂದು ತನ್ನೊಂದಿಗೆ ಕರೆದುಕೊಂಡು ಹೋದರು.
ನಂತರ ಅಯ್ಯೂಬ್ ತನ್ನ ಹೆಂಡತಿ ಮತ್ತು ಅತ್ತೆಯ ಮುಂದೆ ಸನ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಯಾರೋ ಈ ಬಗ್ಗೆ ಸನ್ನಿ ಕುಟುಂಬಕ್ಕೆ ಮಾಹಿತಿ ನೀಡಿದರು, ನಂತರ ಕುಟುಂಬವು ಸ್ಥಳಕ್ಕೆ ತಲುಪಿ ಸನ್ನಿಯನ್ನು ಆಸ್ಪತ್ರೆಗೆ ಕರೆದೊಯ್ದರು. ಉನ್ನತ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸನ್ನಿಯ ದೇಹ ಶೇ. 80 ರಷ್ಟು ಸುಟ್ಟು ಹೋಗಿತ್ತು. ಐದು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ನಂತರ, ಸನ್ನಿ ಕೊನೆಯುಸಿರೆಳೆದಿದ್ದಾರೆ. ಕುಟುಂಬವು ಸನ್ನಿಯ ಶವದೊಂದಿಗೆ ಪೊಲೀಸ್ ಠಾಣೆಗೆ ತಲುಪಿ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು. ನಂತರ ಅವರು ಶವದೊಂದಿಗೆ ಪೊಲೀಸ್ ಠಾಣೆಯಲ್ಲಿ ಕುಳಿತು ಧರಣಿ ನಡೆಸಿದರು.
ಇದರ ನಂತರ, ಪೊಲೀಸ್ ಅಧಿಕಾರಿಯ ಭರವಸೆಗೆ ಕುಟುಂಬವು ಒಪ್ಪಿಕೊಂಡಿತು. ಪ್ರಸ್ತುತ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಡೀ ಘಟನೆಯ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!