AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ.

ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ.ದಂಡ ವಿಧಿಸಿದ ಡಿಜಿಸಿಎ
ಕೋಲ್ಕತ್ತ ಏರ್​ಪೋರ್ಟ್​
TV9 Web
| Edited By: |

Updated on: Jan 24, 2022 | 7:51 AM

Share

ಕೋಲ್ಕತ್ತದ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (NSCBIA)ಕ್ಕೆ ಭಾರತದ ವಾಯುಯಾನ ನಿಯಂತ್ರಣ ಸಂಸ್ಥೆಯಾಗಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂಪಾಯಿಗಳಷ್ಟು ದಂಡ ವಿಧಿಸಿದೆ. ವಿಮಾನ ನಿಲ್ದಾಣದಲ್ಲಿ ರನ್​ವೇ ನಿರ್ವಹಣೆಯನ್ನು ಸೂಕ್ತವಾಗಿ ಮಾಡದೆ, ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ಈ ದಂಡ ವಿಧಿಸಿದ್ದಾಗಿ ಹೇಳಲಾಗಿದೆ. ಕೆಲವೇ ತಿಂಗಳುಗಳ ಹಿಂದೆ ಡಿಜಿಸಿಎ, ವಿಮಾನ ನಿಲ್ದಾಣಗಳಲ್ಲಿನ ಸುರಕ್ಷತೆ ನಿಯಮ ಪಾಲನೆ ಕುರಿತು ಅಡಿಟಿಂಗ್​ ನಡೆಸಿತ್ತು. ಆಗ ಈ ನೇತಾಜಿ ಸುಭಾಷ್​ ಚಂದ್ರ ಬೋಸ್ ಏರ್​ಪೋರ್ಟ್​​ನಲ್ಲಿ ರನ್​ವೇ ನಿರ್ವಹಣೆ ಸರಿಯಾಗಿ ಮಾಡದೆ, ಗಂಭೀರ ಪ್ರಮಾಣದಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡುಬಂತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಪ್ರಮುಖವಾಗಿ ರನ್​ ವೇಗಳಲ್ಲಿ ಸುರಕ್ಷತೆ ಸಂಬಂಧಪಟ್ಟಂತೆ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ, ಸೂಕ್ತವಾಗಿ ನಿರ್ವಹಣೆ ಮಾಡದೆ ಇದ್ದರೆ, ಅಪಾಯ ಕಟ್ಟಿಟ್ಟ ಬುತ್ತಿ ಎಂದು DGCA ಹೇಳಿದೆ. ಕೋಲ್ಕತ್ತ ಏರ್​ಪೋರ್ಟ್​ಗೆ ಇದಕ್ಕೆ ಸಂಬಂಧಪಟ್ಟಂತೆ ಶೋಕಾಸ್ ನೋಟಿಸ್​ ಕೂಡ ನೀಡಲಾಗಿತ್ತು. ಕೋಲ್ಕತ್ತ ಏರ್​ಪೋರ್ಟ್​ನ ರನ್​ ವೇ ನಿರ್ವಹಣೆ ಮಾರ್ಗಸೂಚಿಯಂತೆ ಆಗಿಲ್ಲ. ಇಲ್ಲಿ ಲೈಟ್​​ಗನ್ನು ಸರಿಯಾಗಿ ಅಳವಡಿಸಿಲ್ಲ ಎಂದು ಡಿಸಿಜಿಎ ಹೇಳಿದೆ.  ಈ ಬಗ್ಗೆ ಭಾರತೀಯ ಏರ್​ಪೋರ್ಟ್​ ಪ್ರಾಧಿಕಾರಿ ಇದುವರೆಗೂ ಏನೂ ಪ್ರತಿಕ್ರಿಯೆ ನೀಡಿಲ್ಲ.ಆದರೆ ಪ್ರಸ್ತುತ ವಿಷಯವನ್ನು ಗಮನಿಸಲು ಆಂತರಿಕ ಸಮಿತಿಯೊಂದನ್ನು ರಚಿಸಿದೆ ಎಂದು ಎಎನ್​ಐ ವರದಿ ಮಾಡಿದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪೂರ್ಣ ಮಾಹಿತಿ ಇಲ್ಲಿದೆ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ