AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ರಜಾ ಮೂಡಿನಲ್ಲಿರುವ ಭಕ್ತರು ತಿರುಪತಿಗೆ ಲಗ್ಗೆಯಿಡುತ್ತಿದ್ದಾರೆ, ದರ್ಶನಕ್ಕೆ ಕಾಯಬೇಕು ಎರಡು ದಿನ, ಸಂಯಮ ಪಾಲಿಸುವಂತೆ ಟಿಟಿಡಿ ಮನವಿ

ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ವೆಂಕಟರಮಣಸ್ವಾಮಿ ಭಕ್ತರು ವಿಶೇಷವಾಗಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಆದರೆ ಸದ್ಯ ತಿಮ್ಮಪ್ಪನ ದರ್ಶನಕ್ಕೆ 48 ಗಂಟೆ ಕಾಲಾವಧಿ ಬೇಕಾಗಿದೆ.

TTD: ರಜಾ ಮೂಡಿನಲ್ಲಿರುವ ಭಕ್ತರು ತಿರುಪತಿಗೆ ಲಗ್ಗೆಯಿಡುತ್ತಿದ್ದಾರೆ, ದರ್ಶನಕ್ಕೆ ಕಾಯಬೇಕು ಎರಡು ದಿನ, ಸಂಯಮ ಪಾಲಿಸುವಂತೆ ಟಿಟಿಡಿ ಮನವಿ
ತಿರುಪತಿಗೆ ಲಗ್ಗೆಯಿಡುತ್ತಿರುವ ಭಕ್ತರು
ಸಾಧು ಶ್ರೀನಾಥ್​
|

Updated on: Apr 08, 2023 | 10:29 AM

Share

ತಿರುಮಲಕ್ಕೆ ಭಕ್ತರ ದಂಡೇ (Devotees Rush) ಹರಿದು ಬರುತ್ತಿದೆ. ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಲು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ-TTD -Tirumala Tirupati Devasthanams) ಕೋರಿದೆ. ತಿರುಮಲ ಶ್ರೀವಾರಿ ದರ್ಶನಕ್ಕೆ ಭಕ್ತಕೋಟಿ ಸಾಲುಗಟ್ಟಿ ನಿಂತಿದೆ (Sarva Darshan Queue). ಸತತ ರಜೆ ಇರುವ ಕಾರಣ ಭಕ್ತರ ದಂಡು ತಿರುಮಲದತ್ತ ನುಗ್ಗಿಬರುತ್ತಿದೆ. ಅದರಲ್ಲಿಯೂ… ಉದ್ಯೋಗಿಗಳಿಗೆ ಸತತ ರಜೆ ಇರುವುದರಿಂದ ತಿರುಮಲ ತಿಮ್ಮಪ್ಪನ (Tirupati) ಭಕ್ತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಜನರು ತಮ್ಮ ಪ್ರಾರ್ಥನೆಯನ್ನು ಸಲ್ಲಿಸಲು ದೂರದ ಊರುಗಳಿಂದ ತಿರುಮಲಕ್ಕೆ ಬರುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಸಾರ್ವಜನಿಕ ದರ್ಶನದ ಕ್ಯೂ ಲೈನ್ ​​ಗೋ ಗರ್ಭ ಅಣೆಕಟ್ಟು ದಾಟಿ ಸಾಗಿದೆ.

ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ವೆಂಕಟರಮಣಸ್ವಾಮಿ ಭಕ್ತರು ವಿಶೇಷವಾಗಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ತಿಮ್ಮಪ್ಪನ ದರ್ಶನಕ್ಕೆ 48 ಗಂಟೆ ಕಾಲಾವಧಿ ಬೇಕಾಗಿದೆ. ಮನೆಯಲ್ಲಿ ಅಪ್ಪ ಅಮ್ಮನಿಗೆ ಸತತ ರಜಾ ದಿನಗಳು, ಹಾಗೂ ಮಕ್ಕಳಿಗೆ ಪರೀಕ್ಷೆಗಳು ಮುಗಿದು ರಜಾ ಕಾಲ ಬಂದಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಇದರೊಂದಿಗೆ ತಿರುಮಲ ಬೆಟ್ಟದಲ್ಲಿ ಭಕ್ತ ಸಾಗರ ಪ್ರವಾಹೋಪಾದಿಯಲ್ಲಿದೆ.

ಇದನ್ನೂ ಓದಿ:  TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ

ಇದೇ ವೇಳೆ ಸರ್ವ ದರ್ಶನ ಸರತಿ ಸಾಲಿನಲ್ಲಿ ಟೋಕನ್ ರಹಿತ ಭಕ್ತರು ಸಂಯಮದಿಂದ ಇರುವಂತೆ ಟಿಟಿಡಿ ಅಧಿಕಾರಿಗಳು ಪದೇ ಪದೇ ಮನವಿ ಮಾಡುತ್ತಿದ್ದಾರೆ. ತಿರುಮಲದಲ್ಲಿ ಭಕ್ತರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಿರುಮಲ ಯಾತ್ರೆಯನ್ನು ಯೋಜಿಸುವಂತೆ ಟಿಟಿಡಿ ಅಧಿಕಾರಿಗಳು ಭಕ್ತರಿಗೆ ಮನವಿ ಮಾಡಿದ್ದಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಕೊನೆಯ 2 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮ್ಯಾಟ್ ಮಿಲ್ನ್ಸ್​
ಕೊನೆಯ 2 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮ್ಯಾಟ್ ಮಿಲ್ನ್ಸ್​
ವಿರೋಧಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಗೊಟ್ಟಾರೆಯೇ?
ವಿರೋಧಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಗೊಟ್ಟಾರೆಯೇ?