AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ
ಕೋಲ್ಕತ್ತ ಏರ್​ಪೋರ್ಟ್​
TV9 Web
| Edited By: |

Updated on: Jan 24, 2022 | 7:51 AM

Share

ಕೋಲ್ಕತ್ತದ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (NSCBIA)ಕ್ಕೆ ಭಾರತದ ವಾಯುಯಾನ ನಿಯಂತ್ರಣ ಸಂಸ್ಥೆಯಾಗಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂಪಾಯಿಗಳಷ್ಟು ದಂಡ ವಿಧಿಸಿದೆ. ವಿಮಾನ ನಿಲ್ದಾಣದಲ್ಲಿ ರನ್​ವೇ ನಿರ್ವಹಣೆಯನ್ನು ಸೂಕ್ತವಾಗಿ ಮಾಡದೆ, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ಈ ದಂಡ ವಿಧಿಸಿದ್ದಾಗಿ ಹೇಳಲಾಗಿದೆ. ಕೆಲವೇ ತಿಂಗಳುಗಳ ಹಿಂದೆ ಡಿಜಿಸಿಎ, ವಿಮಾನ ನಿಲ್ದಾಣಗಳಲ್ಲಿನ ಸುರಕ್ಷತೆ ನಿಯಮ ಪಾಲನೆ ಕುರಿತು ಅಡಿಟಿಂಗ್​ ನಡೆಸಿತ್ತು. ಆಗ ಈ ನೇತಾಜಿ ಸುಭಾಷ್​ ಚಂದ್ರ ಬೋಸ್ ಏರ್​ಪೋರ್ಟ್​​ನಲ್ಲಿ ರನ್​ವೇ ನಿರ್ವಹಣೆ ಸರಿಯಾಗಿ ಮಾಡದೆ, ಗಂಭೀರ ಪ್ರಮಾಣದಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡುಬಂತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ. ಕೋಲ್ಕತ್ತ ಏರ್​ಪೋರ್ಟ್​ಗೆ ಇದಕ್ಕೆ ಸಂಬಂಧಪಟ್ಟಂತೆ ಶೋಕಾಸ್ ನೋಟಿಸ್​ ಕೂಡ ನೀಡಲಾಗಿತ್ತು. ಕೋಲ್ಕತ್ತ ಏರ್​ಪೋರ್ಟ್​ನ ರನ್​ ವೇ ನಿರ್ವಹಣೆ ಮಾರ್ಗಸೂಚಿಯಂತೆ ಆಗಿಲ್ಲ. ಇಲ್ಲಿ ಲೈಟ್​​ಗನ್ನು ಸರಿಯಾಗಿ ಅಳವಡಿಸಿಲ್ಲ ಎಂದು ಡಿಸಿಜಿಎ ಹೇಳಿದೆ.  ಈ ಬಗ್ಗೆ ಭಾರತೀಯ ಏರ್​ಪೋರ್ಟ್​ ಪ್ರಾಧಿಕಾರಿ ಇದುವರೆಗೂ ಏನೂ ಪ್ರತಿಕ್ರಿಯೆ ನೀಡಿಲ್ಲ.ಆದರೆ ಪ್ರಸ್ತುತ ವಿಷಯವನ್ನು ಗಮನಿಸಲು ಆಂತರಿಕ ಸಮಿತಿಯೊಂದನ್ನು ರಚಿಸಿದೆ ಎಂದು ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು