AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಲ್‌ಚೇರ್‌ ಇಲ್ಲದ ಕಾರಣ 80ರ ಹರೆಯದ ವ್ಯಕ್ತಿ ಸಾವು; ಏರ್‌ ಇಂಡಿಯಾಗೆ ₹30 ಲಕ್ಷ ದಂಡ ವಿಧಿಸಿದ ಡಿಜಿಸಿಎ

ಫೆಬ್ರವರಿ 12 ರಂದು ತನ್ನ ಪತ್ನಿಯೊಂದಿಗೆ ನ್ಯೂಯಾರ್ಕ್‌ನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ 80 ವರ್ಷದ ಪ್ರಯಾಣಿಕ, ವೀಲ್‌ಚೇರ್ ಲಭ್ಯವಿಲ್ಲದ ಕಾರಣ 1.5 ಕಿಮೀ ದೂರ ನಡೆದು ಹೃದಯಾಘಾತಕ್ಕೆ ಒಳಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕುಸಿದುಬಿದ್ದು ಸಾವಿಗೀಡಾಗಿದ್ದರು. ಇದಾದ ನಂತರ ಡಿಜಿಸಿಎ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿತ್ತು.

ವೀಲ್‌ಚೇರ್‌ ಇಲ್ಲದ ಕಾರಣ 80ರ ಹರೆಯದ ವ್ಯಕ್ತಿ ಸಾವು; ಏರ್‌ ಇಂಡಿಯಾಗೆ ₹30 ಲಕ್ಷ ದಂಡ ವಿಧಿಸಿದ ಡಿಜಿಸಿಎ
ಏರ್ ಇಂಡಿಯಾ
ರಶ್ಮಿ ಕಲ್ಲಕಟ್ಟ
|

Updated on:Feb 29, 2024 | 6:15 PM

Share

ದೆಹಲಿ ಫೆಬ್ರವರಿ 29: ಮುಂಬೈ ವಿಮಾನ ನಿಲ್ದಾಣದಲ್ಲಿ (Mumbai airport) “ಸಾಕಷ್ಟು ಸಂಖ್ಯೆಯ ಗಾಲಿಕುರ್ಚಿಗಳನ್ನು ಹೊಂದಿಲ್ಲ” ಎಂಬ ಕಾರಣಕ್ಕಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಗುರುವಾರ ಏರ್ ಇಂಡಿಯಾಗೆ (Air India) ರೂ.30 ಲಕ್ಷ ದಂಡ ವಿಧಿಸಿದೆ. ಸರಿಯಾದ ಸಮಯಕ್ಕೆ ಗಾಲಿ ಕುರ್ಚಿ ಸಿಗದ ಕಾರಣ ನಡೆದು ಹೋಗಬೇಕಾಗಿ ಬಂದಿದ್ದರಿಂದ ಈ ತಿಂಗಳ ಆರಂಭದಲ್ಲಿ ಹಿರಿಯ ಪ್ರಯಾಣಿಕರೊಬ್ಬರು ಸಾವಿಗೀಡಾಗಿದ್ದರು. ಮೇಲೆ ತಿಳಿಸಲಾದ ನಾಗರಿಕ ವಾಯುಯಾನ ಅಗತ್ಯಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಏರ್‌ಕ್ರಾಫ್ಟ್ ನಿಯಮಗಳು, 1937 ರ ಪ್ರಕಾರ ಏರ್ ಇಂಡಿಯಾಕ್ಕೆ 30 ಲಕ್ಷ ರೂಪಾಯಿ ಆರ್ಥಿಕ ದಂಡವನ್ನು ವಿಧಿಸಲಾಗಿದೆ ಎಂದು DGCA ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಮ್ಮ ಪ್ರಯಾಣದ ಸಮಯದಲ್ಲಿ ವಿಮಾನದಿಂದ ಇಳಿಯುವಾಗ ಅಥವಾ ಇಳಿಯುವಾಗ ಸಹಾಯದ ಅಗತ್ಯವಿರುವ ಪ್ರಯಾಣಿಕರಿಗೆ ಸಾಕಷ್ಟು ಸಂಖ್ಯೆಯ ಗಾಲಿಕುರ್ಚಿಗಳು ಲಭ್ಯವಿವೆ ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಲಾಗಿದೆ” ಎಂದು ಅದು ಹೇಳಿದೆ.  ಈ ಬಗ್ಗೆ ಏರ್ ಇಂಡಿಯಾದಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗುತ್ತಿದೆ.

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸಾಕಷ್ಟು ಗಾಲಿಕುರ್ಚಿಗಳನ್ನು ಇರಿಸಿಕೊಳ್ಳಲು ನಾಗರಿಕ ವಿಮಾನಯಾನ ನಿಯಂತ್ರಕರು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸಲಹೆಯನ್ನು ನೀಡಿದ್ದಾರೆ. ಫೆಬ್ರವರಿ 12 ರಂದು ತನ್ನ ಪತ್ನಿಯೊಂದಿಗೆ ನ್ಯೂಯಾರ್ಕ್‌ನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ 80 ವರ್ಷದ ಪ್ರಯಾಣಿಕ, ವೀಲ್‌ಚೇರ್ ಲಭ್ಯವಿಲ್ಲದ ಕಾರಣ 1.5 ಕಿಮೀ ದೂರ ನಡೆದು ಹೃದಯಾಘಾತಕ್ಕೆ ಒಳಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕುಸಿದುಬಿದ್ದು ಸಾವಿಗೀಡಾಗಿದ್ದರು.

ಡಿಜಿಸಿಎ ನಂತರ ಕಾರ್ ಸೆಕ್ಷನ್ 3, ಸೀರೀಸ್ ‘ಎಂ’, ಭಾಗ I ರ ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಿತ್ತು. “ವಿಮಾನ ಪ್ರಯಾಣಿಕರಲ್ಲಿ- ಅಂಗವಿಕಲ ವ್ಯಕ್ತಿಗಳು ಅಥವಾ ಚಲನಶೀಲತೆ ಕಡಿಮೆಯಾದ ವ್ಯಕ್ತಿಗಳಿಗೆ ಅಗತ್ಯ ಸೌಲಭ್ಯ ಒದಗಿಸದೇ ಇದ್ದರೆ ಇದು ವಿಮಾನ ನಿಯಮಗಳು, 1937 ರ ಉಲ್ಲಂಘನೆಯಾಗಿದೆ.

ಡಿಜಿಸಿಎಗೆ ವಿಮಾನಯಾನ ಸಂಸ್ಥೆ ಫೆಬ್ರವರಿ 20 ರಂದು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿತ್ತು, ವಯಸ್ಸಾದ ಪ್ರಯಾಣಿಕರು ಮತ್ತೊಂದು ಗಾಲಿಕುರ್ಚಿಗಾಗಿ ಕಾಯುವ ಬದಲು ತನ್ನ ಹೆಂಡತಿಯೊಂದಿಗೆ ನಡೆದುಕೊಂಡು ಹೋದರು ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ವಿಮಾನಯಾನ ಸಂಸ್ಥೆಯು ವಯಸ್ಸಾದ ಪ್ರಯಾಣಿಕರಿಗೆ ಯಾವುದೇ ಗಾಲಿಕುರ್ಚಿಯನ್ನು ಒದಗಿಸದ ಕಾರಣ CAR ಯ ಅನುಸರಣೆಯನ್ನು ತೋರಿಸಲು ವಿಫಲವಾಗಿದೆ  ಎಂದು ಡಿಜಿಸಿಎ ಹೇಳಿದೆ.

ಇದನ್ನೂ ಓದಿ: ವೀಲ್‌ಚೇರ್ ಕೊರತೆ; ಏರ್ ಇಂಡಿಯಾಗೆ ಡಿಜಿಸಿಎ ಶೋಕಾಸ್ ನೋಟಿಸ್

ತಪ್ಪು ಮಾಡಿದ ಉದ್ಯೋಗಿ(ಗಳ) ವಿರುದ್ಧ ಏರ್‌ಲೈನ್ಸ್ ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ಏರ್ ಇಂಡಿಯಾ ತಿಳಿಸಿಲ್ಲ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಯಾವುದೇ ಸರಿಪಡಿಸುವ ಕ್ರಮಗಳನ್ನು ಸಲ್ಲಿಸಲು ವಿಮಾನಯಾನ ಸಂಸ್ಥೆ ವಿಫಲವಾಗಿದೆ ಎಂದು ಡಿಜಿಸಿಎ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Thu, 29 February 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!