AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ
ಕೋಲ್ಕತ್ತ ಏರ್​ಪೋರ್ಟ್​
Follow us
TV9 Web
| Updated By: Lakshmi Hegde

Updated on: Jan 24, 2022 | 7:51 AM

ಕೋಲ್ಕತ್ತದ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (NSCBIA)ಕ್ಕೆ ಭಾರತದ ವಾಯುಯಾನ ನಿಯಂತ್ರಣ ಸಂಸ್ಥೆಯಾಗಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂಪಾಯಿಗಳಷ್ಟು ದಂಡ ವಿಧಿಸಿದೆ. ವಿಮಾನ ನಿಲ್ದಾಣದಲ್ಲಿ ರನ್​ವೇ ನಿರ್ವಹಣೆಯನ್ನು ಸೂಕ್ತವಾಗಿ ಮಾಡದೆ, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ಈ ದಂಡ ವಿಧಿಸಿದ್ದಾಗಿ ಹೇಳಲಾಗಿದೆ. ಕೆಲವೇ ತಿಂಗಳುಗಳ ಹಿಂದೆ ಡಿಜಿಸಿಎ, ವಿಮಾನ ನಿಲ್ದಾಣಗಳಲ್ಲಿನ ಸುರಕ್ಷತೆ ನಿಯಮ ಪಾಲನೆ ಕುರಿತು ಅಡಿಟಿಂಗ್​ ನಡೆಸಿತ್ತು. ಆಗ ಈ ನೇತಾಜಿ ಸುಭಾಷ್​ ಚಂದ್ರ ಬೋಸ್ ಏರ್​ಪೋರ್ಟ್​​ನಲ್ಲಿ ರನ್​ವೇ ನಿರ್ವಹಣೆ ಸರಿಯಾಗಿ ಮಾಡದೆ, ಗಂಭೀರ ಪ್ರಮಾಣದಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡುಬಂತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ. ಕೋಲ್ಕತ್ತ ಏರ್​ಪೋರ್ಟ್​ಗೆ ಇದಕ್ಕೆ ಸಂಬಂಧಪಟ್ಟಂತೆ ಶೋಕಾಸ್ ನೋಟಿಸ್​ ಕೂಡ ನೀಡಲಾಗಿತ್ತು. ಕೋಲ್ಕತ್ತ ಏರ್​ಪೋರ್ಟ್​ನ ರನ್​ ವೇ ನಿರ್ವಹಣೆ ಮಾರ್ಗಸೂಚಿಯಂತೆ ಆಗಿಲ್ಲ. ಇಲ್ಲಿ ಲೈಟ್​​ಗನ್ನು ಸರಿಯಾಗಿ ಅಳವಡಿಸಿಲ್ಲ ಎಂದು ಡಿಸಿಜಿಎ ಹೇಳಿದೆ.  ಈ ಬಗ್ಗೆ ಭಾರತೀಯ ಏರ್​ಪೋರ್ಟ್​ ಪ್ರಾಧಿಕಾರಿ ಇದುವರೆಗೂ ಏನೂ ಪ್ರತಿಕ್ರಿಯೆ ನೀಡಿಲ್ಲ.ಆದರೆ ಪ್ರಸ್ತುತ ವಿಷಯವನ್ನು ಗಮನಿಸಲು ಆಂತರಿಕ ಸಮಿತಿಯೊಂದನ್ನು ರಚಿಸಿದೆ ಎಂದು ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ

VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ